ಹಿರಿಯ ಪತ್ರಕರ್ತ ರವೀಶ್ ಕುಮಾರ್ಗೆ ‘ಗೌರಿ ಲಂಕೇಶ್' ಪ್ರಶಸ್ತಿ ಪ್ರದಾನ
ಬೆಂಗಳೂರು, ಸೆ.20: ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರವೀಶ್ ಕುಮಾರ್ಗೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ‘ಗೌರಿ ಲಂಕೇಶ್ ರಾಷ್ಟ್ರೀಯ ಪತ್ರಿಕೋದ್ಯಮ ಪ್ರಶಸ್ತಿ’ಯನ್ನು ನಗರದ ಸೇಂಟ್ ಜೋಸೆಫ್ ಕಾಲೇಜ್ನಲ್ಲಿ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಪತ್ರಕರ್ತ ಡಿ.ಉಮಾಪತಿ ಸೇರಿ ಅನೇಕರು ಹಾಜರಿದ್ದರು.