ಹೈಕೋರ್ಟ್ಗೆ ನಾಲ್ವರು ನ್ಯಾಯಮೂರ್ತಿಗಳ ನೇಮಕ
ಬೆಂಗಳೂರು, ಸೆ.20: ಕರ್ನಾಟಕ ಹೈಕೋರ್ಟ್ಗೆ ವಕೀಲರ ವೃಂದದಿಂದ ನಾಲ್ವರನ್ನು ನೂತನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂ ಕಳುಹಿಸಿದ್ದ ಶಿಫಾರಸು ಅಂಗೀಕರಿಸಿ ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಷ್ ಚಂದ್ರಕಿಣಗಿ, ಸೂರಜ್ ಗೋವಿಂದರಾಜ್ ಮತ್ತು ಸಚಿನ್ ಶಂಕರ್ ಮಗದಂ ಅವರನ್ನು 2 ವರ್ಷಗಳ ಅವಧಿಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ಹಾಲಿ 31 ನ್ಯಾಯಮೂರ್ತಿಗಳು ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ವರ ನೇಮಕಾತಿಯಿಂದ ನ್ಯಾಯಮೂರ್ತಿಗಳ ಸಂಖ್ಯೆ 35ಕ್ಕೆ ಏರಲಿದೆ.
Next Story