Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ.30ರಂದು ಕಡಲಕೆರೆ ಶಾಲೆ ನೂತನ ಕಟ್ಟಡ...

ಸೆ.30ರಂದು ಕಡಲಕೆರೆ ಶಾಲೆ ನೂತನ ಕಟ್ಟಡ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ23 Sept 2019 11:29 PM IST
share
ಸೆ.30ರಂದು ಕಡಲಕೆರೆ ಶಾಲೆ ನೂತನ ಕಟ್ಟಡ ಲೋಕಾರ್ಪಣೆ

ಮೂಡುಬಿದಿರೆ : ಎಂಆರ್‍ಪಿಎಲ್ ವತಿಯಿಂದ ರೂ. ಒಂದು ಕೋಟಿ ವೆಚ್ಚದಲ್ಲಿ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಡಲಕೆರೆಯಲ್ಲಿರುವ 96 ವರ್ಷಗಳ ಇತಿಹಾಸವುಳ್ಳ  ಸಂತ ಇಗ್ನೇಶಿಯಸ್‍ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ 8,000 ಚದರಡಿಯ ಎಂಟು ತರಗತಿ ಕೋಣೆಗಳ ನೂತನ ಕಟ್ಟಡವನ್ನು ನಿರ್ಮಿಸಲಾಗಿದ್ದು, ಸೆ. 30ರಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಶಾಲೆಯ ಆಡಳಿತವನ್ನು ಹೊಂದಿರುವ ಸೇವಾಂಜಲಿ ಎಜ್ಯುಕೇಶನ್ ಟ್ರಸ್ಟ್‍ನ ಸಂಚಾಲಕ, ಪ್ರೇರಣಾ ಸೇವಾ ಟ್ರಸ್ಟ್ ನ ಅಧ್ಯಕ್ಷ  ಪ್ರೊ.ಎಂ. ವಾಸುದೇವ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಶುಭಾಶಂಸನೆಗೈಯಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್‍ಕುಮಾರ್, ಮುಜರಾಯಿ, ಬಂದರು, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್‍ಕುಮಾರ ಕಟೀಲು, ಶಾಸಕ ಉಮಾನಾಥ ಕೋಟ್ಯಾನ್, ಎಂ.ಆರ್.ಪಿ. ಎಲ್.  ಆಡಳಿತ ನಿರ್ದೇಶಕ ವೆಂಕಟೇಶ ಎಂ., ಹಾಗೂ ಉಪಸ್ಥಿತರಿರುವರು. 

