Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಜ ದರಕ್ಕಿಂತ ಕಡಿಮೆ ಬಿಲ್ ರಚನೆಯಿಂದ...

ನಿಜ ದರಕ್ಕಿಂತ ಕಡಿಮೆ ಬಿಲ್ ರಚನೆಯಿಂದ ಜಿಎಸ್‌ಟಿ ಖೋತ: ಬೈಸಿಕಲ್ ತಯಾರಕರ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Sept 2019 9:35 PM IST
share
ನಿಜ ದರಕ್ಕಿಂತ ಕಡಿಮೆ ಬಿಲ್ ರಚನೆಯಿಂದ ಜಿಎಸ್‌ಟಿ ಖೋತ: ಬೈಸಿಕಲ್ ತಯಾರಕರ ಆರೋಪ

ಚಂಡಿಗಡ,ಸೆ.23: ಪಂಜಾಬ್‌ನ ಲುಧಿಯಾನದ ಕೆಲವು ವಂಚಕ ಮಾರಾಟಗಾರರು ಸೈಕಲ್‌ಗಳಿಗೆ ನಿಗದಿತ ದರಕ್ಕಿಂತ ಕಡಿಮೆ ದರ ತೋರಿಸಿ ಬಿಲ್ ಸಿದ್ಧಪಡಿಸುತ್ತಿರುವ (ಅಂಡರ್ ಇನ್‌ವೊಸಿಂಗ್) ಕಾರಣ ಸಂಘಟಿತ ಮಾರಾಟಗಾರರ ಮೇಲೆ ತೀವ್ರ ಹೊಡೆತ ಬಿದ್ದಿದೆ ಮತ್ತು ಇದರಿಂದ ಜಿಎಸ್‌ಟಿ ಖೋತ ಕೂಡಾ ಆಗುತ್ತಿದೆ ಎಂದು ಸೈಕಲ್ ತಯಾರಕರು ಆರೋಪಿಸಿದ್ದಾರೆ. ಸೈಕಲ್ ಮತ್ತು ಸೈಕಲ್‌ನ ಬಿಡಿಭಾಗಗಳನ್ನು ತಯಾರಿಸುವ ದೇಶದ ಪ್ರಮುಖ ತಾಣವಾಗಿರುವ ಲುಧಿಯಾನದಲ್ಲಿ ನಡೆಯುತ್ತಿರುವ ವಂಚನೆಯಿಂದ ಸದ್ಯ ಇರುವ ಮಾರುಕಟ್ಟೆಯಲ್ಲಿ ಉಳಿಯುವುದು ಅಸಾಧ್ಯ ಎಂದು ಸಂಘಟಿತ ಸೈಕಲ್ ತಯಾರಕರು ಸೋಮವಾರ ತಿಳಿಸಿದ್ದಾರೆ.

ಸಾಮಾನ್ಯವಾಗಿ 2,500ರೂ.ಗೆ ಸಿಗುವ ಒಂದು ಸೈಕಲ್‌ಗೆ ಕೆಲವು ಅಕ್ರಮ ಮಾರಾಟಗಾರರು 900ರೂ. ಬಿಲ್ ರಚಿಸುತ್ತಾರೆ. ಇದರಿಂದ ಜಿಎಸ್‌ಟಿ ವಂಚಿಸಿದಂತೆಯೂ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಸೈಕಲ್‌ಗೆ ಶೇ.12 ಜಿಎಸ್‌ಟಿ ವಿಧಿಸಲಾಗುತ್ತಿದೆ. ಅಂಡರ್ ಇನ್‌ವೊಸಿಂಗ್ ಮಾಡುವ ಮೂಲಕ ಅಕ್ರಮ ಮಾರಾಟಗಾರರು 2,500ರೂ. ಬೆಲೆಯ ಸೈಕಲ್‌ಗೆ ವಿಧಿಸಲಾಗಿರುವ 300ರೂ. ಜಿಎಸ್‌ಟಿಯಲ್ಲಿ 192ರೂ.ವನ್ನು ವಂಚಿಸುತ್ತಾರೆ ಎಂದು ಮಾರಾಟಗಾರರೊಬ್ಬರು ತಿಳಿಸಿದ್ದಾರೆ.

ದೇಶದಲ್ಲಿ ಪ್ರತಿವರ್ಷ ಮಾರಲ್ಪಡುವ 2 ಕೋಟಿ ಸೈಕಲ್‌ಗಳ ಪೈಕಿ ಶೇ.80 5,000ರೂ.ಗಿಂತ ಕಡಿಮೆ ಬೆಲೆಯ ಸೈಕಲ್‌ಗಳಾಗಿದ್ದು ಕಡಿಮೆ ಲಾಭ ಮಿತಿಯನ್ನು ಹೊಂದಿರುತ್ತವೆ ಎಂದು ಮಾರಾಟಗಾರರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X