Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುವಲ್ಲಿ...

ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಜಸ್ಟೀಸ್ ಎ.ವಿ.ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ20 Sept 2019 9:28 PM IST
share
ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಜಸ್ಟೀಸ್ ಎ.ವಿ.ಚಂದ್ರಶೇಖರ್

ಉಡುಪಿ, ಸೆ.20:ದೇಶದ ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದಿದೆ. ಅದೇ ರೀತಿ ನ್ಯಾಯಾಂಗವನ್ನು ಸದೃಢಗೊಳಿಸುವಲ್ಲಿ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರೂ, ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿಯ ನಿವೃತ್ತ ಸದಸ್ಯರೂ ಆದ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅಭಿಪ್ರಾಯ ಪಟ್ಟಿದ್ದಾರೆ.

ಉಡುಪಿ ವಕೀಲರ ಸಂಘದ ವತಿಯಿಂದ ವಕೀಲರ ಸಂಘದ ಆವರಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು 'ಪರಿಣಾಮಕಾರಿ ವಕಾಲತ್ತು: ನೈಪುಣ್ಯತೆ ಮತ್ತು ತಂತ್ರಗಳು' ಎಂಬ ವಿಷಯದ ಕುರಿತು ಯುವ ವಕೀಲರನ್ನುದ್ದೇಶಿಸಿ ಮಾತನಾಡುತಿದ್ದರು.

ಇಂದು ನ್ಯಾಯಾಂಗ ಸೇವೆಗೆ ಉತ್ತಮ ಅವಕಾಶಗಳಿವೆ. ನಿಮ್ಮ ಕಕ್ಷಿದಾರನ ಪರವಾಗಿ ಉತ್ತಮವಾಗಿ ವಾದ ಮಾಡಿ. ಆದರೆ ಉತ್ತಮ ವಕಾಲತಿಗೆ ಅಡ್ಡದಾರಿಗಳಿಲ್ಲ. ಮಧ್ಯರಾತ್ರಿ ಹಣತೆ ಬೆಳಕು ಆರುವ ತನಕ ಕೆಲಸ ಮಾಡಿದರೆ (ಕೇಸಿನ ಅಧ್ಯಯನ) ನೀವೊಬ್ಬ ಉತ್ತಮ, ಯಶಸ್ವಿ ನ್ಯಾಯವಾದಿ ಎನಿಸಿಕೊಳ್ಳ ಬಹುದು ಎಂದವರು ನುಡಿದರು.

ಅದೇ ರೀತಿ ಒಳ್ಳೆಯ ವಕೀಲರನ್ನು ಬೆಳೆಸುವ ಜವಾಬ್ದಾರಿಯೂ ನ್ಯಾಯಾಧೀಶರ ಮೇಲೆ ಇರುತ್ತದೆ. ಒಬ್ಬ ಒಳ್ಳೆಯ ವಕೀಲ, ಉತ್ತಮ ನ್ಯಾಯಾಧೀಶರೂ ಆಗುತ್ತಾರೆ ಎಂದು ಉಡುಪಿ ಜಿಲ್ಲೆಯಲ್ಲಿ ಸುಮಾರು ಮೂರು ವರ್ಷಗಳ ಕಾಲ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಜನಪ್ರಿಯರಾದ ಚಂದ್ರಶೇಖರ್ ನುಡಿದರು.

ನ್ಯಾಯಾಧೀಶರಿಗೆ ತೀರ್ಪು ಬರೆಯುವುದು ಒಂದು ಕಲೆ. ಇದೊಂದು ನಿರಂತರ ಪ್ರಕ್ರಿಯೆಯಲ್ಲಿ ಬರುವಂತಾದ್ದು. ಒಂದು ಹಿಸ್ಸೆ ದಾವೆಯ ತೀರ್ಪು ಬರೆಯಲು ಹಲವು ಕಾನೂನುಗಳ ಅರಿವಿರಬೇಕು. ಇದಕ್ಕಾಗಿ ಕಾನೂನಿನ ಸುಧೀರ್ಘ ಅಧ್ಯಯನ ಮಾಡಿರಬೇಕು. ಈ ನೈಪುಣ್ಯತೆ, ಕೌಶಲ್ಯ ಒಂದೆರಡು ದಿನಗಳಲ್ಲಿ ಬರುವುದಿಲ್ಲ. ನ್ಯಾಯಾಧೀಶನೊಬ್ಬ ಧರ್ಮದ ಒರೆಹಚ್ಚಿ ನ್ಯಾಯದ ಚೌಕಟ್ಟಿನಲ್ಲಿ ತೀರ್ಪು ನೀಡಬೇಕು ಎಂದು ಎ.ವಿ.ಚಂದ್ರಶೇಖರ್, ವಿದ್ಯಾರ್ಥಿಗಳಿಗೆ, ಯುವ ವಕೀಲರಿಗೆ ಕಿವಿಮಾತು ಹೇಳಿದರು.

ನ್ಯಾಯಧೀಶರಿಗೆ ಹಾಗೂ ನ್ಯಾಯವಾದಿಗೆ ಸಮಾಜದ ಪರಿಚಯ ಚೆನ್ನಾಗಿರ ಬೇಕು. ಸತ್ಯಶೋಧನೆ ನಡೆಸುವ ನಿರಂತರ ಪ್ರಯತ್ನವನ್ನು ಅವರು ಮಾಡಬೇಕು. ಇಬ್ಬರ ಕಡೆಯಿಂದಲೂ ತಪ್ಪುಗಳಾಗಬಹುದು, ಆದರೆ ಪ್ರಮಾದವಾಗದಂತೆ ಎಚ್ಚರವನ್ನು ವಹಿಸಬೇಕು. ಯಾವತ್ತೂ ಅವಿಡೆನ್ಸ್ ಆ್ಯಕ್ಟ್ ನಿಮ್ಮ ಕೈಯಲ್ಲಿರಬೇಕು ಎಂದೂ ಅವರು ಹೇಳಿದರು.

ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಎಂ.ಜೋಷಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿವೇಕಾನಂದ ಪಂಡಿತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ನಿರಂಜನ್ ಹೆಗ್ಡೆ ಹಾಗೂ ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸನತ್‌ಕುಮಾರ್ ಜೈನ್ ಉಪಸ್ಥಿತರಿದ್ದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರೆ, ಸಂಘದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್‌ಕುಮಾರ್ ವಂದಿಸಿದರೆ, ವಕೀಲರಾದ ರಾಜಶೇಖರ ಶಾಮರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X