Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನ ಸೇರದಂತೆ ಅಸ್ಸಾಮನ್ನು...

ಪಾಕಿಸ್ತಾನ ಸೇರದಂತೆ ಅಸ್ಸಾಮನ್ನು ರಕ್ಷಿಸಿದ್ದು ಶ್ಯಾಮ ಪ್ರಸಾದ್ ಮುಖರ್ಜಿ: ಬಿಜೆಪಿ ನಾಯಕ ರಾಮ್ ಮಾಧವ್

ವಾರ್ತಾಭಾರತಿವಾರ್ತಾಭಾರತಿ21 Sept 2019 8:43 PM IST
share
ಪಾಕಿಸ್ತಾನ ಸೇರದಂತೆ ಅಸ್ಸಾಮನ್ನು ರಕ್ಷಿಸಿದ್ದು ಶ್ಯಾಮ ಪ್ರಸಾದ್ ಮುಖರ್ಜಿ: ಬಿಜೆಪಿ ನಾಯಕ ರಾಮ್ ಮಾಧವ್

ಸಿಲ್ಚಾರ್(ಅಸ್ಸಾಂ),ಸೆ.21: ಭಾರತೀಯ ಜನಸಂಘದ ಸ್ಥಾಪಕ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರು ಅಸ್ಸಾಂ ಪಾಕಿಸ್ತಾನಕ್ಕೆ ಸೇರದಂತೆ ನೋಡಿಕೊಳ್ಳುವ ಮೂಲಕ ಅದನ್ನು ರಕ್ಷಿಸಿದ್ದರು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ ಮಾಧವ ಹೇಳಿದ್ದಾರೆ.

ಶುಕ್ರವಾರ ಇಲ್ಲಿ ಜಿಜೆಪಿ ನಾಯಕ ಬಿಮಲಾಂಗ್ಷು ರಾಯ್ ಅವರ 81ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು,ನಾವು ಮುಖರ್ಜಿಯವರ ಅನುಯಾಯಿಗಳಾಗಿದ್ದೇವೆ ಮತ್ತು ಕಿರುಕುಳಕ್ಕೊಳಗಾದ ಬಂಗಾಳಿಗಳಿಗೆ ಸಾಕಷ್ಟು ಭದ್ರತೆಯನ್ನು ಒದಗಿಸುವುದು ನಾವು ಈ ಮಹಾನ್ ಬಂಗಾಳಿ ನಾಯಕನಿಗೆ ಸಲ್ಲಿಸುವ ಗೌರವವಾಗಿದೆ ಎಂದರು.

ಮುಖರ್ಜಿಯವರು ಅಸ್ಸಾಂ ಪಾಕಿಸ್ತಾನದ ಭಾಗವಾಗುವುದನ್ನು ತಪ್ಪಿಸಿದ್ದರು. ಅಸ್ಸಾಂ ಗ್ರುಪ್-ಸಿ ರಾಜ್ಯವಾಗಿತ್ತು ಮತ್ತು ವಿಭಜನೆಯ ಸಂದರ್ಭ ಪೂರ್ವ ಪಾಕಿಸ್ತಾನದ ಭಾಗವಾಗಲಿತ್ತು. ಆದರೆ ಮುಖರ್ಜಿಯವರು ಗೋಪಿನಾಥ ಬರ್ದೊಲೊಯಿ ಅವರೊಂದಿಗೆ ಸೇರಿ ಅದನ್ನು ರಕ್ಷಿಸಿದ್ದರು ಎಂದರು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಬರ್ದೊಲೊಯಿ ಅಸ್ಸಾಮಿನ ಪ್ರಥಮ ಮುಖ್ಯಮಂತ್ರಿಯಾಗಿದ್ದರು.

