Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ತಿಂಗಳ ಅವಧಿಯಲ್ಲಿ 8 ಪತ್ರಕರ್ತರ...

ಒಂದು ತಿಂಗಳ ಅವಧಿಯಲ್ಲಿ 8 ಪತ್ರಕರ್ತರ ವಿರುದ್ಧ ಉತ್ತರ ಪ್ರದೇಶ ಸರಕಾರದ ಗದಾಪ್ರಹಾರ

ಅವ್ಯವಸ್ಥೆ, ಸಮಸ್ಯೆಗಳ ವರದಿ ಮಾಡಿದ್ದೇ ತಪ್ಪಾಯ್ತು!

ವಾರ್ತಾಭಾರತಿವಾರ್ತಾಭಾರತಿ21 Sept 2019 3:28 PM IST
share
ಒಂದು ತಿಂಗಳ ಅವಧಿಯಲ್ಲಿ 8 ಪತ್ರಕರ್ತರ ವಿರುದ್ಧ ಉತ್ತರ ಪ್ರದೇಶ ಸರಕಾರದ ಗದಾಪ್ರಹಾರ

ಲಕ್ನೋ, ಸೆ.21: ಉತ್ತರ ಪ್ರದೇಶದ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದ ವೇಳೆ ರೋಟಿ ಹಾಗೂ ಉಪ್ಪು ನೀಡುತ್ತಿರುವ ವೀಡಿಯೋ  ಬಹಿರಂಗಗೊಳಿಸಿದ ಪತ್ರಕರ್ತ ಪವನ್ ಜೈಸ್ವಾಲ್ ವಿರುದ್ಧ ಆಗಸ್ಟ್ ತಿಂಗಳಲ್ಲಿ ಕಾನೂನು ಕ್ರಮ ಕೈಗೊಂಡಿದ್ದ ರಾಜ್ಯದ ಆಡಳಿತ ಈ ಘಟನೆಯ ನಂತರ ಸೆಪ್ಟೆಂಬರ್ ತಿಂಗಳಲ್ಲಿ ಕನಿಷ್ಠ ಎಂಟು ಮಂದಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ.

ಸೆಪ್ಟಂಬರ್ 7ರಂದು  ಬಿಜ್ನೋರ್ ಪೊಲೀಸರು ಜಾತಿ ತಾರತಮ್ಯ ಪ್ರಕರಣಗಳ ವರದಿ ಮಾಡಿದ ಐದು ಮಂದಿ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಅವರಲ್ಲಿ  ಇಬ್ಬರು ಪತ್ರಕರ್ತರಾದ ಆಇಷ್ ತೋಮರ್ ಹಾಗೂ ಶಕೀಲ್ ಅಹ್ಮದ್ ದೈನಿಕ್ ಜಾಗರಣ್ ಹಾಗೂ ನ್ಯೂಸ್ 18ನ ಪತ್ರಕರ್ತರು.

ವಾಲ್ಮೀಕಿ ಕುಟುಂಬವೊಂದಕ್ಕೆ ಗ್ರಾಮದ ಕೈಪಂಪಿನಿಂದ  ನೀರು ಎತ್ತಲು ನಿಷೇಧ ಹೇರಿದ ನಂತರ ಕುಟುಂಬ ತನ್ನ ಮನೆಯನ್ನು ಮಾರಾಟ ಮಾಡಲು ಬಯಸಿದ್ದ ವರದಿಯನ್ನು ಈ ಪತ್ರಕರ್ತರು ಪ್ರಕಟಿಸಿದ್ದರು. ಈ ಪ್ರಕರಣವನ್ನು ಗ್ರಾಮ ಮುಖ್ಯಸ್ಥ ಇತ್ಯರ್ಥಪಡಿಸಿದ್ದರೂ ಪತ್ರಕರ್ತರು ತಾವಾಗಿಯೇ ಸಂತ್ರಸ್ತ ಕುಟುಂಬ ತನ್ನ ಮನೆ ಮಾರಾಟ ಮಾಡಲಿದೆ ಎಂದು ಹೇಳಿಕೊಂಡಿದ್ದರು  ಎಂದು ಪೊಲೀಸರು ಆರೋಪಿಸಿದ್ದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ನಡೆಸಿದ  ತನಿಖೆಯೂ ಪತ್ರಕರ್ತರು `ಸುಳ್ಳು' ಹಾಗೂ ಋಣಾತ್ಮಕ ಸುದ್ದಿ ಹರಡುತ್ತಿದ್ದಾರೆಂಬ ತೀರ್ಮಾನಕ್ಕೆ ಬಂದಿತ್ತು. ಈ ಘಟನೆಯ ವಿರುದ್ಧ ಸ್ಥಳೀಯ ಪತ್ರಕರ್ತರು ಸಿಡಿದೆದ್ದಿದ್ದರು.

ಸೆಪ್ಟೆಂಬರ್ 7ರಂದು ಆಝಂಘರ್ ಪೊಲೀಸರು ಪತ್ರಕರ್ತ ಸಂತೋಷ್ ಜೈಸ್ವಾಲ್ ಅವರನ್ನು ಬಂಧಿಸಿದ್ದರು. ಸರಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ನೆಲ ಒರೆಸುತ್ತಿರುವ ಫೋಟೋಗಳನ್ನು ಅವರು ಕ್ಲಿಕ್ಕಿಸಿದ ನಂತರ ಶಾಲಾ  ಪ್ರಾಂಶುಪಾಲರು ವಿರೋಧಿಸಿದ್ದರು. ಆಗ ಜೈಸ್ವಾಲ್ ಅವರೇ ಪೊಲೀಸರಿಗೆ ಕರೆ ಮಾಡಿ ನಡೆದಿದ್ದನ್ನು ವಿವರಿಸಿದ್ದರು. ಆದರೆ ಶಾಲಾ ಪ್ರಾಂಶುಪಾಲರು ಜೈಸ್ವಾಲ್ ವಿರುದ್ಧವೇ ಆರೋಪ ಹೊರಿಸಿ ಆತ ಶಾಲೆಗೆ ಭೇಟಿ ನೀಡಿ ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿ ತಮ್ಮ ಪತ್ರಿಕೆ ಖರೀದಿಸುವಂತೆ ಒತ್ತಾಯಿಸುತ್ತಿದ್ದರು ಎಂದು ದೂರಿದ್ದರು. ಜೈಸ್ವಾಲ್ ಅವರೇ ಮಕ್ಕಳಿಗೆ ನೆಲ ಒರಸುವಂತೆ ಹೇಳಿ ಫೋಟೋ ತೆಗೆದಿದ್ದರು ಎಂದೂ ಪ್ರಾಂಶುಪಾಲ ಆರೋಪಿಸಿದ್ದರು.

ಸರಕಾರಿ ಉದ್ಯೋಗಿಗಳ ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪದ ಮೇಲೆ ಜೈಸ್ವಾಲ್ ಅವರನ್ನು ನಂತರ ಬಂಧಿಸಲಾಯಿತಾದರೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಧ್ಯ ಪ್ರವೇಶಿಸಿದ ಬಳಿಕ ಬಿಡುಗಡೆಗೊಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X