Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರೆ ಮಾಡಿ ನಿಂದಿಸಿದ ಕೇಂದ್ರ ಸಚಿವ...

ಕರೆ ಮಾಡಿ ನಿಂದಿಸಿದ ಕೇಂದ್ರ ಸಚಿವ ಸುಪ್ರಿಯೋ: ‘ಟೆಲಿಗ್ರಾಫ್’ ಸಂಪಾದಕರ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Sept 2019 5:01 PM IST
share
ಕರೆ ಮಾಡಿ ನಿಂದಿಸಿದ ಕೇಂದ್ರ ಸಚಿವ ಸುಪ್ರಿಯೋ: ‘ಟೆಲಿಗ್ರಾಫ್’ ಸಂಪಾದಕರ ಆರೋಪ

ಕೋಲ್ಕತಾ, ಸೆ.22: ಗುರುವಾರ ಜಾಧವ್‌ಪುರ್ ವಿವಿಯಲ್ಲಿ ನಡೆದ ದಾಂಧಲೆ ಘಟನೆಯ ಬಗ್ಗೆ ಪತ್ರಿಕೆಯಲ್ಲಿ ಬಂದ ವರದಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ತನಗೆ ಕರೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ ಎಂದು ‘ದಿ ಟೆಲಿಗ್ರಾಫ್’ ಪತ್ರಿಕೆಯ ಸಂಪಾದಕ ಆರ್ ರಾಜಗೋಪಾಲ್ ಆರೋಪಿಸಿದ್ದಾರೆ.

 ಪತ್ರಿಕೆಯಲ್ಲಿ ಬಂದಿರುವ ವರದಿಯ ಬಗ್ಗೆ ಆಕ್ಷೇಪಗಳಿದ್ದರೆ ಅದನ್ನು ಸೂಕ್ತ ಪ್ರಕ್ರಿಯೆಯ ಮೂಲಕ ವ್ಯಕ್ತಪಡಿಸಬಹುದು. ಈ ಬಗ್ಗೆ ಸ್ಪಷ್ಟನೆ ನೀಡಿದರೆ ಪ್ರಕಟಿಸಬಹುದು ಎಂದು ತಾನು ತಿಳಿಸಿದಾಗ ಸಚಿವರು ಆಕ್ರೋಶಿತರಾಗಿ ಕೆಟ್ಟ ಪದ ಬಳಸಿ ನಿಂದಿಸಿದರು ಎಂದು ರಾಜಗೋಪಾಲ್ ಹೇಳಿದ್ದಾರೆ. ಆದರೆ ಇದನ್ನು ನಿರಾಕರಿಸಿರುವ ಸುಪ್ರಿಯೊ, ವರದಿಯ ಬಗ್ಗೆ ತನ್ನ ಅಸಮಾಧಾನ ವ್ಯಕ್ತಪಡಿಸಿದಾಗ ಸಂಪಾದಕರು ಅಸಭ್ಯ ಭಾಷೆ ಬಳಸಿ ತನ್ನನ್ನು ನಿಂದಿಸಿದ್ದಾರೆ ಎಂದು ಪ್ರತ್ಯಾರೋಪಿಸಿದ್ದಾರೆ. ಜಾಧವ್‌ಪುರ ವಿವಿಯಲ್ಲಿ ನಡೆದ ಹಿಂಸಾತ್ಮಕ ಘಟನೆಯ ಸಂದರ್ಭ ಸುಪ್ರಿಯೊ ಮೊಣಕೈಯಿಂದ ಒಬ್ಬನಿಗೆ ಹೊಡೆದಿದ್ದಾರೆ ಎಂದು ಪತ್ರಿಕೆಯ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು. ಇದನ್ನು ನಿರಾಕರಿಸಿದ್ದ ಸುಪ್ರಿಯೊ, ಈ ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕೆ ಪತ್ರಿಕೆ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಮೊಕದ್ದಮೆ ದಾಖಲಿಸುವುದಾಗಿ ಟ್ವೀಟ್ ಮೂಲಕ ಎಚ್ಚರಿಸಿದ್ದರು.

