Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೌದಿ ಯುವರಾಜನ ವಿಶೇಷ ವಿಮಾನದಲ್ಲಿ...

ಸೌದಿ ಯುವರಾಜನ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ಪ್ರಯಾಣಿಸಿದ ಇಮ್ರಾನ್

ವಾರ್ತಾಭಾರತಿವಾರ್ತಾಭಾರತಿ22 Sept 2019 11:35 PM IST
share
ಸೌದಿ ಯುವರಾಜನ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ಪ್ರಯಾಣಿಸಿದ ಇಮ್ರಾನ್

ಇಸ್ಲಾಮಾಬಾದ್,ಸೆ.22: ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶನಿವಾರ ಸೌದಿಯ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ಆಗಮಿಸಿದರು.

   ಸೌದಿ ಅರೇಬಿಯಕ್ಕೆ ಭೇಟಿ ನೀಡಿದ ಬಳಿಕ ಇಮ್ರಾನ್ ಖಾನ್ ಅಲ್ಲಿಂದ ಸಾಮಾನ್ಯ ವಾಣಿಜ್ಯ ಪ್ರಯಾಣಿಕ ವಿಮಾನದಲ್ಲಿ ಅಮೆರಿಕಕ್ಕೆ ಪ್ರಯಾಣಿಸುವವರಿದ್ದರು. ಆದರೆ ಸೌದಿ ಯುವರಾಜ ಅದಕ್ಕೆ ಅವಕಾಶ ನೀಡಲಿಲ್ಲ. ‘‘ನೀವು ನಮ್ಮ ವಿಶೇಷ ಅತಿಥಿಯಾಗಿರುವಿರಿ ಹಾಗೂ ನೀವು ನನ್ನ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ತೆರಳಲಿದ್ದೀರಿ’’ ಎಂದವರು ಹೇಳಿರುವುದಾಗಿ ಪಾಕ್ ಮೂಲದ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಈ ಮಧ್ಯೆ ಪಾಕ್‌ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಅವರು ಇಸ್ಲಾಮಾಬಾದ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ‘‘ ಪ್ರಧಾನಿ ಇಮ್ರಾನ್ ಖಾನ್ ಅಮೆರಿಕ ತಲುಪಿದ್ದಾರೆ. ಅವರ ಏಳು ದಿನಗಳ ಈ ಭೇಟಿಯು, ಕಾಶ್ಮೀರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ವಿಶ್ವದ ಗಮನವನ್ನು ಸೆಳೆಯುವುದಾಗಿದೆ’’ ಎಂದವರು ಹೇಳಿದರು.

ಅಮೆರಿಕಕ್ಕೆ ಆಗಮಿಸುವ ಮುನ್ನ ಖಾನ್ ಅವರು, ಕಾಶ್ಮೀರ ವಿಷಯವಾಗಿ ಪಾಕಿಸ್ತಾನದ ನಿಲುವಿಗೆ ಬೆಂಬಲವನ್ನು ಪಡೆಯುವುದಕ್ಕಾಗಿ ಸೌದಿ ಆರೇಬಿಯಕ್ಕೆ ಎರಡು ದಿನಗಳ ಭೇಟಿ ನೀಡಿದ್ದರು. ಸೌದಿ ಆರೇಬಿಯದಲ್ಲಿ ಇಮ್ರಾನ್ ಅವರು ಸೌದಿ ದೊರೆ ಸಲ್ಮಾನ್ ಬಿನ್ ಅಬ್ದುಲಝೀಜ್ ಅವರನ್ನು ಭೇಟಿಯಾಗಿ ಕಾಶ್ಮೀರ ವಿಷಯವಲ್ಲದೆ, ಉಭಯ ದೇಶಗಳ ನಡುವೆ ವಾಣಿಜ್ಯ, ಹೂಡಿಕೆ ಹಾಗೂ ಆರ್ಥಿಕ ಬಾಂಧವ್ಯಗಳ ಕುರಿತಾಗಿಯೂ ಚರ್ಚಿಸಿದ್ದರು. ಸೌದಿಯಿಂದ ಖಾನ್ ಅವರು ನ್ಯೂಯಾಕ್‌ಗೆ ನಿರ್ಗಮಿಸಿದ್ದರು. ಅಲ್ಲಿ ಅವರು ವಿಶ್ವಸಂಸ್ಥೆಯ ಸಾಮಾನ್ಯಸಭೆಯ 74ನೇ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 27ರಂದು ಅವರ ವಿಶ್ವಸಂಸ್ಥೆಯ ಸಾಮಾನ್ಯಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X