Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬಾಳೆಹಣ್ಣು ಮತ್ತು ಬಾಳೆಕಾಯಿ: ಇವುಗಳಲ್ಲಿ...

ಬಾಳೆಹಣ್ಣು ಮತ್ತು ಬಾಳೆಕಾಯಿ: ಇವುಗಳಲ್ಲಿ ಯಾವುದು ಹೆಚ್ಚು ಒಳ್ಳೆಯದು?

ವಾರ್ತಾಭಾರತಿವಾರ್ತಾಭಾರತಿ24 Sept 2019 11:08 PM IST
share
ಬಾಳೆಹಣ್ಣು ಮತ್ತು ಬಾಳೆಕಾಯಿ: ಇವುಗಳಲ್ಲಿ ಯಾವುದು ಹೆಚ್ಚು ಒಳ್ಳೆಯದು?

ಬಾಳೆಹಣ್ಣು ಮತ್ತು ಬಾಳೆಕಾಯಿ ಎರಡೂ ನಮ್ಮ ಆರೋಗ್ಯಕ್ಕೆ ಲಾಭದಾಯವಾಗಿವೆಯಾದರೂ ಅವುಗಳ ನಡುವೆ ಕೆಲವು ವ್ಯತ್ಯಾಸಗಳಿವೆ. ಎರಡೂ ಸಮೃದ್ಧ ಪೋಷಕಾಂಶಗಳನ್ನು ಹೊಂದಿವೆ. ಸಿಹಿಯಾಗಿರುವ ಹಣ್ಣಿಗೆ ಹೋಲಿಸಿದರೆ ಬಾಳೆಕಾಯಿ ಸ್ವಲ್ಪ ಕಹಿರುಚಿ ಹೊಂದಿದೆ. ಇವೆರಡನ್ನು ಸೇವಿಸುವುದರ ಲಾಭ-ನಷ್ಟಗಳ ಕುರಿತು ಮಾಹಿತಿಯಿಲ್ಲಿದೆ.

► ಬಾಳೆಹಣ್ಣು

ಬಾಳೆಹಣ್ಣು ಎಲ್ಲ ಕಡೆಗಳಲ್ಲಿಯೂ ಸುಲಭವಾಗಿ ಲಭ್ಯವಿದೆ. ಅಗ್ಗದ ದರಗಳಲ್ಲಿ ಸಿಗುವ ಇದು ನಮ್ಮ ಭಾರತದಲ್ಲಿ ಅದೆಷ್ಟೋ ಜನರ ಪಾಲಿನ ಊಟವಾಗಿದೆ ಎಂದರೆ ಅಚ್ಚರಿಯೇನಿಲ್ಲ.

ಹಳದಿ ಬಣ್ಣದ ಅಥವಾ ಸರಿಯಾಗಿ ಪಕ್ವಗೊಂಡ ಬಾಳೆಹಣ್ಣು ಸುಲಭವಾಗಿ ಜೀರ್ಣಗೊಳ್ಳುತ್ತದೆ. ಅದು ಹಣ್ಣಾಗುವಾಗ ಅದರಲ್ಲಿಯ ಪ್ರತಿರೋಧಿ ಪಿಷ್ಟವು ಸಕ್ಕರೆಯಾಗಿ ಪರಿವರ್ತನೆಗೊಳ್ಳುವುದು ಇದಕ್ಕೆ ಕಾರಣ. ಬಾಳೆಹಣ್ಣು ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು,ಇದು ಜೀರ್ಣಕ್ರಿಯೆಗೆ ನೆರವಾಗುತ್ತದೆ. ಚೆನ್ನಾಗಿ ಪಕ್ವಗೊಂಡ ಬಾಳೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ.

 ಬಾಳೆಹಣ್ಣು ಪಕ್ವಗೊಂಡಾಗ ತನ್ನಲ್ಲಿಯ ಕೆಲವು ಕಿರು ಪೋಷಕಾಂಶಗಳನ್ನು ಕಳೆದುಕೊಳ್ಳುತ್ತದೆ ಎಂದು ಕೆಲವು ಅಧ್ಯಯನಗಳು ತಿಳಿಸಿವೆ. ಬಾಳೆಹಣ್ಣಿನಲ್ಲಿ ಅಧಿಕ ಸಕ್ಕರೆಯ ಅಂಶವಿರುವುದರಿಂದ ಅದರ ಸೇವನೆಯು ಟೈಪ್-2 ಮಧುಮೇಹ ರೋಗಿಗಳಿಗೆ ಹಾನಿಕಾರಕವಾಗಿದೆ.

