Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 16ನೇ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ:...

16ನೇ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಸೈನೈಡ್ ಮೋಹನ್ ಮೇಲಿನ ಆರೋಪ ಸಾಬೀತು

ವಾರ್ತಾಭಾರತಿವಾರ್ತಾಭಾರತಿ21 Sept 2019 7:31 PM IST
share
16ನೇ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಸೈನೈಡ್ ಮೋಹನ್ ಮೇಲಿನ ಆರೋಪ ಸಾಬೀತು

ಮಂಗಳೂರು, ಸೆ.21: ಅತ್ಯಾಚಾರ, ಕೊಲೆ ಪ್ರಕರಣದ ಸರಣಿ ಹಂತಕ ಸೈನೈಡ್ ಮೋಹನ್‌ನ 16ನೇ ಪ್ರಕರಣದ ಆರೋಪವು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶನಿವಾರ ಸಾಬೀತಾಗಿದ್ದು, ಅಪರಾಧಿಗೆ ಶಿಕ್ಷೆ ಪ್ರಮಾಣ ದಿನಾಂಕ ಕಾಯ್ದಿರಿಸಲಾಗಿದೆ.

ಪ್ರಕರಣ ವಿವರ: ಸೈನೈಡ್ ಮೋಹನ್‌ ಕುಮಾರ್ 2007ರಲ್ಲಿ ಕಾಸರಗೋಡು ತಾಲೂಕಿನ ಉಪ್ಪಳ ಬಸ್ ತಂಗುದಾಣದಲ್ಲಿ ಬೇಕೂರಿನ 33 ವರ್ಷದ ಯುವತಿಯೊಬ್ಬಳನ್ನು ಪರಿಚಯಿಸಿಕೊಳ್ಳುತ್ತಾನೆ. ತನ್ನನ್ನು ಸುಧಾಕರ ಆಚಾರ್ಯ ಎಂದು ಹೇಳಿದ್ದ. ಅರಣ್ಯ ಇಲಾಖೆಯಲ್ಲಿ ಉದ್ಯೋಗಿ ಎಂದು ನಂಬಿಸಿ ಆಕೆಯ ಜತೆ ಪ್ರೀತಿಸುವ ನಾಟಕವಾಡುತ್ತಾನೆ.

ಬಳಿಕ ಆಕೆಯ ಮನೆಗೂ ಒಂದು ಬಾರಿ ಹೋಗಿ ಪೋಷಕರ ವಿಶ್ವಾಸ ಗಳಿಸುತ್ತಾನೆ. ಯುವತಿ ಸಂಗೀತ ಶಿಕ್ಷಕಿಯಾಗಿ ತರಬೇತಿ ನೀಡುತ್ತಿದ್ದಲ್ಲದೆ, ಆಡಿಯೋ ರೆಕಾರ್ಡ್ ಬಿಡುಗಡೆ ಮಾಡಿದ್ದಳು. 2007ರ ಮೇ 28ರಂದು ಯುವತಿ ಮಂಗಳೂರಿನಲ್ಲಿ ಆಡಿಯೋ ರೆಕಾರ್ಡ್ ಮಾಡಲಿಕ್ಕಿದೆ ಎಂದು ಹೇಳಿ ಮನೆಯಿಂದ ಹೋಗಿದ್ದಳು. ಬಳಿಕ ಇಬ್ಬರು ಬೆಂಗಳೂರಿಗೆ ತೆರಳಿ ವಸತಿಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದರು. ಲಾಡ್ಜ್‌ನಲ್ಲಿ ಸುಧಾಕರ ಆಚಾರ್ಯ ಎಂದು ಪರಿಚಯಿಸಿ ಕೊಠಡಿ ಪಡೆದಿದ್ದ.

ಮೇ 29ರಂದು ಬೆಳಗ್ಗೆ ಮೋಹನ ಯುವತಿ ಬಳಿ ‘ನಮಗಿಬ್ಬರಿಗೆ ಪೂಜೆಗೆ ಹೋಗಲಿಕ್ಕಿದೆ, ಪೂಜೆ ಮಾಡುವಾಗ ನಿನ್ನಲ್ಲಿ ಯಾವುದೇ ಆಭರಣ ಇರಬಾರದು. ನಿನ್ನ ಚಿನ್ನಾಭರಣ, ಹಣ ಕೊಠಡಿಯಲ್ಲಿಡು, ನಾವು ಪೂಜೆ ಮಾಡಿ ಹಿಂದಿರುಗಿ ಬರೋಣ’ ಎಂದು ನಂಬಿಸಿದ್ದಾನೆ.

