Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್: ಅರಬ್ ಪಕ್ಷಗಳಿಗೆ ಪ್ರತಿಪಕ್ಷ...

ಇಸ್ರೇಲ್: ಅರಬ್ ಪಕ್ಷಗಳಿಗೆ ಪ್ರತಿಪಕ್ಷ ನಾಯಕ ಸ್ಥಾನ?

ಅತಂತ್ರ ಚುನಾವಣೆ ಸೃಷ್ಟಿಸಿರುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ21 Sept 2019 10:28 PM IST
share
ಇಸ್ರೇಲ್: ಅರಬ್ ಪಕ್ಷಗಳಿಗೆ ಪ್ರತಿಪಕ್ಷ ನಾಯಕ ಸ್ಥಾನ?

ಹೈಫಾ, ಸೆ. 21: ಇಸ್ರೇಲ್‌ ನಲ್ಲಿ ಮಂಗಳವಾರ ನಡೆದ ಚುನಾವಣೆಯ ಬಳಿಕ ರಾಷ್ಟ್ರೀಯ ಏಕತಾ ಸರಕಾರವೊಂದು ರಚನೆಯಾದರೆ, ಇಸ್ರೇಲ್‌ನ ಅರಬ್ ಪಕ್ಷಗಳು ಸಂಸತ್ತಿನಲ್ಲಿ ಅತಿ ದೊಡ್ಡ ಆಡಳಿತರಹಿತ ಘಟಕವಾಗುತ್ತವೆ ಹಾಗೂ ಪ್ರತಿಪಕ್ಷದ ನೇತೃತ್ವವನ್ನೂ ವಹಿಸಬಹುದಾಗಿದೆ.

 ಇಸ್ರೇಲ್ ಸಂಸತ್ತು ‘ನೆಸೆಟ್’ನ 120 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅರಬ್ ಪ್ರಾಬಲ್ಯದ ಜಾಯಿಂಟ್ ಲಿಸ್ಟ್ ಮಿತ್ರಕೂಟವು 13 ಸ್ಥಾನಗಳನ್ನು ಪಡೆದಿದೆ. ಈ ಮೂಲಕ ಈ ಮಿತ್ರಕೂಟವು ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಬಲಪಂಥೀಯ ಲಿಕುಡ್ ಪಕ್ಷ (31 ಸ್ಥಾನಗಳು) ಮತ್ತು ಬೆನ್ನಿ ಗಾಂಟ್ಝ್‌ರ ಮಧ್ಯ ಪಂಥೀಯ ಬ್ಲೂ ಆ್ಯಂಡ್ ವೈಟ್ ಪಕ್ಷದ (33 ಸ್ಥಾನಗಳು) ಬಳಿಕ ಮೂರನೇ ಅತಿ ದೊಡ್ಡ ಗುಂಪಾಗಿದೆ.

 ಹಾಗಾಗಿ, ಏಕತಾ ಸರಕಾರವೊಂದು ರೂಪುಗೊಂಡರೆ, ಜಾಯಿಂಟ್ ಲಿಸ್ಟ್ ಸಂಸತ್ತಿನಲ್ಲಿ ಅತಿ ದೊಡ್ಡ ಪ್ರತಿಪಕ್ಷ ಗುಂಪಾಗುತ್ತದೆ.

 ಏಕತಾ ಸರಕಾರವೆಂದರೆ, ಅಸ್ಥಿರತೆಯನ್ನು ನಿವಾರಿಸುವುದಕ್ಕಾಗಿ ಎರಡು ದೊಡ್ಡ ಮಿತ್ರಕೂಟಗಳು ಸೇರಿಕೊಂಡು ಸರಕಾರ ರಚಿಸುವುದು. ಏಕತಾ ಸರಕಾರ ರಚಿಸುವಂತೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈಗಾಗಲೇ ಬೆನ್ನಿ ಗಾಂಟ್ಝ್‌ರನ್ನು ಆಹ್ವಾನಿಸಿದ್ದಾರೆ. ಈ ಬಗ್ಗೆ ಗಾಂಟ್ಝ್ ಆರಂಭದಲ್ಲಿ ನಿರಾಸಕ್ತಿಯನ್ನು ವ್ಯಕ್ತಪಡಿಸಿರುವರಾದರೂ, ಅವರಿಗೆ ಬೇರೆ ಆಯ್ಕೆ ಉಳಿದಿಲ್ಲ ಎನ್ನಲಾಗಿದೆ.

ದೇಶದಲ್ಲಿರುವ 21 ಶೇಕಡ ಅರಬ್ ಅಲ್ಪಸಂಖ್ಯಾತರನ್ನು ಪ್ರತಿನಿಧಿಸುವ ಯಾವುದೇ ಪಕ್ಷವು ಈವರೆಗೆ ಇಸ್ರೇಲ್ ಸರಕಾರದ ಭಾಗವಾಗಿಲ್ಲ. ಆದರೆ, ಜಾಯಿಂಟ್ ಲಿಸ್ಟ್‌ನ ಮುಖ್ಯಸ್ಥ 44 ವರ್ಷದ ಐಮಾನ್ ಉದೀ ಪ್ರತಿಪಕ್ಷ ನಾಯಕರಾದರೆ, ಅವರಿಗೆ ಗುಪ್ತಚರ ಸಂಸ್ಥೆ ಮೊಸಾದ್ ಪ್ರತಿ ತಿಂಗಳು ಮಾಹಿತಿಗಳನ್ನು ಒದಗಿಸುತ್ತದೆ ಹಾಗೂ ದೇಶಕ್ಕೆ ಭೇಟಿ ನೀಡುವ ಬೇರೆ ದೇಶಗಳ ಮುಖ್ಯಸ್ಥರನ್ನು ಭೇಟಿ ಮಾಡುವ ಅವಕಾಶ ಒದಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X