Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಧ ಅಪರಾಧ ಪ್ರಕರಣ: ಒಟ್ಟು 334...

ವಿವಿಧ ಅಪರಾಧ ಪ್ರಕರಣ: ಒಟ್ಟು 334 ಆರೋಪಿಗಳ ಬಂಧನ, 5.28 ಕೋಟಿ ಮೌಲ್ಯದ ಮಾಲು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ21 Sept 2019 8:20 PM IST
share
ವಿವಿಧ ಅಪರಾಧ ಪ್ರಕರಣ: ಒಟ್ಟು 334 ಆರೋಪಿಗಳ ಬಂಧನ, 5.28 ಕೋಟಿ ಮೌಲ್ಯದ ಮಾಲು ಜಪ್ತಿ

ಬೆಂಗಳೂರು, ಸೆ.21: ಸುಲಿಗೆ, ಸರಗಳವು, ಮನೆಗಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರು ತಿಂಗಳ ಅವಧಿಯಲ್ಲಿ 425 ಪ್ರಕರಣಗಳನ್ನು ಪತ್ತೆ ಹಚ್ಚಿರುವ ನಗರದ ಉತ್ತರ ವಿಭಾಗದ ಪೊಲೀಸರು 5.28 ಕೋಟಿ ಮಾಲು ಜಪ್ತಿ ಮಾಡಿರುವುದಲ್ಲದೆ, ಬರೋಬ್ಬರಿ 334 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ತೆ ಹಚ್ಚಿರುವ 5 ದರೋಡೆ ಪ್ರಕರಣಗಳಲ್ಲಿ 10 ಮಂದಿ, 69 ಸುಲಿಗೆ ಪ್ರಕರಣಗಳಲ್ಲಿ 101 ಮಂದಿ, 23 ಸರಗಳವು ಪ್ರಕರಣಗಳಲ್ಲಿ 25 ಮಂದಿ, 71 ಮನೆಗಳವು ಕೃತ್ಯದಲ್ಲಿ 49 ಜನರನ್ನು ಬಂಧಿಸಿದರೆ, 236 ವಾಹನ ಕಳವು ಕೃತ್ಯದಲ್ಲಿ 103 ಸೇರಿ ಇನ್ನಿತರೆ ಪ್ರಕರಣಗಳು ಒಳಗೊಂಡಂತೆ 334 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿಸಿರುವ 334 ಆರೋಪಿಗಳಿಂದ 14 ಲಕ್ಷ 55 ಸಾವಿರ ನಗದು, 4 ಕೆಜಿ 917 ಗ್ರಾಂ. ಚಿನ್ನ, 25 ಕೆಜಿ ಬೆಳ್ಳಿ, 236 ದ್ವಿಚಕ್ರ ವಾಹನಗಳು, 18 ಆಟೊಗಳು, 6 ಕಾರುಗಳು, 2 ಲ್ಯಾಪ್‌ಟಾಪ್, 115 ಮೊಬೈಲ್‌ಗಳೂ ಸೇರಿ 5.28 ಕೋಟಿ ರೂ. ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರ್‌ಟಿ ನಗರದ ಎಚ್‌ಎಂಟಿ ಮೈದಾನದಲ್ಲಿ ಕಳವು ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಅವರು, ಕಳೆದ 6 ತಿಂಗಳ ಅವಧಿಯಲ್ಲಿ 425 ಪ್ರಕರಣಗಳನ್ನು ಪತ್ತೆ ಹಚ್ಚಿ 334 ಮಂದಿ ಆರೋಪಿಗಳನ್ನು ಬಂಧಿಸಿದ ಉತ್ತರ ವಿಭಾಗದ ಪೊಲೀಸರ ಕಾರ್ಯವೈಖರಿಯನ್ನು ಪ್ರಶಂಸಿಸಿದರು. ಪ್ರಕರಣ ದಾಖಲಿಸಿ ಯಾವುದೇ ರೀತಿಯ ದೂರುಗಳು ಬಂದರು ಮೊದಲು ಅವುಗಳನ್ನು ದಾಖಲಿಸಲು ಪೊಲೀಸರು ಮುಂದಾಗಬೇಕು. ಠಾಣೆಯ ವ್ಯಾಪ್ತಿಯನ್ನು ಬದಿಗಿಟ್ಟು ಮೊದಲು ಕೇಸು ದಾಖಲಿಸಿ ನಂತರ ಅವುಗಳನ್ನು ಸಂಬಂಧಿಸಿದ ಠಾಣೆಗೆ ವರ್ಗಾಯಿಸಿ ಪತ್ತೆ ಹಚ್ಚಲು ಕ್ರಮಕೈಗೊಳ್ಳುವಂತೆ ಭಾಸ್ಕರ್ ರಾವ್ ಸೂಚಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್, ಡಿಸಿಪಿ ಶಶಿಕುಮಾರ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X