ಮಸೂತಿಯ ರೈಲ್ವೆ ಅಂಡರ್ಪಾಸ್ನಲ್ಲಿ 4 ಅಡಿ ನೀರು ಶೇಖರಣೆ: ವಾಹನ ಸಂಚಾರಕ್ಕೆ ಅಡ್ಡಿ
ಕೆಳಸೇತುವೆಯ ಅವೈಜ್ಞಾನಿಕ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ
![ಮಸೂತಿಯ ರೈಲ್ವೆ ಅಂಡರ್ಪಾಸ್ನಲ್ಲಿ 4 ಅಡಿ ನೀರು ಶೇಖರಣೆ: ವಾಹನ ಸಂಚಾರಕ್ಕೆ ಅಡ್ಡಿ ಮಸೂತಿಯ ರೈಲ್ವೆ ಅಂಡರ್ಪಾಸ್ನಲ್ಲಿ 4 ಅಡಿ ನೀರು ಶೇಖರಣೆ: ವಾಹನ ಸಂಚಾರಕ್ಕೆ ಅಡ್ಡಿ](https://www.varthabharati.in/sites/default/files/images/articles/2019/09/25/211755-1569391506.gif)
ವಿಜಯಪುರ, ಸೆ.25: ಭಾರೀ ಮಳೆಯಿಂದ ವಿಜಯಪುರ ಜಿಲ್ಲೆಯ ಮಸೂತಿ ಗ್ರಾಮದ ಹತ್ತಿರದ ಎನ್ಟಿಪಿಸಿ ರೈಲ್ವೆ ಅಂಡರ್ ಪಾಸ್ನಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ತೀವ್ರ ಸಂಕಷ್ಟಕ್ಕೊಳಗಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಇಲ್ಲಿನ ಕೆಳಸೇತುವೆಯಲ್ಲಿ 4 ಅಡಿ ನಿಂತ ನೀರಿನಲ್ಲಿ ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಸಾರಿಗೆ ಸಂಸ್ಥೆಯ ಬಸ್ಸೊಂದು ಸೇತುವೆಯ ನೀರಿನಲ್ಲಿ ಸಿಕ್ಕಿಹಾಕಿಕೊಂಡು ಸುಮಾರು ಒಂದು ಗಂಟೆ ಕಾಲ ಪರದಾಡುವಂತಾಗಿತ್ತು. ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವಾಹನ ಹುಡುಕಿಕೊಂಡು ಸ್ವಗ್ರಾಮ ತಲುಪಿದರು.
ಅವೈಜ್ಞಾನಿಕ ಕಾಮಗಾರಿಯಿಂದ ಅಂಡರ್ ಪಾಸ್ ನಲ್ಲಿ ಈ ಅವಾಂತರ ಸೃಷ್ಟಿಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದು, ನಿರ್ಮಾಣ ಕಾಮಗಾರಿ ಗುತ್ತಿಗೆದಾರನ ವಿರುದ್ಧ ಪ್ರಯಾಣಿಕರು ಹಾಗೂ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Next Story