ಇದಾದ ಬಳಿಕ ಇಬ್ಬರೂ ಹೊರಗೆ ಹೋಗಿದ್ದು ಬೆಂಗಳೂರು ಬಸ್ ನಿಲ್ದಾಣದ ಬಳಿ ಯುವತಿಯಲ್ಲಿ ‘ನಿನ್ನೆ ಲೈಂಗಿಕ ಸಂಪರ್ಕ ಮಾಡಿದ ಕಾರಣ ಗರ್ಭಿಣಿಯಾಗದಂತೆ ತಡೆಯಲು ಶೌಚಾಲಯಕ್ಕೆ ಹೋಗಿ ಈ ಮಾತ್ರೆ ಸೇವಿಸು’ ಎಂದು ಸೈನೈಡ್ ನೀಡಿದ್ದ. ಇದನ್ನು ನಂಬಿದ ಯುವತಿ ಮಾತ್ರೆ ಸೇವಿಸಿ ಅಲ್ಲೇ ಕುಸಿದು ಬಿದ್ದಿದ್ದಾಳೆ. ಸ್ಥಳೀಯರು ಇದನ್ನು ನೋಡಿ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದಾಗ ಯುವತಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಯುವತಿ ಬಿದ್ದ ಬಳಿಕ ಮೋಹನ್ ಕೊಠಡಿಗೆ ತೆರಳಿ ಚಿನ್ನಾಭರಣ ಸಹಿತ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ಆ ಚಿನ್ನಾಭರಣವನ್ನು ಮಂಗಳೂರು ನಗರಕ್ಕೆ ತಂದು ಮಾರಾಟ ಮಾಡಿದ್ದ.

ಪ್ರಕರಣ ಬಯಲಿಗೆ: ಮನೆಯಿಂದ ಹೊರಗೆ ಹೋದ ಯುವತಿ ಯುವಕನ ಜತೆ ಮದುವೆಯಾಗಿ ಖುಷಿಯಿಂದ ಇರಲೆಂದು ನಿರ್ಧರಿಸಿದ ಪೋಷಕರು ಪೊಲೀಸ್ ಠಾಣೆಗೆ ನಾಪತ್ತೆ ಬಗ್ಗೆ ದೂರು ನೀಡಿರಲಿಲ್ಲ. ಆದರೆ 2009ರಲ್ಲಿ ಮೋಹನ್ ಬಂಧನವಾಗಿ ಟಿವಿಯಲ್ಲಿ ವರದಿಯಾಗುತ್ತಿದ್ದಂತೆ ಆತನ ಗುರುತು ಕಂಡು ಹಿಡಿಯುತ್ತಾರೆ. ಬಳಿಕ ಯುವತಿಯ ಸಹೋದರಿ ಬೆಂಗಳೂರಿನ ಉಪ್ಪಾರ ಠಾಣೆಯಲ್ಲಿ ನಾಪತ್ತೆ ದೂರು ನೀಡುತ್ತಾರೆ.
2009 ಅಕ್ಟೋಬರ್ 26ರಂದು ಬರಿಮಾರು ಯುವತಿಯೊಬ್ಬಳ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಆರೋಪಿ ಮೋಹನ ಮಂಜೇಶ್ವರದ ಯುವತಿಯ ಕೊಲೆ ಮಾಡಿದ ಬಗ್ಗೆ ಬಾಯ್ಬಿಟ್ಟಿದ್ದಾನೆ. ಸಿಒಡಿ ಡಿವೈಎಸ್ಪಿ ಶಿವಶರಣಪ್ಪ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ತನಿಖಾಧಿಕಾರಿ ಲೋಕೇಶ್ವರ, ನಾಗರಾಜ ವಿಚಾರಣೆ ನಡೆಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಯಿದುನ್ನೀಸಾ 38 ಸಾಕ್ಷಿ ವಿಚಾರಣೆ ನಡೆಸಿ, 49 ದಾಖಲೆ ಪರಿಗಣಿಸಿ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಶಿಕ್ಷೆ ಪ್ರಮಾಣವನ್ನು ಸೆ.25ರಂದು ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸರಣಿ ಹಂತಕ ಸೈನೈಡ್ ಮೋಹನ್ ವಿರುದ್ಧ ಒಟ್ಟು 20 ಪ್ರಕರಣಗಳಿದ್ದು, 16 ಪ್ರಕರಣಗಳು ಇತ್ಯರ್ಥಗೊಂಡಿವೆ. ಇನ್ನು ನಾಲ್ಕು ಪ್ರಕರಣಗಳು ನಾಲ್ಕು ತಿಂಗಳೊಳಗೆ ವಿಚಾರಣೆ ಮುಗಿಸುವ ಸಾಧ್ಯತೆಯಿದೆ.

ಆರೋಪ ಸಾಬೀತು: ಅಪರಾಧಿ ಮೋಹನ್ ಮೇಲೆ ಸೆಕ್ಷನ್ 302 (ಕೊಲೆ), ಸೆಕ್ಷನ್ 328 (ವಿಷ ಉಣಿಸಿದ್ದು), ಸೆಕ್ಷನ್ 392 (ಚಿನ್ನಾಭರಣ ಸುಲಿಗೆ), ಸೆಕ್ಷನ್ 394 (ವಿಷಪ್ರಾಸನ), ಸೆಕ್ಷನ್ 417 (ವಂಚನೆ),ಸೆಕ್ಷನ್ 207 (ಸಾಕ್ಷ್ಯನಾಶ)ರ ಅಪರಾಧ ಸಾಬೀತುಪಡಿಸಿ ಕೋರ್ಟ್ ತೀರ್ಪು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X