Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆಯಲ್ಲಿ ಸೋತಾಗ ಅಧಿಕಾರ ತ್ಯಾಗ...

ಚುನಾವಣೆಯಲ್ಲಿ ಸೋತಾಗ ಅಧಿಕಾರ ತ್ಯಾಗ ಮಾಡಬಹುದಿತ್ತಲ್ಲವೆ?: ಮಾಜಿ ಸಿಎಂಗೆ ಜಿ.ಟಿ.ದೇವೇಗೌಡ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ21 Sept 2019 10:22 PM IST
share
ಚುನಾವಣೆಯಲ್ಲಿ ಸೋತಾಗ ಅಧಿಕಾರ ತ್ಯಾಗ ಮಾಡಬಹುದಿತ್ತಲ್ಲವೆ?: ಮಾಜಿ ಸಿಎಂಗೆ ಜಿ.ಟಿ.ದೇವೇಗೌಡ ಪ್ರಶ್ನೆ

ಮೈಸೂರು,ಸೆ.21: ಲೋಕಸಭಾ ಚುನಾವಣೆಯಲ್ಲಿ ಸೋತು ಮನೇಲಿ ಕುಳಿತುಕೊಂಡಾಗ ಆಧಿಕಾರ ತ್ಯಾಗ ಮಾಡಬಹುದಿತ್ತಲ್ಲವೇ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಪ್ರಶ್ನಿಸಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾಣೆಯಲ್ಲಿ ಸೋತಾಗ ಅಧಿಕಾರ ತ್ಯಾಗ ಮಾಡಬಹುದಿತ್ತು, ನೀವು ರಾಜೀನಾಮೆ ನೀಡಿ ಕಾಂಗ್ರೆಸ್ ನವರನ್ನು ಮುಖ್ಯಮಂತ್ರಿ ಮಾಡಿ, ಎಚ್.ಡಿ.ರೇವಣ್ಣ ಅವರನ್ನು ಉಪಮುಖ್ಯಮಂತ್ರಿ ಮಾಡಬಹುದಿತ್ತು ಅಲ್ಲವೆ? ಆಗ ಸರಕಾರವೂ ಉಳಿಯುತ್ತಿತ್ತು. ಕಾರ್ಯಕರ್ತರೂ ಉಳಿಯುತ್ತಿದ್ದರು ಅಲ್ಲವೆ ಎಂದು ಪ್ರಶ್ನಿಸಿದರು.

'ನೀವು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿಗಳು ನಿಮ್ಮನ್ನು ಭೇಟಿ ಮಾಡಬೇಕಾದರೆ ಹೋಟೆಲ್ ಗೇಟ್ ಬಳಿ ಕಾಯಬೇಕಿತ್ತು. ಇದೆಲ್ಲ ಮರೆತು ಹೋಗಿದಿಯಾ ಕುಮಾರಣ್ಣ, ನನಗೆ ವಿಶ್ರಾಂತಿ ಬೇಕು ಅಂತೀರಲ್ಲ ಅಮೇರಿಕಾಕ್ಕೆ ಹೋಗಿದ್ದು ನಾನಾ, ನೀವಾ ? ನೀವು ಎರಡು ಬಾರಿ ಅಮೇರಿಕಾಕ್ಕೆ ಹೋಗಿದ್ದರಲ್ಲ. ಆವಾಗ ನನ್ನ ಕರೆದುಕೊಂಡು ಹೋಗಿದ್ದೀರಾ ? ನೀವು ಕರೆದುಕೊಂಡು ಹೋಗಿದ್ದು ಸಾ.ರಾ.ಮಹೇಶ್‍ ಅನ್ನು. ಅದಕ್ಕೆ ನನ್ನ ಕ್ಷೇತ್ರದ ಜನರ ಜೊತೆ ವಿಶ್ರಾಂತಿ ಪಡೆಯುತ್ತಿದ್ದೇನೆ.  ಕ್ಷೇತ್ರದ ಜನರ ಜೊತೆ ಇರೋದೆ ನನಗೆ ಸಿಗುವ ವಿಶ್ರಾಂತಿ ಎಂದು ಹೇಳಿದರು.

ಹುಣಸೂರು ಕ್ಷೇತ್ರದ ಉಪಚುನಾಣೆ ದಿನಾಂಕ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಉಪಚುನಾಣೆಯ ಬಗ್ಗೆ ನಮ್ಮ ಕುಟುಂಬಕ್ಕೆ ಚಿಂತೆಯೇ ಇಲ್ಲ. ನನ್ನ ಮಗ ಹುಣಸೂರಿನಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದಕ್ಕೆ ಜಿ.ಟಿ.ದೇವೇಗೌಡರನ್ನು ಮುಖ್ಯಮಂತ್ರಿ ಮಾಡಬೇಕಿತ್ತಾ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಡಿದ ಜಿ.ಟಿ.ದೇವೇಗೌಡ, ಸ್ವತಃ ತಮ್ಮ ಸಹೋದರ ಎಚ್.ಡಿ.ರೇವಣ್ಣ ಅವರನ್ನೇ ಉಪಮುಖ್ಯಮಂತ್ರಿ ಮಾಡಲಿಲ್ಲ ಇನ್ನು ನನ್ನ ಮಾಡುತ್ತಾರಾ ? ಚಾಮುಂಡೇಶ್ವರಿ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿಗೆ ಸಮಾನವಾದ ಸ್ಥಾನಮಾನ ನೀಡುತ್ತೇನೆ, ಜಿ.ಟಿ.ದೇವೇಗೌಡರನ್ನು ಗೆಲ್ಲಿಸಿ ಎಂದು ಹೇಳಿದ್ದೀರಿ. ಮೈತ್ರಿ ಸರಕಾರ ರಚನೆ ಆದ ಮೇಲೆ ನೀವು ನನಗೆ ಗೃಹ ಖಾತೆ ಕೊಡುತ್ತೇನೆ ಎಂದಿದ್ದೀರಿ. ನನಗೆ ಗೃಹ ಖಾತೆ ಬೇಡ, ನಾನು ರೈತರಿಗೆ ಅನುಕೂಲವಾಗುವಂತ ಕಂದಾಯ ಖಾತೆ ಕೊಡಿ ಎಂದು ಹೇಳಿದ್ದೆ. ಆದರೆ ನೀವು ನನಗೆ ಕೊಟ್ಟಿದ್ದು ಉನ್ನತ ಶಿಕ್ಷಣ ಖಾತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾ.ರಾ.ಮಹೇಶ್‍ನನ್ನು ಸಚಿವನಾಗಿ ಮಾಡುವ ಪ್ರಮೇಯವೇ ಇರಲಿಲ್ಲ. ಜಿ.ಟಿ.ದೇವೇಗೌಡರಿಗೆ ಪರ್ಯಾಯವಾಗಿ ಬೆಳೆಸಬೇಕು ಎಂದು ಮಹೇಶ್ ರನ್ನು ಸಚಿವರನ್ನಾಗಿ ಮಾಡಿದಿರಿ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X