ಲ್ವದೋರ್ ಡಿಸೋಜ ಅವರು ಊರ ಮಕ್ಕಳ ಶಿಕ್ಷಣಕ್ಕಾಗಿ 1923ರಲ್ಲಿ  ತೆರೆದ ಈ ಶಾಲೆ ಸಾಲು ಮಾಸ್ತರರ ಶಾಲೆ ಎಂದೇ ಪ್ರಸಿದ್ಧಿ ಪಡೆದಿದೆ. ಮುಳಿಹುಲ್ಲಿನ ಈ ಶಾಲೆಯು ಇಲ್ಲೇ ಕಲಿತು ಮುಂದೆ ಇಲ್ಲೇ ಶಿಕ್ಷಕರಾಗಿಯೂ ಇದ್ದ  ಮಕ್ಕಳ ಸಾಹಿತಿ ಪಳಕಳ ಸೀತಾರಾಮ ಭಟ್ ಹಾಗೂ ಒಡನಾಡಿಗಳ ಪರಿಶ್ರಮದಿಂದ 1983ರಲ್ಲಿ ಈಗಿರುವ ಹಂಚಿನ ಕಟ್ಟಡ ಎದ್ದುನಿಂತಿತು. ಸದ್ಯ ಪ್ರೇರಣಾ  ಸೇವಾ ಟ್ರಸ್ಟ್ ಕೂq 2017ರ ಎಪ್ರಿಲ್1ರಿಂದ ಶಾಲಾಡಳಿತ ಸೂತ್ರ ಹಿಡಿದಿರುವ ಸೇವಾಂಜಲಿ ಎಜ್ಯುಕೇಶನ್‍ಟ್ರಸ್ಟ್ ನೊಂದಿಗೆ ಪ್ರೇರಣಾ ಟ್ರಸ್ಟ್ ಕೂಡ ಕೈಜೋಡಿಸಿದೆ. ಒಟ್ಟು 1.86 ಎಕ್ರೆಯಷ್ಟು ರಮ್ಯ ಪ್ರಾಕೃತಿಕ ತಾಣದಲ್ಲಿರುವ ಈ ಶಾಲೆಯನ್ನು  ಪ್ರಾಚೀನ ಗುರುಕುಲದ ವೇದ, ವಿಜ್ಞಾನ, ಯೋಗ, ಕೃಷಿ, ಕಲಾ ಕೌಶಲ ಎಂಬ ಪಂಚಮುಖೀ ಶಿಕ್ಷಣ ಪದ್ದತಿಯೊಂದಿಗೆ ವರ್ತಮಾನದ  ಅವಶ್ಯಕತೆಗೆ ತಕ್ಕಂತೆ ಆಧುನಿಕ ಶಿಕ್ಷಣ ಒದಗಿಸುವ ಆದರ್ಶ ಕನ್ನಡ ಮಾಧ್ಯಮ ಶಿಕ್ಷಣ ಕೇಂದ್ರವಾಗಿ ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸೇವಾಂಜಲಿ ಟ್ರಸ್ಟ್  ಈ ಹಿಂದೆಯೇ ತರಗತಿಗೊಬ್ಬ ಶಿಕ್ಷಕರನ್ನು ನಿಯೋಜಿಸಿದ್ದು ಮುಖ್ಯಶಿಕ್ಷಕ ಸೇರಿ 8 ಮಂದಿ ಇದ್ದಾರೆ. 4 ಶಾಲಾ ವಾಹನಗಳು, ಎಲ್ಲರಿಗೂ ಉಚಿತ ಸಮವಸ್ತ್ರ, ಬರೆಯುವ ಪುಸ್ತಕ, ಆಂಗ್ಲಭಾಷಾ ಶಿಕ್ಷಣ, ಸ್ಪೋಕನ್ ಇಂಗ್ಲಿಷ್, ಕುಡಿಯುವ ನೀರಿಗಾಗಿ ಬೋರ್‍ವೆಲ್, ಹೊಸ ಶೌಚಾಲಯ ನಿರ್ಮಾಣ, ಹೊಸ ಕಂಪ್ಯೂಟರ್‍ಗಳ ಒದಗಣೆ, ಯೋಗ, ಪ್ರಾಣಾಯಾಮ, ಭಗವದ್ಗೀತೆ, ಸಂಸ್ಕೃತ ಸುಭಾಷಿತಗಳ ಬೋಧನೆ, ಕರಾಟೆ, ಸಂಗೀತ, ಕಡಿಮೆ ಸಾಮಥ್ರ್ಯವಿರುವ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ವಿಶೇಷ ಗಮನ, ಹಬ್ಬಹರಿದಿನಗಳ ಆಚರಣೆ ಅಲ್ಲದೆ,  ಮೂರರಿಂದ ಆರು ವರ್ಷದೊಳಗಿನ ಮಕ್ಕಳಿಗಾಗಿ ಭಾರತೀಯ ಸಂಸ್ಕಾರ ಶಿಕ್ಷಣ ನೀಡಲು ನೂತನ  ಪ್ರೇರಣ ಶಿಶುಮಂದಿರ ಈಗಾಗಲೇ ತೆರೆದಿದ್ದು ನೂತನ ಕಟ್ಟಡ ನಿರ್ಮಾಣ ಅಂತಿಮಹಂತದಲ್ಲಿದೆ ಎರಡು ವರ್ಷಗಳ ಹಿಂದೆ 56 ಮಕ್ಕಳಷ್ಟೇ  ಇದ್ದ ಈ ಶಾಲೆಯಲ್ಲಿ ಸೇವಾಂಜಲಿಯ ಪ್ರಯತ್ನಗಳಿಂದಾಗಿ 160 ವಿದ್ಯಾರ್ಥಿಗಳು, ಶಿಶುಮಂದಿರದಲ್ಲಿ 60 ವಿದ್ಯಾರ್ಥಿಗಳಿದ್ದಾರೆ.

ಸೇವಾಂಜಲಿ ಟ್ರಸ್ಟ್ ಅಧ್ಯಕ್ಷ ಚೇತನ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ ಬಿ. ಜಯರಾಮ ರಾವ್, ಸೇವಾಂಜಲಿ ಎಜ್ಯುಕೇಶನ್ ಟ್ರಸ್ಟ್  ಉಪಾಧ್ಯಕ್ಷ ರಾಜೇಶ್ ಬಂಗೇರ, ಕೋಶಾಧಿಕಾರಿ ಎಸ್.ಎನ್. ಬೋರ್ಕರ್, ಕಾರ್ಯದರ್ಶಿ ಎಂ. ಶಾಂತರಾಮ ಕುಡ್ವ, ಪ್ರೇರಣಾ ಟ್ರಸ್ಟ್ ಉಪಾಧ್ಯಕ್ಷ ಮೂ.ವೆ. ಚಂದ್ರಹಾಸ, ಕಾರ್ಯದರ್ಶಿ ಲೇಶವ ಹೆಗ್ಡೆ , ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X