Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಹಕಾರ:...

ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯ ಬಿಲ್ಡರ್-ಡೆವಲರ್ಸ್‌ಗಳ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ25 Sept 2019 7:40 PM IST
share
ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.25: ನಗರದಲ್ಲಿ ವಾಸಿಸುತ್ತಿರುವ ಸ್ಲಮ್ ನಿವಾಸಿಗಳಿಗೆ ಬಹುಮಹಡಿ ವಸತಿ ನಿಲಯಗಳನ್ನು ನಿರ್ಮಿಸಲು ಸರಕಾರದೊಂದಿಗೆ ಕೈಜೋಡಿಸುವ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಆರ್ಥಿಕ ಸಹಾಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಬುಧವಾರ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿಯ ಮಂಡಳಿ ವತಿಯಿಂದ ಕರ್ನಾಟಕ ರಾಜ್ಯ, ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಬಿಲ್ಡರ್ ಮತ್ತು ಡೆವಲಪರ್ಸ್‌ಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರಕಾರ 1 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸ್ಲಮ್ ನಿವಾಸಿಗಳಿಗೆ ಬಹುಮಹಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಆ ಮೂಲಕ ರಿಯಲ್ ಎಸ್ಟೇಟ್ ಉದ್ಯಮದ ಪುನಃಶ್ಚೇತನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ರಿಯಲ್ ಎಸ್ಟೇಟ್ ಕ್ಷೇತ್ರ ಸದ್ಯ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಸಿದ್ಧವಿದೆ. ಉದ್ಯಮದ ಕಾರ್ಯನಿರ್ವಹಣೆಯ ವೇಳೆ ಸರಕಾರಿ ಅಧಿಕಾರಿಗಳು ಅಡಚಣೆ ಉಂಟು ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಹಾಗೂ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಭರವಸೆ ನೀಡಿದರು.

2022ರ ವೇಳೆಗೆ ಪ್ರತಿಯೊಬ್ಬರಿಗೆ ಸೂರು ಕಲ್ಪಿಸಲು ಕೇಂದ್ರ ಸರಕಾರ ಮಹತ್ವದ ಯೋಜನೆಯನ್ನು ರೂಪಿಸಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರವು ಅಂಬೇಡ್ಕರ್, ಬಸವ, ದೇವರಾಜ ಅರಸು, ಮತ್ತಿತರ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2824 ಕೋಟಿ ರೂ.ವನ್ನು ಖರ್ಚು ಮಾಡಲಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿಯ ಮಂಡಳಿಯ ಅಧ್ಯಕ್ಷ ನಿರಂಜನ್ ಹಿರಾನಂದಾನಿ ಮಾತನಾಡಿ, ಕೇಂದ್ರ ಸರಕಾರ ಕಾರ್ಪೊರೇಟ್ ಮೇಲಿನ ತೆರಿಗೆಯನ್ನು ಶೇ.22ಕ್ಕೆ ಇಳಿಸಿರುವುದು ಉತ್ತೇಜನಕಾರಿಯಾಗಿದೆ. ಇದರಿಂದ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣುವುದಕ್ಕೆ ಸಹಾಯಕವಾಗಲಿದೆ ಎಂದರು.

ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ಉದ್ಯಮದ ಅಭಿವೃದ್ದಿಗೆ ಸಾಕಷ್ಟು ಅವಕಾಶಗಳಿವೆ. ಬೆಂಗಳೂರಿಗೆ ಸಮೀಪವಿರುವ ಮೈಸೂರು ನಗರ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ವಾತಾವರಣವನ್ನು ಒಳಗೊಂಡಿದೆ. ಹೀಗಾಗಿ ಸರಕಾರ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಉದ್ಯಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿಯ ಮಂಡಳಿಯ ರಾಜ್ಯಾಧ್ಯಕ್ಷ ಸತೀಶ್‌ಕುಮಾರ್ ಮಾತನಾಡಿ, ಸದ್ಯದ ಮಟ್ಟಿಗೆ ಮಾತ್ರ ರಿಯಲ್ ಎಸ್ಟೇಟ್ ಉದ್ಯಮದ ಬೆಳವಣಿಗೆಯಲ್ಲಿ ಕುಂಠಿತ ಕಾಣುತ್ತಿರಬಹುದು. ಆದರೆ, ಕೆಲವೇ ವರ್ಷಗಳಲ್ಲಿ ಚೇತರಿಕೆ ಕಾಣುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ತಿಳಿಸಿದರು.

ಬೆಂಗಳೂರಿನಲ್ಲಿಯೇ ಕೃಷಿಯೇತರ ಭೂಮಿ ಸಾಕಷ್ಟಿದೆ. ಹಾಗೂ ಬೆಂಗಳೂರು-ಮೈಸೂರು ರಸ್ತೆಯಲ್ಲೂ ಸಾಕಷ್ಟು ಇಂತಹ ಭೂಮಿಯಿದೆ. ಇದನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕವಾಗಿ ಬದಲಾವಣೆಗಳನ್ನು ಮಾಡಿದರೆ, ಉದ್ಯಮದ ಬೆಳವಣಿಗೆ ಹಾಗೂ ಆ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು. ಈ ವೇಳೆ ಕಾರ್ಯದರ್ಶಿ ಸುಜಿತ್ ಕುಮಾರ್, ಪ್ರವೀಣ್ ಜೈನ್, ಪ್ರೇಮ್‌ಕುಮಾರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X