Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕಾರ್ಪೋರೇಟ್ ತೆರಿಗೆ ದರ ಶೇ.22ಕ್ಕೆ...

​ಕಾರ್ಪೋರೇಟ್ ತೆರಿಗೆ ದರ ಶೇ.22ಕ್ಕೆ ಇಳಿಕೆ: ನಿರ್ಮಲಾ ಸೀತಾರಾಮನ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ20 Sept 2019 12:51 PM IST
share
​ಕಾರ್ಪೋರೇಟ್ ತೆರಿಗೆ ದರ ಶೇ.22ಕ್ಕೆ ಇಳಿಕೆ: ನಿರ್ಮಲಾ ಸೀತಾರಾಮನ್ ಘೋಷಣೆ

 ಹೊಸದಿಲ್ಲಿ, ಸೆ.20: ಆರ್ಥಿಕ ಹಿಂಜರಿಕೆ ತಡೆದು ಆರ್ಥಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶೀಯ ಸಂಸ್ಥೆಗಳ ಕಾರ್ಪೊರೇಟ್ ತೆರಿಗೆ ದರವನ್ನು ಇಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದರಿಂದ ಸರಕಾರಕ್ಕೆ ವಾರ್ಷಿಕ 1.45 ಲಕ್ಷ ಕೋಟಿ ಆದಾಯ ನಷ್ಟವಾಗಲಿದೆ ಎಂದು ಸರಕಾರ ತಿಳಿಸಿದೆ.

ದೇಶೀಯ ಕಂಪೆನಿಗಳಿಗೆ ಕಾರ್ಪೊರೇಟ್ ತೆರಿಗೆ ದರವನ್ನು ಶೇ.35ರಿಂದ ಶೇ.25.2ಕ್ಕೆ ಇಳಿಸಲು ಹಾಗೂ ಅಕ್ಟೋಬರ್ 1ರ ಬಳಿಕ ಅಸ್ತಿತ್ವಕ್ಕೆ ಬಂದಿರುವ ಉತ್ಪಾದನಾ ಸಂಸ್ಥೆಗಳಿಗೆ ಶೇ.15ರ ಹೊಸ ತೆರಿಗೆ ದರ ನಿಗದಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಸರಕಾರ ಈ ನಿರ್ಧಾರ ಪ್ರಕಟಿಸುತ್ತಿರುವಂತೆಯೇ ಶೇರುಮಾರುಕಟ್ಟೆ ವ್ಯವಹಾರದಲ್ಲಿ ಭಾರೀ ಚೇತರಿಕೆ ಕಂಡು ಬಂದಿದೆ.

ಹೊಸ ತೆರಿಗೆ ಶ್ರೇಣಿ 2019ರ ಎಪ್ರಿಲ್ 1ರಿಂದ ಅನ್ವಯವಾಗಲಿದೆ. 1961ರ ಆದಾಯ ತೆರಿಗೆ ಕಾಯ್ದೆಗೆ ಆಧ್ಯಾದೇಶದ ಮೂಲಕ ತಿದ್ದುಪಡಿ ಮಾಡಿ ಈ ಬದಲಾವಣೆಯನ್ನು ಜಾರಿಗೊಳಿಸಲಾಗುವುದು. ಮುಂಗಡ ತೆರಿಗೆ ಪಾವತಿಸಿದ್ದರೆ ಅದನ್ನು ಹೊಂದಿಸಲಾಗುವುದು ಎಂದು ಸರಕಾರ ತಿಳಿಸಿದೆ.

ಜಿಎಸ್‌ಟಿ ಸಮಿತಿಯ ಸಭೆಗೂ ಮುನ್ನ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಇತರ ಯಾವುದೇ ವಿನಾಯಿತಿ ಅಥವಾ ರಿಯಾಯಿತಿ ಪಡೆದಿರದ ದೇಶೀಯ ಸಂಸ್ಥೆಗಳಿಗೆ ಕಾರ್ಪೊರೇಟ್ ತೆರಿಗೆ ದರ ಶೇ.22 ಆಗಿರುತ್ತದೆ. ಉಪಕರ, ಮೇಲ್ತೆರಿಗೆ ಸೇರಿದರೆ ಇಂತಹ ಸಂಸ್ಥೆಗಳಿಗೆ ಇನ್ನು ಮುಂದೆ ಶೇ.25.17 ತೆರಿಗೆ ಬೀಳಲಿದೆ. ಅಲ್ಲದೆ ಶೇ.22ರ ತೆರಿಗೆ ಶ್ರೇಣಿಯನ್ನು ಆಯ್ಕೆ ಮಾಡುವ ಸಂಸ್ಥೆಗಳು ಕನಿಷ್ಟ ಪರ್ಯಾಯ ತೆರಿಗೆ(ಎಂಎಟಿ) ಪಾವತಿಸಬೇಕಿಲ್ಲ ಎಂದು ವಿವರಿಸಿದರು.