 ಕೆಲ ಹೊತ್ತಿನ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದ ಸುಪ್ರಿಯೊ, ಸಣ್ಣ ಮಟ್ಟಿನ ಕ್ಷಮೆ ಯಾಚಿಸಿದರೆ ಪ್ರಕರಣವನ್ನು ಸೌಹಾರ್ದಯುತವಾಗಿ ಮುಗಿಸಿಬಿಡುವಾ ಎಂದು ಸಂಪಾದಕರಿಗೆ ಕರೆ ಮಾಡಿದ್ದೆ. ಆದರೆ ಅವರು ಅವಾಚ್ಯ ಶಬ್ದ ಬಳಸಿ ನಿಂದಿಸಿ, ರವಿವಾರ ಮತ್ತೊಂದು ಲೇಖನ ಬರೆಯುವುದಾಗಿ ತಿಳಿಸಿದರು. ಅವರ ದುರಹಂಕಾರ ಮನರಂಜಿಸಿತು ಎಂದು ಹೇಳಿದ್ದಾರೆ. ಪತ್ರಿಕೆಯ ಶುಕ್ರವಾರದ ಸಂಚಿಕೆಯ ಮುಖಪುಟದಲ್ಲಿ ಸುಪ್ರಿಯೊ ವ್ಯಕ್ತಿಯೊಬ್ಬನ ಶರ್ಟ್ ಹಿಡಿದಿರುವ ಚಿತ್ರ ಪ್ರಕಟವಾಗಿದ್ದು ‘ಜಾದವ್‌ಪುರ ವಿವಿಯಲ್ಲಿ ಬಾಬುಲ್’ ಎಂಬ ಶೀರ್ಷಿಕೆ ನೀಡಲಾಗಿತ್ತು.

    ಈ ಮಧ್ಯೆ, ಟೆಲಿಗ್ರಾಫ್ ಪತ್ರಿಕೆಯ ರವಿವಾರದ ಸಂಚಿಕೆಯಲ್ಲಿ ಫೋನ್ ಸಂಭಾಷಣೆಯನ್ನು ಉಲ್ಲೇಖಿಸಿ ವರದಿ ಪ್ರಕಟವಾಗಿದೆ. ಸಚಿವರು ಒಬ್ಬನಿಗೆ ಮೊಣಕೈಯಲ್ಲಿ ತಿವಿದಿರುವ ಕುರಿತ ಯಾವುದೇ ವರದಿ ಶುಕ್ರವಾರದ ಪತ್ರಿಕೆಯಲ್ಲಿ ಪ್ರಕಟವಾಗಿಲ್ಲ. ಇದನ್ನೇ ಫೋನ್ ಸಂಭಾಷಣೆಯ ಸಂದರ್ಭ ಸಚಿವರಿಗೆ ತಿಳಿಸಿದಾಗ ಅವರು ವ್ಯಕ್ತಿಯೊಬ್ಬನ ಶರ್ಟ್ ಹಿಡಿದಿರುವ ಫೋಟೊ ಹಾಗೂ ಇದಕ್ಕೆ ಜಾಧವ್‌ಪುರ ವಿವಿಯಲ್ಲಿ ಬಾಬುಲ್ ಎಂಬ ಶೀರ್ಷಿಕೆ ನೀಡಿದ ಬಗ್ಗೆ ಆಕ್ಷೇಪಿಸಿದರು ಎಂದು ರವಿವಾರದ ಸಂಚಿಕೆಯ ವರದಿ ತಿಳಿಸಿದೆ.

ತಾನೊಬ್ಬ ಕೇಂದ್ರ ಸಚಿವ ಎಂದು ಸುಪ್ರಿಯೊ ಎಚ್ಚರಿಸುವ ಧ್ವನಿಯಲ್ಲಿ ತಿಳಿಸಿದಾಗ , “ನೀವೊಬ್ಬ ಕೇಂದ್ರ ಸಚಿವರಾಗಿರಬಹುದು. ಆದರೆ ನಾನೂ ಕೂಡಾ ಈ ದೇಶದ ಪ್ರಜೆ ಎಂದು ಅವರಿಗೆ ಉತ್ತರಿಸಿದ್ದೆ” ಎಂದು ಸಂಪಾದಕರು ತಿಳಿಸಿದ್ದಾರೆ. ಈ ಹಂತದಲ್ಲಿ ತಾಳ್ಮೆ ಕಳೆದುಕೊಂಡ ಸುಪ್ರಿಯೊ, “ನೀವು ನಿಮ್ಮನ್ನೇ ಮಾರಿಕೊಂಡಿದ್ದೀರಾ” ಎಂದು ಕೂಗಾಡಿದರಲ್ಲದೆ ಅವಾಚ್ಯವಾಗಿ ನಿಂದಿಸಿ ಬೆದರಿಸಿದರು ಎಂದು ರವಿವಾರ ಪ್ರಕಟವಾದ ಲೇಖನದಲ್ಲಿ ಸಂಪಾದಕ ರಾಜಗೋಪಾಲ್ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X