ಉಪಚುನಾವಣೆ ಫಲಿತಾಂಶದ ಬಳಿಕ ಹೊಸ ನಾಟಕ ಆರಂಭ: ಕುಮಾರಸ್ವಾಮಿ
ಮೈಸೂರು, ಸೆ.24: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೊಂದು ಹೊಸ ನಾಟಕ ಆರಂಭವಾಗಲಿದೆ. ಜೆಡಿಎಸ್ ತನ್ನದೇ ತಂತ್ರಗಾರಿಕೆ ಮಾಡಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಈ ಚುನಾವಣೆ ಎಲ್ಲ ಪಕ್ಷಗಳಿಗೂ ಅಗ್ನಿಪರೀಕ್ಷೆಯಾಗಲಿದೆ.
ಎರಡು ದಿನಗಳಲ್ಲಿ 15 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಪೂರ್ಣವಾಗಲಿದೆ. ಸ್ಥಳೀಯ ನಾಯಕರಿಗೆ ಅವಕಾಶ ನೀಡುವುದು ನಮ್ಮ ಮೊದಲ ಆದ್ಯತೆ ಎಂದರು.
Next Story