ಭಾರತದಲ್ಲಿ 400 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸುವ ಸಂಸ್ಥೆಗಳಿಗೆ ಇದುವರೆಗೆ ಅಧಿಕೃತವಾಗಿ ಶೇ.30 ಕಾರ್ಪೊರೇಟ್ ತೆರಿಗೆ ವಿಧಿಸಲಾಗುತ್ತಿದ್ದರೂ ವಿವಿಧ ರಿಯಾಯಿತಿ ಮತ್ತು ವಿನಾಯಿತಿಯ ಬಳಿಕ ವಿವಿಧ ವಿಭಾಗಗಳಡಿ ಶೇ.24ರಿಂದ ಶೇ.28ರಷ್ಟು ಪ್ರಮಾಣದ ತೆರಿಗೆಯನ್ನು ಪಾವತಿಸಬೇಕಾಗುತ್ತಿತ್ತು. ಇದು ಇನ್ನು ಮುಂದೆ ಶೇ.25.2ಕ್ಕೆ ಇಳಿಯಲಿದೆ.

400 ಕೋಟಿ ರೂ.ಗಿಂತ ಕಡಿಮೆ ವಾರ್ಷಿಕ ವಹಿವಾಟು ಹೊಂದಿರುವ ಸಂಸ್ಥೆಗಳು ಇದುವರೆಗೆ ಶೇ.25 ಕಾರ್ಪೊರೇಟ್ ತೆರಿಗೆ ವಿಭಾಗದಲ್ಲಿದ್ದವು.

ಸೆಕ್ಯುರಿಟಿ ವ್ಯವಹಾರ ತೆರಿಗೆ ಪಾವತಿಸಬೇಕಿರುವ ಸಂಸ್ಥೆಗಳ ಇಕ್ವಿಟಿ ಶೇರುಗಳ ಮಾರಾಟದಿಂದ ಬರುವ ಬಂಡವಾಳ ಲಾಭದ ಮೇಲೆ ವರ್ಧಿತ ತೆರಿಗೆ ವಿಧಿಸದಿರಲೂ ಸರಕಾರ ನಿರ್ಧರಿಸಿದೆ(ಬಜೆಟ್‌ನಲ್ಲಿ ಬಂಡವಾಳ ಲಾಭದ ಮೇಲಿನ ಸರ್ಚಾರ್ಜ್ ಅನ್ನು ಹೆಚ್ಚಿಸಲಾಗಿತ್ತು). ಇದು ಶೇರು ಮಾರುಕಟ್ಟೆ ವ್ಯವಹಾರಕ್ಕೆ ಹೆಚ್ಚಿನ ಉತ್ತೇಜನ ನೀಡಿದೆ. ಜೊತೆಗೆ, ಜುಲೈ 5ರ ಮುನ್ನ ಶೇರುಗಳ ಮರುಖರೀದಿ ಘೋಷಿಸಿದ್ದ ಲಿಸ್ಟೆಡ್ ಸಂಸ್ಥೆಗಳ ಮೇಲೆ ಸೂಪರ್ ರಿಚ್ ತೆರಿಗೆ ವಿಧಿಸುವುದಿಲ್ಲ ಎಂದೂ ಸರಕಾರ ತಿಳಿಸಿದೆ.

ಜೂನ್‌ಗೆ ಅಂತ್ಯಗೊಂಡ ತ್ರೈಮಾಸಿಕ ಅವಧಿಯಲ್ಲಿ ಆರ್ಥಿಕ ಅಭಿವೃದ್ಧಿಯ ಗತಿ ಕಳೆದ 6 ವರ್ಷಗಳಲ್ಲೇ ಅತ್ಯಂತ ಕನಿಷ್ಟ ಮಟ್ಟವಾದ ಶೇ.5ಕ್ಕೆ ಕುಸಿದ ಹಿನ್ನೆಲೆಯಲ್ಲಿ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಲು ಕೇಂದ್ರ ಸರಕಾರ ಕೈಗೊಂಡಿರುವ ಸರಣಿ ಕ್ರಮಗಳ ಸಾಲಿನಲ್ಲಿ ಕಾರ್ಪೊರೇಟ್ ತೆರಿಗೆ ಕಡಿತ ಹೊಸ ಉಪಕ್ರಮವಾಗಿದೆ.

ಏರಿಕೆ ಕಂಡ ಸೆನ್ಸೆಕ್ಸ್

ಕಾರ್ಪೊರೇಟ್ ತೆರಿಗೆ ಇಳಿಸುವ ಸರಕಾರದ ಘೋಷಣೆ ಹೊರಬಿದ್ದ ಬಳಿಕ ಶೇರುಪೇಟೆಯಲ್ಲಿ ಭಾರೀ ಚೇತರಿಕೆ ಕಂಡುಬಂದಿದೆ. ಶುಕ್ರವಾರ ಬೆಳಗ್ಗಿನ ಅವಧಿಯಲ್ಲಿ ಬಾಂಬೆ ಸ್ಟಾಕ್‌ಎಕ್ಸ್‌ಚೇಂಜ್ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 2,100 ಅಂಕ ಏರಿಕೆಯಾಗಿದೆ. ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ 11,250ರ ಗಡಿ ದಾಟಿದೆ.

ಜೊತೆಗೆ ರೂಪಾಯಿ ವೌಲ್ಯವೂ ಚೇತರಿಸಿಕೊಂಡಿದ್ದು ಡಾಲರ್ ಎದುರು ರೂಪಾಯಿ ವೌಲ್ಯ 66 ಪೈಸೆಯಷ್ಟು ಹೆಚ್ಚಿದ್ದು 70.68ಕ್ಕೆ ತಲುಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X