Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೋಕಿಯೋ ಒಲಿಂಪಿಕ್ಸ್ ನತ್ತ ವಿನೇಶ್ ಚಿತ್ತ

ಟೋಕಿಯೋ ಒಲಿಂಪಿಕ್ಸ್ ನತ್ತ ವಿನೇಶ್ ಚಿತ್ತ

ವಾರ್ತಾಭಾರತಿವಾರ್ತಾಭಾರತಿ25 Sept 2019 11:00 PM IST
share
ಟೋಕಿಯೋ ಒಲಿಂಪಿಕ್ಸ್ ನತ್ತ ವಿನೇಶ್ ಚಿತ್ತ

ಹೊಸದಿಲ್ಲಿ, ಸೆ.25: ಭಾರತದ ಖ್ಯಾತ ಕುಸ್ತಿತಾರೆ ವಿನೇಶ್ ಫೋಗಟ್ ಕಝಖ್‌ಸ್ತಾನದ ನೂರ್‌ಸುಲ್ತಾನ್‌ನಲ್ಲಿ ಮೊದಲ ಬಾರಿ ವಿಶ್ವ ಮಟ್ಟದ ಪ್ರಶಸ್ತಿ(ಕಂಚು)ಜಯಿಸಿದ್ದರು. ಆದರೆ, ಅವರಿಗೆ ಪ್ರಮುಖ ಅಂತರ್‌ರಾಷ್ಟ್ರೀಯ ಟೂರ್ನಿಗಳಲ್ಲಿ ಜಪಾನ್ ಕುಸ್ತಿಪಟುಗಳು ಕಠಿಣ ಸವಾಲೊಡ್ಡುತ್ತಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ 25ರ ಹರೆಯದ ವಿನೇಶ್ 53 ಕೆಜಿ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ಜಪಾನ್‌ನ ಮಾಯು ಮುಕೈಡಾಗೆ ಸೋತಿದ್ದರು. ಮುಕೈಡಾ ಫೈನಲ್‌ಗೆ ತಲುಪಿದ ಕಾರಣ ರಿಪೆಚೇಜ್ ಸುತ್ತಿಗೆ ತಲುಪಿದ ವಿನೇಶ್ ಕಂಚಿನ ಪದಕ ಜಯಿಸಿ 2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಆಡುವ ಅರ್ಹತೆ ಪಡೆದಿದ್ದರು.

‘‘ನನ್ನ ಪ್ರಕಾರ 53 ಕೆಜಿ ತೂಕ ವಿಭಾಗದಲ್ಲಿ ಪ್ರತಿಯೊಬ್ಬರೂ ಬಲಿಷ್ಠರಾಗಿರುತ್ತಾರೆ. ಆದರೆ, ಜಪಾನ್ ಕುಸ್ತಿಪಟುಗಳು ಖಂಡಿತವಾಗಿಯೂ ಬಲಶಾಲಿಗಳು. ಅವರನ್ನು ಅವರದೇ ನೆಲದಲ್ಲಿ ಮಣಿಸುವುದು ತುಂಬಾ ಕಷ್ಟಕರ. ಒಲಿಂಪಿಕ್ಸ್‌ನಲ್ಲಿ ಜಪಾನ್ ಕುಸ್ತಿಪಟುಗಳನ್ನು ಮಣಿಸಿ ಪದಕ ಜಯಿಸಿದರೆ ಅದೊಂದು ಹೆಚ್ಚು ತೃಪ್ತಿದಾಯಕ ಸಾಧನೆಯಾಗಲಿದೆ. ನಾನು ಕ್ರಮಬದ್ಧವಾಗಿ ಯೋಜನೆ ರೂಪಿಸುವೆ’’ ಎಂದು ವಿನೇಶ್ ಹೇಳಿದ್ದಾರೆ.

   ‘‘ರಿಯೋ ಒಲಿಂಪಿಕ್ಸ್‌ನಲ್ಲಿ ಕಳೆದುಕೊಂಡಿರುವ ಪದಕವನ್ನು ಮರಳಿ ಪಡೆಯಲು ಲಭಿಸಿರುವ ಅವಕಾಶವನ್ನು ಬಳಸಿಕೊಳ್ಳಲು ಇಚ್ಛಿಸಿದ್ದೇನೆ. ಆರು ನಿಮಿಷಗಳ ಕುಸ್ತಿ ಸ್ಪರ್ಧೆಯಲ್ಲಿ ಎಲ್ಲಿಯೂ ಕೂಡ ನನ್ನ ಆಟದ ತೀವ್ರತೆ ಕಡಿಮೆಯಾಗದಂತೆ ನೋಡಿಕೊಳ್ಳುವೆ. ಅದು ನನಗೆ ಅತ್ಯಂತ ಮುಖ್ಯವಾಗಿದೆ. ಒಲಿಂಪಿಕ್ಸ್ ಕೋಟಾ ಪಡೆದಿರುವುದಕ್ಕೆ ನಿರಾಳವಾಗಿದ್ದೇನೆ. ನನ್ನ ಪಾಲಿಗೆ ಅದು ಮಹತ್ವದ ವಿಚಾರ. ಇನ್ನು ಮುಂದೆ ನಾನು ಒಲಿಂಪಿಕ್ಸ್‌ಗೆ ಸಜ್ಜಾಗುವೆ. ಈ ಹಿಂದೆ ನಾವು ಒಲಿಂಪಿಕ್ಸ್ ನಲ್ಲಿ ಸ್ಥಾನ ಪಡೆಯಲು ನಿರಂತರ ಹೋರಾಟ ನಡೆಸಬೇಕಾಗಿತ್ತು. ಅಂತಹ ಟೂರ್ನಮೆಂಟ್‌ಗ ತಯಾರಾಗಲು ಸಮಯ ಲಭಿಸುತ್ತಿರಲಿಲ್ಲ. ಇದೀಗ ನನಗೆ ಒಲಿಂಪಿಕ್ಸ್ ಗೆ ತಯಾರಾಗಲು, ಕೌಶಲ್ಯವನ್ನು ವೃದ್ದಿಸಿಕೊಳ್ಳಲು ಸಾಕಷ್ಟು ಸಮಯವಿದೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ನಾನು ಮಾಡಿದ್ದ ತಪ್ಪನ್ನು ತಿದ್ದಿಕೊಳ್ಳುವೆ. ನಾವು ಏನೇ ಉತ್ತಮವಾದುದನ್ನು ಪಡೆಯಲು ಸಮಯದ ಅಗತ್ಯವಿರುತ್ತದೆ. ನನಗೆ ಲಭಿಸಿರುವ ಸಮಯಾವಕಾಶವನ್ನು ಸರಿಯಾಗಿ ಬಳಸಿಕೊಳ್ಳುತ್ತೇನೆ’’ ಎಂದು ವಿನೇಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X