Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಆತ್ಮಾವಲೋಕನ

ಆತ್ಮಾವಲೋಕನ

ಅಜ್ಜಿ ಹೇಳಿದ ಕತೆ

ಸಿಂಧು ಭಾರ್ಗವ್. ಬೆಂಗಳೂರುಸಿಂಧು ಭಾರ್ಗವ್. ಬೆಂಗಳೂರು21 Sept 2019 7:24 PM IST
share
ಆತ್ಮಾವಲೋಕನ

ಒಮ್ಮೆ ಒಂದು ಕಾಗೆ ಹಾರುತ್ತ ಹೋಗುವಾಗ ಕೋಗಿಲೆಯು ಮರದಲ್ಲಿ ಕುಳಿತು ಹಾಡುವುದು ಕಾಣಿಸಿತು. ಆಗ ಕೋಗಿಲೆ ಬಳಿ ಹೋಗಿ, ‘‘ನೀನೆಷ್ಟು ಸುಂದರವಾಗಿ, ಇಂಪಾಗಿ ಹಾಡುವೆ. ನಿನ್ನ ದನಿಗೆ ಮನಸೋಲದವರೇ ಇಲ್ಲ. ನಾನು ಹಾಡಿದರೆ ಎಲ್ಲರೂ ಶು..ಶು.. ಎಂದು ಓಡಿಸಿ ಬಿಡುವರು. ನನಗೂ ನಿನ್ನ ಹಾಗೆಯೇ ಹಾಡಬೇಕು ಏನು ಮಾಡಲಿ?’’ ಎಂದಿತು.

ಆಗ ಕೋಗಿಲೆಯು ‘‘ದೇವರು ಒಬ್ಬೊಬ್ಬರಿಗೆ ಒಂದೊಂದು ವಿಶೇಷತೆ ನೀಡಿರುವನು. ನಮ್ಮ ಪಾಲಿನದನ್ನು ನಾವು ಸ್ವೀಕರಿಸಬೇಕು’’ ಎಂದಿತು.

ಕಾಗೆಗೆ ಬೇಸರವಾಗಿ .. ‘‘ಹೋಗು.. ನಿನ್ನ ಜೊತೆ ಮಾತನಾಡೋದಿಲ್ಲ..’’ ಎಂದು ಹಾರಿಹೋಯಿತು.

ಹೀಗೆ ಮುಂದಕ್ಕೆ ಹೋಗುವಾಗ ಚಿವ್..ಚಿವ್.. ಅಳಿಲು ಹಾಡುತ್ತ ಮರದಲ್ಲಿ ಅತ್ತಿಂದಿತ್ತ, ಇತ್ತಿಂದತ್ತ ಕುಣಿಯುತ್ತಿತ್ತು. ಆಗ ಕಾಗೆಯು ಅಳಿಲಿನ ಬಳಿ ಹೋಗಿ ‘‘ಅಳಿಲಣ್ಣ , ಅಳಿಲಣ್ಣ, ನಿನ್ನ ಬೆನ್ನ ಮೇಲೆ ಅದೆಷ್ಟು ಸುಂದರ ಗೆರೆಗಳಿವೆ. ಆ ಮೂರು ಗೆರೆಗಳು ಎಷ್ಟು ಚೆನ್ನಾಗಿ ಹೊಳೆಯುತ್ತಲಿವೆ. ಎಲ್ಲರ ಕಣ್ಣುಗಳ ಸೆಳೆಯುತ್ತಲಿವೆ. ನನಗೂ ಆ ಮೂರು ಗೆರೆಗಳು ಬೇಕು. ನನ್ನ ಬೆನ್ನಿಗೂ ಹಚ್ಚುವೆಯಾ..’’ ಎಂದಿತು. ಆಗ ಅಳಿಲು ‘‘ಅಯ್ಯೋ.. ಹುಚ್ಚಿ!! ದೇವರು ಒಬ್ಬೊಬ್ಬರಿಗೆ ಒಂದೊಂದು ವಿಶೇಷತೆ ನೀಡಿರುವನು. ನಮ್ಮ ಪಾಲಿನದನ್ನು ನಾವು ಸ್ವೀಕರಿಸಬೇಕು’’ ಎಂದಿತು.

ಕಾಗೆಗೆ ಬೇಸರವಾಗಿ ‘‘ಹೋಗು.. ನಿನ್ನ ಜೊತೆ ಮಾತನಾಡೋದಿಲ್ಲ..’’ ಎಂದು ಹಾರಿಹೋಯಿತು.

