Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಉಗ್ರ ನಿಗ್ರಹ ಹೋರಾಟದಲ್ಲಿ...

ಅಮೆರಿಕದ ಉಗ್ರ ನಿಗ್ರಹ ಹೋರಾಟದಲ್ಲಿ ಕೈಜೋಡಿಸಿರುವುದು ಪಾಕ್‌ನ ದೊಡ್ಡ ತಪ್ಪು: ಇಮ್ರಾನ್ ಖಾನ್

ವಾರ್ತಾಭಾರತಿವಾರ್ತಾಭಾರತಿ24 Sept 2019 10:05 PM IST
share
ಅಮೆರಿಕದ ಉಗ್ರ ನಿಗ್ರಹ ಹೋರಾಟದಲ್ಲಿ ಕೈಜೋಡಿಸಿರುವುದು ಪಾಕ್‌ನ ದೊಡ್ಡ ತಪ್ಪು: ಇಮ್ರಾನ್ ಖಾನ್

ನ್ಯೂಯಾರ್ಕ್, ಸೆ. 24: 9/11ರ ದಾಳಿಯ ಬಳಿಕ, ಅಮೆರಿಕದ ಜೊತೆ ಕೈಜೋಡಿಸುವ ಮೂಲಕ ನನ್ನ ದೇಶ ‘ಅತ್ಯಂತ  ದೊಡ್ಡ ತಪ್ಪೊಂದನ್ನು’ ಮಾಡಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸೋಮವಾರ ಹೇಳಿದ್ದಾರೆ.

‘‘ತಮ್ಮಿಂದ ಈಡೇರಿಸಲು ಸಾಧ್ಯವಾಗದ ಭರವಸೆಗಳನ್ನು ಹಿಂದಿನ ಸರಕಾರಗಳು ನೀಡಬಾರದಾಗಿತ್ತು’’ ಎಂದು ಅಮೆರಿಕದ ಜೊತೆ ಕೈಜೋಡಿಸುವ ಮಾಜಿ ಅಧ್ಯಕ್ಷ ಜನರಲ್ ಫರ್ವೇಝ್ ಮುಶರ್ರಫ್‌ರ ನಿರ್ಧಾರದ ಬಗ್ಗ ಇಮ್ರಾನ್ ಹೇಳಿದರು.

ಅಫ್ಘಾನಿಸ್ತಾನದ ತಾಲಿಬಾನ್ ಸರಕಾರಕ್ಕೆ ಮಾನ್ಯತೆ ನೀಡಿದ್ದ ಮೂರು ದೇಶಗಳ ಪೈಕಿ ಪಾಕಿಸ್ತಾನವೂ ಒಂದಾಗಿತ್ತು. ಇತರ ಎರಡು ದೇಶಗಳೆಂದರೆ ಸೌದಿ ಅರೇಬಿಯ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್. ಆದರೆ, 2001 ಸೆಪ್ಟಂಬರ್ 11ರಂದು (9/11) ಅಮೆರಿಕದ ಮೇಲೆ ಭಯೋತ್ಪಾದಕ ದಾಳಿ ನಡೆದ ಬಳಿಕ, ತಾಲಿಬಾನ್ ವಿರುದ್ಧದ ಅಮೆರಿಕ ಸೈನಿಕರ ಕಾರ್ಯಾಚರಣೆಗೆ ಪಾಕಿಸ್ತಾನ ಬೆಂಬಲ ನೀಡಿತು.

‘‘1980ರ ದಶಕದಲ್ಲಿ, ಸೋವಿಯತ್ ಯೂನಿಯನ್ ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿದಾಗ ಪಾಕಿಸ್ತಾನವು ಅಮೆರಿಕದ ನೆರವಿನಿಂದ ಸೋವಿಯತ್ ಪಡೆಗಳಿಗೆ ಪ್ರತಿರೋಧವನ್ನು ಸಂಘಟಿಸಿತು. ಸೋವಿಯತ್ ವಿರುದ್ಧ ಜಿಹಾದ್‌ಗಾಗಿ ಜಗತ್ತಿನ ಎಲ್ಲೆಡೆಯಿಂದ ಬಂಡುಕೋರರನ್ನು ಆಹ್ವಾನಿಸಲಾಯಿತು ಹಾಗೂ ಈ ಬಂಡುಕೋರರಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಯ ತರಬೇತಿ ನೀಡಿತು’’ ಎಂದು ನ್ಯೂಯಾರ್ಕ್ ನಗರದಲ್ಲಿ ಕೌನ್ಸಿಲ್ ಆನ್ ಫಾರೀನ್ ರಿಲೇಶನ್ಸ್ (ಸಿಎಫ್‌ಆರ್) ಎಂಬ ಸಂಘಟನೆಯು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘‘ಸೋವಿಯತ್ ವಿರುದ್ಧ ಹೋರಾಡುವುದಕ್ಕಾಗಿ ನಾವು ಈ ಬಂಡುಕೋರ ಗುಂಪುಗಳನ್ನು ಸೃಷಿಸಿದೆವು. ಈ ಜಿಹಾದಿಗಳು ಆಗ ಹೀರೊಗಳಾಗಿದ್ದರು. 1989ರಲ್ಲಿ ಸೋವಿಯತ್ ಜನರು ಅಫ್ಘಾನಿಸ್ತಾನದಿಂದ ಹೊರಹೋದರು ಹಾಗೂ ಅಮೆರಿಕವೂ ಅಫ್ಘಾನಿಸ್ತಾನದಿಂದ ಹೊರಹೋಯಿತು. ಆದರೆ, ಈ ಗುಂಪುಗಳು ನಮ್ಮಲ್ಲೇ ಉಳಿದವು’’ ಎಂದರು.

‘‘ನಂತರ 9/11 ಸಂಭವಿಸಿತು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನ ಮತ್ತೊಮ್ಮೆ ಅಮೆರಿಕದ ಜೊತೆ ಕೈಜೋಡಿಸಿತು. ಈಗ ನಾವು ಈ ಗುಂಪುಗಳನ್ನು ಭಯೋತ್ಪಾದಕರಂತೆ ಕಾಣಬೇಕಾಗಿತ್ತು. ವಿದೇಶಿ ಆಕ್ರಮಣದ ವಿರುದ್ಧ ಹೋರಾಡುವುದು ಜಿಹಾದ್ ಎಂಬುದನ್ನು ಅವರ ತಲೆಗೆ ತುಂಬಲಾಗಿತ್ತು. ಆದರೆ, ಈಗ ಅಫ್ಘಾನಿಸ್ತಾನಕ್ಕೆ ಅಮೆರಿಕ ಬಂದಾಗ, ಈ ಗುಂಪುಗಳು ಮಾಡುತ್ತಿರುವುದು ಭಯೋತ್ಪಾದನೆ ಎಂದು ಭಾವಿಸಬೇಕಾಗಿತ್ತು’’ ಎಂದು ಇಮ್ರಾನ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X