► ಬಾಳೆಕಾಯಿ

 ಬಾಳೆಕಾಯಿ ಹಸಿಯಾಗಿ ತಿಂದಾಗ ಅಹಿತಕರ ರುಚಿಯನ್ನು ಹೊಂದಿರುವುದರಿಂದ ಹೆಚ್ಚಿನ ಜನರು ಅದನ್ನು ತಿನ್ನಲು ಇಷ್ಟಪಡುವುದಿಲ್ಲ. ಸಾಮಾನ್ಯವಾಗಿ ಅವುಗಳನ್ನು ಅಡುಗೆಯಲ್ಲಿ ಬಳಸುವ ಮೂಲಕ ಸೇವಿಸಲಾಗುತ್ತದೆ. ಚಿಪ್ಸ್,ಫ್ರೈ ಇತ್ಯಾದಿ ಸಿದ್ಧ ಆಹಾರಗಳ ತಯಾರಿಕೆಗೆ ಬಾಳೆಕಾಯಿ ಬಳಕೆಯಾಗುತ್ತದೆ.

ಬಾಳೆಕಾಯಿಯಲ್ಲಿ ಅಧಿಕ ಪ್ರಮಾಣದಲ್ಲಿರುವ ಪ್ರತಿರೋಧಿ ಪಿಷ್ಟವು ಬಾಳೆಹಣ್ಣಿನಂತೆ ಸಕ್ಕರೆಯ ರೂಪಕ್ಕೆ ಪರಿವರ್ತನೆಯಾಗಿರುವುದಿಲ್ಲ. ಇದರಲ್ಲಿ ಸಕ್ಕರೆಯ ಪ್ರಮಾಣ ಕಡಿಮೆಯಿರುವುದರಿಂದ ಕಡಿಮೆ ಸಕ್ಕರೆಯ ಆಹಾರ ಕ್ರಮವನ್ನು ಪಾಲಿಸುವವರಿಗೆ ಸೂಕ್ತವಾಗಿದೆ. ಮಧುಮೇಹಿಗಳು ಯಾವುದೇ ಚಿಂತೆ ಇಲ್ಲದೆ ಬಾಳೆಕಾಯಿಯನ್ನು ತಿನ್ನಬಹುದು. ಬಾಳೆಕಾಯಿಯಲ್ಲಿ ಕೆಲವು ಪ್ರೊಬಯಾಟಿಕ್ ಬ್ಯಾಕ್ಟೀರಿಯಾ ಇರುವುದರಿಂದ ಅದು ಕರುಳಿನ ಆರೋಗ್ಯಕ್ಕೆ ಒಳ್ಳೆಯದು. ಶರೀರವು ಪೋಷಕಾಂಶಗಳನ್ನು ತ್ವರಿತವಾಗಿ ಹೀರಿಕೊಳ್ಳಲೂ ಅದು ನೆರವಾಗುತ್ತದೆ.

ಆದರೆ ಪಕ್ವಗೊಂಡ ಬಾಳೆಹಣ್ಣಿಗೆ ಹೋಲಿಸಿದರೆ ಕಾಯಿಯಲ್ಲಿ ಕೆಲವೇ ಉತ್ಕರ್ಷಣ ನಿರೋಧಕಗಳಿರುತ್ತವೆ. ಅದರಲ್ಲಿಯ ಪ್ರತಿರೋಧಿ ಪಿಷ್ಟವು ಗ್ಯಾಸ್ಟ್ರಿಕ್ ಸಮಸ್ಯೆಗಳು ಮತ್ತು ಹೊಟ್ಟೆಯುಬ್ಬರಕ್ಕೆ ಕಾರಣವಾಗುವ ಸಾಧ್ಯತೆಯಿರುತ್ತದೆ.

 ಒಟ್ಟಾರೆಯಾಗಿ ಹೇಳಬೇಕಿದ್ದರೆ ಬಾಳೆಹಣ್ಣಾಗಲಿ ಅಥವಾ ಬಾಳೆಕಾಯಿಯಾಗಲಿ,ಆರೋಗ್ಯಕ್ಕೆ ಎರಡೂ ಉತ್ತಮವೇ. ಆದರೆ ರಕ್ತದಲ್ಲಿಯ ಸಕ್ಕರೆಯ ಮಟ್ಟವು ಅನಿಯಂತ್ರಿತವಾಗಿರುವವರು ಬಾಳೆಹಣ್ಣು ತಿನ್ನುವುದರಿಂದ ದೂರವಿರಬೇಕು. ಬದಲಿಗೆ ವಿವಿಧ ರೂಪಗಳಲ್ಲಿ ಬಾಳೆಕಾಯಿಯನ್ನು ತಿನ್ನಬಹುದು.

 ನೀವು ಬಾಳೆಹಣ್ಣು ಅಥವಾ ಬಾಳೆಕಾಯಿ ತಿನ್ನಿರಿ,ಆದರೆ ನಿಮ್ಮ ಶರೀರವು ಹೇಗೆ ಅದನ್ನು ಸಂಸ್ಕರಿಸುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅವೆರಡರ ಪೈಕಿ ಯಾವುದನ್ನು ತಿನ್ನಬೇಕು ಎನ್ನುವುದು ನಿಮ್ಮದೇ ಆಯ್ಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X