ಮತ್ತೆ ಹಾರುತ್ತ ಮುಂದೆ ಹೋಗುವಾಗ ನವಿಲೊಂದು ಗರಿಬಿಚ್ಚಿ ನರ್ತನ ಮಾಡುತ್ತಲಿತ್ತು. ಅದನ್ನು ನೋಡಿ ಕಾಗೆಗೆ ಆದ ಸಂತೋಷ ಅಷ್ಟಿಷ್ಟಲ್ಲ. ‘‘ನನಗೂ ಈ ರೆಕ್ಕೆ ಕೊಡು. ನಾನೂ ಕುಣಿಯುವೆ..’’ ಎಂದು ಓಡಿಓಡಿ ಹೋಗಿ ನವಿಲನ್ನು ಕೇಳಿತು. ಆಗ ನವಿಲು ‘‘ನಿನಗೆ ಈ ಗರಿಗಳು ಹೊಂದುವುದಿಲ್ಲ. ಅಂಟಿಸಿದರೂ ಅದೂ ಬಿದ್ದು ಹೋಗಿ ನಗೆಪಾಟಲಿಗೆ ಬೀಳುವೆ. ಬೇಡ ಬಿಡು. ಮುಂದಕ್ಕೆ ಹೋಗು’’ ಎಂದಿತು. ಆಗ ಕಾಗೆಗೆ ಕಣ್ಣೀರು ಉಕ್ಕಿ ಬಂತು. ಅಳಲು ಶುರುಮಾಡಿತು.

ಹೀಗೆ ಮುಂದೆ ಹೋಗುವಾಗ ಊರಿನ ಹಾದಿ ಬಂದಿತು. ಅಲ್ಲಿ ಒಬ್ಬ ಪುಟ್ಟ ಹುಡುಗ ತಾನು ತಿನ್ನುತ್ತಿದ್ದ ಆಹಾರವನ್ನು ಕೋಳಿಗಳಿಗೆ ಎಸೆದು ಮನೆಯೊಳಗೆ ಓಡಿದ. ಆಗ ಒಂದೆರಡು ಕೋಳಿಗಳು ‘‘ಅದು ನನಗೆ ಬೇಕು.. ನನ್ನ ಆಹಾರ.. ಕೊಡು..’’ ಎಂದು ಜಗಳ ಮಾಡಿಕೊಳ್ಳಲು ಆರಂಭಿಸಿದವು. ನಾಯಿಗಳು ಓಡೋಡಿ ಬಂದು ಗುರ್...ಗುರ್.. ಎಂದು ಹೆದರಿಸಿ ಕೋಳಿಗಳ ಓಡಿಸಿಬಿಟ್ಟು ತಾವು ತಿನ್ನಲು ಶುರುಮಾಡಿದವು. ಬೆಕ್ಕೊಂದು ಅಲ್ಲೇ ಮೂಲೆಯಿಂದ ಮಿಯಾವ್.. ಮಿಯಾವ್.. ಎಂದು ಮೆಲು ದನಿಯಲ್ಲೇ ನನಗೂ ಕೊಡು.. ಎಂದು ಹೇಳುತ್ತಿತ್ತು.

ಇದನ್ನೆಲ್ಲ ದೂರದಿಂದಲೇ ನೋಡಿದ ಕಾಗೆಗೆ ಇನ್ನೊಂದು ಅಚ್ಚರಿಯ ವಿಷಯ ಕಣ್ಣಿಗೆ ಬಿತ್ತು. ಅದೇನೆಂದರೆ ತನ್ನ ಬಳಗದ ಕಾಗೆಯೊಂದು ಆಹಾರ ಸಿಕ್ಕಿದೆ ಬೇಗ ಬನ್ನಿ ಎಲ್ಲ, ಇಲ್ಲದಿದ್ದರೆ ಈ ನಾಯಿಗಳು ಖಾಲಿ ಮಾಡಿಯಾವು... ಕಾವ್..ಕಾವ್.. ಎಂದು ಎಲ್ಲರನ್ನೂ ಕೂಗಿ ಕರೆಯುತ್ತಲಿತ್ತು.

ಆಗ ಕಾಗೆಗೆ ಉಳಿದ ಸ್ನೇಹಿತರು ಹೇಳಿದ ಮಾತು ನೆನಪಿಗೆ ಬಂದಿತು. ದೇವರು ಒಬ್ಬೊಬ್ಬರಿಗೆ ಒಂದೊಂದು ವಿಶೇಷತೆ ನೀಡಿರುವನು. ನಮ್ಮ ಪಾಲಿನದನ್ನು ನಾವು ಸ್ವೀಕರಿಸಬೇಕು.. ಎಂದು. ಕಾಗೆಗಳ ವಿಶೇಷ ಗುಣವೇ ಆಹಾರ ನೋಡಿದಾಗ ತನ್ನ ಬಳಗದವರನ್ನೆಲ್ಲ ಕೂಗಿ ಕರೆದು ಜೊತೆಗೂಡಿ ಸೇವಿಸುವುದು. ನೀತಿ : ನೋಡಿದಿರಾ ಮಕ್ಕಳೇ. ಎಲ್ಲರಿಗೂ ಅವರದೇ ಆದ ವಿಶೇಷತೆ ಇರುತ್ತದೆ. ಅವರಿವರನ್ನು ನೋಡಿ ಬೇಸರ ಮಾಡಿಕೊಳ್ಳಬಾರದು.

​

share
ಸಿಂಧು ಭಾರ್ಗವ್. ಬೆಂಗಳೂರು
ಸಿಂಧು ಭಾರ್ಗವ್. ಬೆಂಗಳೂರು
Next Story
X