Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಣ್ಣ ಪ್ರಮಾಣದ ಮಾಲಿನ್ಯದ ಪರಿಣಾಮ ಇಡೀ...

ಸಣ್ಣ ಪ್ರಮಾಣದ ಮಾಲಿನ್ಯದ ಪರಿಣಾಮ ಇಡೀ ವಿಶ್ವದ ವ್ಯವಸ್ಥೆ ಮೇಲೆ: ಹಿರಿಯ ಭೂವಿಜ್ಞಾನಿ ಡಾ.ರಘು ಮುರ್ತುಗುಡ್ಡೆ

ವಾರ್ತಾಭಾರತಿವಾರ್ತಾಭಾರತಿ20 Sept 2019 9:33 PM IST
share
ಸಣ್ಣ ಪ್ರಮಾಣದ ಮಾಲಿನ್ಯದ ಪರಿಣಾಮ ಇಡೀ ವಿಶ್ವದ ವ್ಯವಸ್ಥೆ ಮೇಲೆ: ಹಿರಿಯ ಭೂವಿಜ್ಞಾನಿ ಡಾ.ರಘು ಮುರ್ತುಗುಡ್ಡೆ

ಉಡುಪಿ, ಸೆ.20: 1980ರ ದಶಕದ ಬಳಿಕ ಜಾಗತಿಕ ತಾಪಮಾನ ಏರುಗತಿ ಯಲ್ಲಿ ಸಾಗುತ್ತಿದೆ. ಸಣ್ಣ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಮಾಡಿದರೂ ಅದರ ಪರಿಣಾಮ ಇಡೀ ವಿಶ್ವದ ವ್ಯವಸ್ಥೆ ಮೇಲೆ ಆಗುತ್ತದೆ ಎಂದು ಅಮೆರಿಕದ ಮೇರಿಲ್ಯಾಂಡ್ ವಿವಿಯ ಹಿರಿಯ ಭೂಜ್ಞಾನಿ ಡಾ.ರಘು ಮುರ್ತುಗುಡ್ಡೆ ಹೇಳಿದ್ದಾರೆ.

ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್, ಎಂಐಟಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು 'ಹವಾಮಾನ ಬದಲಾವಣೆ, ಸುಸ್ಥಿರತೆ ಮತ್ತು ಜಾಗತಿಕ ಸನ್ನಿವೇಶ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

1950ರ ಬಳಿಕ ವಾತಾವರಣದಲ್ಲಿ ಕಾರ್ಬನ್ ಡೈ ಆಕ್ಸೈಡ್ ಅಂಶ ಏರುಪೇರು ಆಗುತ್ತಿದೆ. 1960ರ ಬಳಿಕ ಇದು ಏರುಗತಿಯಲ್ಲಿದೆ. ಭೂಮಿಯಲ್ಲಿ ಸಾಗರ ದಂತಹ ವ್ಯವಸ್ಥೆಗಳಿರುವುದರಿಂದ ಉತ್ಪಾದನೆಯಾಗುವ ವಿಷಾಂಶಗಳ ಪರಿಣಾಮಗಳು ಅಷ್ಟೊಂದು ಪರಿಣಾಮ ಬೀರುತ್ತಿಲ್ಲ ಎಂದರು.

ಸಕಾಲದಲ್ಲಿ ಮಳೆ ಬಾರದೆ ಇರುವುದು, ಮಳೆ ಬಂದರೂ ಒಂದೇ ಸಮನೆ ಬರುವುದು, ಒಂದು ಕಡೆ ಹೆಚ್ಚು ಮಳೆ ಬಂದರೆ, ಇನ್ನಾವುದೋ ಒಂದು ಕಡೆ ಕಡಿಮೆ ಮಳೆಯಾಗುವುದನ್ನು ನಾವು ಅನುಭಸುತ್ತಿದ್ದೇವೆ. ಬಹುತೇಕ ಎಲ್ಲ ದೇಶಗಳೂ ಪರಿಸರ ನಾಶವನ್ನು ನಿರ್ಲಕ್ಷಿಸಿವೆ. ಇದರಿಂದ ಒಟ್ಟಾರೆ ಮಾನವ ಸುರಕ್ಷಿತವಾಗಿಲ್ಲ. ಹವಾಮಾನ ಸಮಸ್ಯೆ ಮುಂದೊಂದು ದಿನ ಭಾರೀ ಅಪಾಯಗಳನ್ನು ಸೃಷ್ಟಿಸಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

