Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗಾಯಾಳು ಬುಮ್ರಾ ಬದಲಿಗೆ ಉಮೇಶ್...

ಗಾಯಾಳು ಬುಮ್ರಾ ಬದಲಿಗೆ ಉಮೇಶ್ ಯಾದವ್‌ಗೆ ಸ್ಥಾನ

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ

ವಾರ್ತಾಭಾರತಿವಾರ್ತಾಭಾರತಿ24 Sept 2019 11:50 PM IST
share
ಗಾಯಾಳು ಬುಮ್ರಾ  ಬದಲಿಗೆ ಉಮೇಶ್ ಯಾದವ್‌ಗೆ ಸ್ಥಾನ

 ಹೊಸದಿಲ್ಲಿ, ಸೆ.24: ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಭಾರತದ ಟೆಸ್ಟ್ ತಂಡದಲ್ಲಿ ಗಾಯಾಳು ಜಸ್‌ಪ್ರೀತ್ ಬುಮ್ರಾ ಬದಲಿಗೆ ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ. ಬುಮ್ರಾ ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿದ್ದಾರೆ. ಬುಮ್ರಾ ಬೆನ್ನಿಗೆ ಗಾಯವಾಗಿರುವ ವಿಚಾರ ರೇಡಿಯೊಲಾಜಿಕಲ್ ಸ್ಕ್ರೀನಿಂಗ್ ಮೂಲಕ ಪತ್ತೆಯಾಗಿದೆ ಎಂದು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ. ಬುಮ್ರಾ ಈಗ ಬೆಂಗಳೂರಿನ ಎನ್‌ಸಿಎ ಪುನರ್ವಸತಿ ಕೇಂದ್ರಕ್ಕೆ ದಾಖಲಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸಲಿದೆ.

   ಬುಮ್ರಾ ತನ್ನ ತವರಿನಲ್ಲಿ ಮೊದಲ ಟೆಸ್ಟ್ ಆಡಲು ಇನ್ನಷ್ಟು ದಿನ ಕಾಯಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಬುಮ್ರಾ ಉತ್ತಮ ಫಾರ್ಮ್ ನಲ್ಲಿದ್ದಾರೆ. 12 ಟೆಸ್ಟ್‌ಗಳಲ್ಲಿ 62 ವಿಕೆಟ್‌ಗಳನ್ನು ಪಡೆದಿದ್ದಾರೆ. ವಿದೇಶದಲ್ಲಿ ನಡೆದ ಸರಣಿಯಲ್ಲಿ ಅವರು ಯಶಸ್ಸು ಗಳಿಸಿದ್ದಾರೆ.

ಭರ್ಜರಿ ಫಾರ್ಮ್‌ನಲ್ಲಿರುವ ಬುಮ್ರಾ ವೆಸ್ಟ್ ಇಂಡೀಸ್‌ನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 13 ವಿಕೆಟ್ ಪಡೆದಿದ್ದರು. ಇದರಲ್ಲಿ ಎರಡು ಬಾರಿ ಐದು ವಿಕೆಟ್‌ಗಳ ಗೊಂಚಲು ಮತ್ತು ಹ್ಯಾಟ್ರಿಕ್ ವಿಕೆಟ್ ಸೇರಿವೆ.

    ದಕ್ಷಿಣ ಆಫ್ರಿಕಾ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಸರಣಿಯಲ್ಲಿ ಉಭಯ ತಂಡಗಳು 1-1 ಗೆಲುವಿನೊಂದಿಗೆ ಪ್ರಶಸ್ತಿಯನ್ನು ಹಂಚಿಕೊಂಡಿವೆ. ವಿಶ್ವಕಪ್ ನಂತರದ ವೆಸ್ಟ್ ಇಂಡೀಸ್ ಪ್ರವಾಸದ ಸೀಮಿತ ಓವರ್‌ಗಳ ಟೂರ್ನಿಯಲ್ಲೂ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಕಳೆದ ಮೂರು ವರ್ಷಗಳಿಂದ ತವರಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಉಮೇಶ್ ಯಾದವ್ ಅವರು ಬುಮ್ರಾ ಬದಲಿಗೆ ಅರ್ಹವಾಗಿಯೇ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಗಳನ್ನು ಪಡೆದಿದ್ದರು.

  ಆಸ್ಟ್ರೇಲಿಯದಲ್ಲಿ ಯಾದವ್ ಕೇವಲ ಒಂದು ಟೆಸ್ಟ್ ಆಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿರಲಿಲ್ಲ. ದಕ್ಷಿಣ ಆಫ್ರಿಕಾ ಸರಣಿಗೆ ಭಾರತೀಯ ತಂಡದ ವೇಗದ ಬೌಲಿಂಗ್ ವಿಭಾಗದಲ್ಲಿ ಇಶಾಂತ್ ಶರ್ಮಾ ಮತ್ತು ಮುಹಮ್ಮದ್ ಶಮಿ ಇದ್ದಾರೆ. ಅಕ್ಟೋಬರ್ 2 ರಂದು ವಿಶಾಖಪಟ್ಟಣಂನಲ್ಲಿ ಮೊದಲ ಟೆಸ್ಟ್ ಪ್ರಾರಂಭವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X