ಜಿನ್ನಾ ಭಾರತವನ್ನು ವಿಭಜಿಸಿದ್ದರು ಮತ್ತು ಮುಖರ್ಜಿ ಅಸ್ಸಾಮನ್ನು ಉಳಿಸುವ ಮೂಲಕ ಪಾಕಿಸ್ತಾನವನ್ನು ವಿಭಜಿಸಿದ್ದರು,ಹೀಗಾಗಿ ಈ ಸ್ಥಳವು ನಮಗೆ ಮಹತ್ವದ್ದಾಗಿದೆ ಎಂದ ಅವರು,ಕಿರುಕುಳಕ್ಕೊಳಗಾಗಿದ್ದ ಹೆಚ್ಚಿನ ಹಿಂದು ಬಂಗಾಳಿಗಳು ಆಶ್ರಯ ಪಡೆದುಕೊಂಡಿರುವ,ನಿರಾಶ್ರಿತರ ನಾಡು ಎಂದೂ ಕರೆಯಲಾಗುತ್ತಿರುವ ಬರಾಕ್ ಕಣಿವೆಯು ಅಸ್ಸಾಮಿನ ಭಾಗವಾಗಿದೆ ಮತ್ತು ಈ ಸ್ಥಳವು ಆರಂಭದ ದಿನಗಳಿಂದಲೂ ಬಿಜೆಪಿಯ ಸಿದ್ಧಾಂತವನ್ನು ಪೋಷಿಸಿಕೊಂಡು ಬಂದಿದೆ. ಎನ್‌ಆರ್‌ಸಿ ಪಟ್ಟಿಯಲ್ಲಿ ಹೆಸರು ಸೇರ್ಪಡಗೊಂಡಿರದಿದ್ದರೂ ಯಾವುದೇ ನಿಜವಾದ ಬಂಗಾಳಿಯನ್ನು ಪೌರತ್ವ ವಂಚಿತವಾಗಿಸುವುದಿಲ್ಲ ಎಂದರು.

 ಅಂತಿಮ ಎನ್‌ಆರ್‌ಸಿ ಪಟ್ಟಿಯಲ್ಲಿನ ಅಸಮಂಜಸತೆಗಳಿಗಾಗಿ ಹಿಂದಿನ ಸರಕಾರಗಳನ್ನು ದೂರಿದ ಅವರು,1951ರಲ್ಲಿ ಅಸಮರ್ಥತೆಗಳು ಮತ್ತು ಹಿಂದಿನ ಸರಕಾರಗಳ ಭಿನ್ನಾಭಿಪ್ರಾಯಗಳಿಂದಾಗಿ ಅಸ್ಸಾಮನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಎನ್‌ಆರ್‌ಸಿ ಪ್ರಕ್ರಿಯೆಯನ್ನು ನಡೆಸಲಾಗಿತ್ತು. 1985ರಲ್ಲಿ ಅಸ್ಸಾಂ ಒಪ್ಪಂದ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ಸರಕಾರವು ಯಶಸ್ವಿಯಾಗಿತ್ತಾದರೂ ಅದು ಎನ್‌ಆರ್‌ಸಿಯನ್ನು ಕಡೆಗಣಿಸಿತ್ತು ಮತ್ತು ಪ್ರಕ್ರಿಯೆಯನ್ನು 70 ವರ್ಷಗಳ ಕಾಲ ವಿಳಂಬಗೊಳಿಸಿತ್ತು ಎಂದರು.

ಅಂತಿಮ ಎನ್‌ಆರ್‌ಸಿ ಪಟ್ಟಿಯಲ್ಲಿನ ಸಮಸ್ಯೆಗಳನ್ನು ಕೇಂದ್ರವು ಬಗೆಹರಿಸಲಿದೆ ಎಂದು ಭರವಸೆ ನೀಡಿದರು. ಕಿರುಕುಳಕ್ಕೊಳಗಾಗಿದ್ದ ಹಿಂದುಗಳ ಜೊತೆಗೆ 2014,ಡಿಸೆಂಬರ್ 14ರವರೆಗೆ ಭಾರತಕ್ಕೆ ಬಂದಿರುವ ಎಲ್ಲ ನಿಜವಾದ ಭಾರತೀಯರ ರಕ್ಷಣೆಗೆ ಸರಕಾರವು ಬದ್ಧವಾಗಿದೆ ಎಂದರು.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಾನು ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಬಲ್ಲೆ ಎನ್ನುವುದನ್ನು ತೋರಿಸಿದ್ದಾರೆ ಎಂದೂ ರಾಮ ಮಾಧವ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X