ಹವಾಮಾನ ಬದಲಾವಣೆ ವಿಜ್ಞಾನಕ್ಕೆ ಸಂಬಂಧಿಸಿದೆಯಾದರೂ ಇದರ ಪರಿಣಾಮ ರಾಜಕೀಯ ಮತ್ತು ಸಾಮಾಜಿಕವಾಗಿರುತ್ತದೆ. ಇದು ಹಣಕಾಸಿನ ಮೇಲೂ ಪರಿಣಾಮ ಬೀರುತ್ತದೆ. ಗ್ರೀನ್‌ಹೌಸ್ ಪರಿಣಾಮ ಪ್ರಕೃತಿಯ ಮೇಲೂ ಆಗುತ್ತಿದೆ ಎಂದರು.

ಸುಮಾರು 4.5 ಬಿಲಿಯ ವರ್ಷಗಳ ಹಿಂದೆ ಭೂಮಿ ಅಸ್ತಿತ್ವಕ್ಕೆ ಬಂತು. ಇದರ ಮೇಲೆ ಜೀವವಿಕಸನದಲ್ಲಿ ಕೊನೆಯಲ್ಲಿ ಜನಿಸಿದ ತಳಿಯೇ ಮಾನವ. ಈಗ ಮಾನವ ಚಂದ್ರ, ಮಂಗಳನಲ್ಲಿ ಹೋಗಿರಬಹುದು. ಮಾನವ ಎಲ್ಲೆಲ್ಲಾ ಇದ್ದಾನೋ ಅಲ್ಲೆಲ್ಲಾ ದಬ್ಬಾಳಿಕೆ ನಡೆಸಿದ್ದಾನೆ. ಚಿಂತನೆ, ಕ್ರಿಯಾಶೀಲತೆಯ ಜತೆ ಪರಿಸರ ಹಾನಿಗೂ ಮಾನವ ಕಾರಣನಾಗುತ್ತಿದ್ದಾನೆ ಎಂದು ಮುರ್ತುಗುಡ್ಡೆ ನುಡಿದರು.

ಎಂಐಟಿ ಜಂಟಿ ನಿರ್ದೇಶಕ ಡಾ.ಬಿಎಚ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ನಿರ್ದೇಶಕ ವರದೇಶ ಹಿರೆಗಂಗೆ ಸ್ವಾಗತಿಸಿ ಶ್ರೀರಾಜ್ ಗುಡಿ ಪರಿಚಯಿಸಿದರು.

ಪರಿಸರ ಮಾಲಿನ್ಯದಲ್ಲಿ ಅಮೆರಿಕ ಅಗ್ರಸ್ಥಾನಿ
ಪರಿಸರ ಮಾಲಿನ್ಯದಲ್ಲಿ ಅಮೆರಿಕ, ಯೂರೋಪ್ ಮೊದಲ ಸ್ಥಾನದಲ್ಲಿವೆ. ಅಲ್ಲಿ ಪ್ರತಿಯೊಬ್ಬ ವರ್ಷಕ್ಕೆ 20 ಟನ್ ಪರಿಸರ ಮಾಲಿನ್ಯವನ್ನು ಹೊರ ಸೂಸುತ್ತಾನೆ. ಭಾರತದಲ್ಲಿ ತಲಾ 2 ಟನ್, ಚೀನಾದಲ್ಲಿ ತಲಾ 7.8 ಟನ್ ಇದೆ. ಭಾರತ ಮತ್ತು ಚೀನಾದಲ್ಲಿ ಜನಸಂಖ್ಯೆ ಹೆಚ್ಚಿಗೆ ಇರುವುದರಿಂದ ಕಾರ್ಬನ್ ಡೈ ಆಕೆ್ಸಡ್ ಹೊರಸೂಸುವಿಕೆ ಹೆಚ್ಚಿಗೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X