Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಗ್ಲಿಷ್ ಸಾಹಿತ್ಯದಲ್ಲಿ ಗಾಂಧಿ ಪ್ರಭಾವ...

ಇಂಗ್ಲಿಷ್ ಸಾಹಿತ್ಯದಲ್ಲಿ ಗಾಂಧಿ ಪ್ರಭಾವ ತೀರಾ ಕಡಿಮೆ: ಡಾ.ಎಂ.ಜಿ.ಹೆಗಡೆ

ವಾರ್ತಾಭಾರತಿವಾರ್ತಾಭಾರತಿ21 Sept 2019 7:56 PM IST
share
ಇಂಗ್ಲಿಷ್ ಸಾಹಿತ್ಯದಲ್ಲಿ ಗಾಂಧಿ ಪ್ರಭಾವ ತೀರಾ ಕಡಿಮೆ: ಡಾ.ಎಂ.ಜಿ.ಹೆಗಡೆ

ಉಡುಪಿ, ಸೆ.21: ಭಾರತೀಯ ಭಾಷಾ ಸಾಹಿತ್ಯದಲ್ಲಿ ಇದ್ದಷ್ಟು ಗಾಂಧೀ ಪ್ರಭಾವ ಇಂಗ್ಲಿಷ್ ಸಾಹಿತ್ಯದಲ್ಲಿ ಕಂಡುಬರುತ್ತಿಲ್ಲ. ಆದರೂ ಕೂಡ ಕೆಲವು ಸಾಹಿತಿಗಳ ಇಂಗ್ಲಿಷ್ ಕಾದಂಬರಿಗಳು ಗಾಂಧಿ ಪ್ರಭಾವದಿಂದ ಹೊರತಾಗಿಲ್ಲ. ಇವರು ಗಾಂಧಿ ವಿಚಾರಧಾರೆಯನ್ನು ಬಳಸಿಕೊಂಡು ತಮ್ಮ ಕಾದಂಬರಿಗಳಲ್ಲಿ ಪಾತ್ರಗಳನ್ನು ಸೃಷ್ಠಿಸಿದ್ದಾರೆ ಎಂದು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾ ನಿಲಯದ ಇಂಗ್ಲಿಷ್ ವಿಭಾಗದ ನಿಕಟಪೂರ್ವ ಮುಖ್ಯಸ್ಥ ಡಾ.ಎಂ.ಜಿ.ಹೆಗಡೆ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಆಂಗ್ಲ ಭಾಷಾ ವಿಭಾಗ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ವತಿಯಿಂದ ಶನಿವಾರ ಕಾಲೇಜಿನ ಕಾಲೇಜಿನ ಎ.ವಿ. ಹಾಲ್‌ನಲ್ಲಿ ಆಯೋಜಿಸಲಾದ ಭಾರತೀಯ ಇಂಗ್ಲಿಷ್ ಸಾಹಿತ್ಯದಲ್ಲಿ ಗಾಂಧಿ ಎಂಬ ವಿಷಯದ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಗಾಂಧೀಜಿ ಸ್ವಾತಂತ್ರ ಚಳವಳಿಗೆ ಕಾಲಿರಿಸುವ ಮೊದಲು ದೇಶದ ಸಾಹಿತಿ ಗಳಲ್ಲಿ ಬ್ರಿಟಿಷ್ ವ್ಯವಸ್ಥೆಯಿಂದ ಪ್ರಾಚೀನ ಭಾರತ ವೈಭವ ಮರುಕಳಿಸಲು ಸಾಧ್ಯ ಎಂಬ ಆಶಾಭಾವನೆ ಇತ್ತು. ಆದರೆ 1920ರ ಸುಮಾರಿಗೆ ಸ್ವಾತಂತ್ರ ಹೋರಾಟಕ್ಕೆ ಪ್ರವೇಶ ಮಾಡಿದ ಗಾಂಧೀಜಿ, ನಿಜವಾದ ಭಾರತೀಯತೆ ಎಂಬುದು ಹಳ್ಳಿಗಳಲ್ಲಿ ಹಾಗೂ ಜನರ ನಡುವೆ ಇದೆ ಎಂಬುದನ್ನು ಪ್ರತಿ ಪಾದಿಸಿದರು. ಈ ವಿಚಾರಧಾರೆಯು ಭಾರತೀಯ ಭಾಷಾ ಸಾಹಿತ್ಯದಲ್ಲಿ ಪ್ರಮುಖ ವಸ್ತುವಾಗಿದ್ದರೆ, ಇಂಗ್ಲಿಷ್ ಸಾಹಿತ್ಯದಲ್ಲಿ ಮಾತ್ರ ಕಂಡುಬರುತ್ತಿಲ್ಲ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್‌ನ ನಿರ್ದೇಶಕ ಪ್ರೊ. ವರದೇಶ್ ಹೀರೆಗಂಗೆ ಮಾತನಾಡಿ, ಕೆಲವರು ಗಾಂಧೀಜಿಯನ್ನು ಪ್ರತಿಮೆ ಯನ್ನಾಗಿ ಪೂಜಿಸಿದರೆ, ಇನ್ನು ಕೆಲವರು ಸಾಮಾಜಿಕ ತಾಣಗಳಲ್ಲಿ ಗಾಂಧೀಜಿ ವಿರುದ್ಧ ಧ್ವೇಷ ಹರಡಿಸುವ ಕೆಲಸ ಮಾಡುತಿದ್ದಾರೆ. ಆದರೆ ಇನ್ನೊಂದು ವರ್ಗ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂಬಂತೆ ಗಾಂಧೀಜಿ ವಿಚಾರ ದಲ್ಲಿ ನಿರಾಸಕ್ತಿ ತೋರಿಸುತ್ತಿದೆ ಎಂದು ತಿಳಿಸಿದರು.

ಗಾಂಧೀಜಿ ಇಂದಿಗೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ಚರ್ಚೆಗೆ ಒಳಪಡುತ್ತಲೇ ಇದ್ದಾರೆ. ಆ ಮೂಲಕ ಅವರ ವಿಚಾರಧಾರೆ ಚಾಲ್ತಿಯಲ್ಲಿ ಇರುವುದು ಕಾಣಬಹುದು. ಗಾಂಧೀಜಿ ಪ್ರಕಾರ ಸಾಹಿತ್ಯ ಎಂಬುದು ಜನೋಪಯೋಗಿಯೇ ಹೊರತು ಮನರಂಜನೆ ಆಗಬಾರದು. ಸಾಹಿತ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಇರಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಿ.ವಿಜಯ್ ವಹಿಸಿ ದ್ದರು. ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಡಾ.ದೇವಿದಾಸ್ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಾಂಧಿ ಅಧ್ಯಯನ ಕೇಂದ್ರದ ಮುಖ್ಯಸ್ಥ ವಿನೀತ್ ರಾವ್ ವಂದಿಸಿದರು. ವಿದ್ಯಾರ್ಥಿನಿ ಮೈತ್ರೇಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X