Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಅನರ್ಹ ಶಾಸಕರ ಭಂಡತನದ ಹೇಳಿಕೆ:...

​ಅನರ್ಹ ಶಾಸಕರ ಭಂಡತನದ ಹೇಳಿಕೆ: ಎಸ್ಡಿಪಿಐ

ವಾರ್ತಾಭಾರತಿವಾರ್ತಾಭಾರತಿ22 Sept 2019 7:29 PM IST
share

ಬೆಂಗಳೂರು, ಸೆ.22: ‘ನಮ್ಮ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಿ ಬಿಟ್ಟಿರಿ, ನಿಮ್ಮಿಂದ ನಾವು ಹಾಳಾಗಿದ್ದೇವೆ ನಮಗೆ ವಿಷ ಕೊಟ್ಟು ಬಿಡಿ’ ಎಂದು ರಾಜ್ಯದ ಅನರ್ಹ ಶಾಸಕರು ಗೋಗರೆಯುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.

ಈ ಅನರ್ಹ ಶಾಸಕರು, ಅವರನ್ನು ಮತ ನೀಡಿ ಗೆಲ್ಲಿಸಿದ ಮತದಾರರಿಗೆ ದ್ರೋಹ ಬಗೆದು, ಕೇವಲ ಆಮಿಷ-ಅಧಿಕಾರದ ದಾಹದಿಂದ ಜಾತ್ಯತೀಯ ಸಿದ್ಧಾಂತಗಳಿಗೆ ತಿಲಾಂಜಲಿಯಿತ್ತು, ಕ್ಷೇತ್ರದ ಜನತೆಯ ಭವಿಷ್ಯವನ್ನು ಸಮಾಧಿ ಮಾಡಿಬಿಟ್ಟಿರುವುದನ್ನು ಮರೆತಿದ್ದಾರೆ. ಇಂತಹ ಅನರ್ಹ ಶಾಸಕರಿಂದ ರಾಜ್ಯ ಹಾಗೂ ಜನರಿಗೆ ವಿಷ ನೀಡಿದಂತಾಗಿದೆ. ಹೇಗಿದ್ದರೂ ಇದೀಗ ಅನರ್ಹ ಶಾಸಕರೇ ತಮ್ಮ ಭವಿಷ್ಯವನ್ನು ಸಮಾಧಿ ಮಾಡಲಾಗಿದೆ, ನಮಗೆ ವಿಷ ಕೊಟ್ಟುಬಿಡಿ ಎನ್ನುವುದು ಕುಚೇದ್ಯ ಹಾಗೂ ಭಂಡತನ ಎನ್ನುವುದು ರಾಜ್ಯದ ಜನತೆ ಅರ್ಥ ಮಾಡಿಕೊಂಡಿದ್ದಾರೆ ಎಂದು ಇಲ್ಯಾಸ್ ತುಂಬೆ ಅಭಿಪ್ರಾಯಿಸಿದ್ದಾರೆ.

ಶಾಸಕರಿದ್ದಾಗ ರೆಸಾರ್ಟ್‌ಗಳಲ್ಲಿ ಅಡಗಿ ಕೂತು ಕ್ಷೇತ್ರವನ್ನು ನಿರ್ಲಕ್ಷಿಸಿದ ಅನರ್ಹ ಶಾಸಕರು ಅಹಂಕಾರ ಹಾಗೂ ದರ್ಪದ ಮಾತುಗಳನ್ನಾಡುತ್ತಾ ಬಲಪಂಥೀಯ ವಿಚಾರಗಳಿಗೆ ಶರಣಾಗಿದ್ದರು. ಅದೇ ರೀತಿ ಸರಕಾರವನ್ನು ಉರುಳಿಸಲು ಮತ್ತು ತಮ್ಮದೇ ಸರಕಾರವನ್ನು ರಚಿಸಲು ಬಿಜೆಪಿ ಕೂಡಾ ಹೀನ ರಾಜಕೀಯವನ್ನು ಮಾಡಿತ್ತು. ಒಂದು ಕಡೆಯಲ್ಲಿ ಆಮಿಷವನ್ನು ನೀಡಿ ಅನರ್ಹ ಶಾಸಕರಿಗೆ ಬಿಜೆಪಿ ಮೋಸ ಮಾಡಿದ್ದು, ಇನ್ನೊಂದೆಡೆಯಲ್ಲಿ ಅಧಿಕಾರಕ್ಕಾಗಿ ಇಡೀ ರಾಜ್ಯದ ಜನತೆಗೆ ಕ್ಷುದ್ರ ರಾಜಕೀಯದ ಮೂಲಕ ಮೋಸ ಮಾಡಿದ ಬಿಜೆಪಿ ಕೂಡಾ ರಾಜ್ಯವನ್ನು ಅಪಹಾಸ್ಯಕ್ಕೀಡುವಂತೆ ಮಾಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜಾತ್ಯತೀತವೆಂಬ ಸಿದ್ಧಾಂತವನ್ನು ಕೇವಲ ತೋರಿಕೆಗೆ ಮಾತ್ರ ಬಳಸುತ್ತಿದೆ ಹೊರತು ನೈಜವಾಗಿ ಯಾವುದೇ ಬದ್ಧತೆಯಾಗಲೀ, ಪ್ರೇರಣೆಯಾಗಲೀ ಅವುಗಳಿಗೆ ಇಲ್ಲ. ಈ ಪಕ್ಷಗಳಿಗೆ ರಾಜ್ಯದ ಪ್ರಬುದ್ಧ ಮತದಾರರರು ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಬೇಕೆಂದು ಇಲ್ಯಾಸ್ ಮುಹಮ್ಮದ್ ತುಂಬೆ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X