ಬಿಜೆಪಿ ಬೆಂಬಲಿಸುವ ವಿಚಾರ ಸುಮಲತಾರಿಗೆ ಬಿಟ್ಟದ್ದು: ಡಿಸಿಎಂ ಡಾ.ಅಶ್ವಥ್ ನಾರಾಯಣ
ಕೆ.ಆರ್.ಪೇಟೆ ವಿಧಾನಸಭಾ ಉಪಚುನಾವಣೆ
![ಬಿಜೆಪಿ ಬೆಂಬಲಿಸುವ ವಿಚಾರ ಸುಮಲತಾರಿಗೆ ಬಿಟ್ಟದ್ದು: ಡಿಸಿಎಂ ಡಾ.ಅಶ್ವಥ್ ನಾರಾಯಣ ಬಿಜೆಪಿ ಬೆಂಬಲಿಸುವ ವಿಚಾರ ಸುಮಲತಾರಿಗೆ ಬಿಟ್ಟದ್ದು: ಡಿಸಿಎಂ ಡಾ.ಅಶ್ವಥ್ ನಾರಾಯಣ](https://www.varthabharati.in/sites/default/files/images/articles/2019/09/25/211894-1569435789.jpg)
ಮಂಡ್ಯ, ಸೆ.25: ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಗೆಲುವಿಗೆ ಬಿಜೆಪಿ ಕೊಡುಗೆಯೂ ಇದೆ. ಆದರೆ, ಕೆ.ಆರ್.ಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೇ ಬಿಟ್ಟ ವಿಚಾರ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಸುಪ್ರೀಂಕೋರ್ಟ್ ತೀರ್ಮಾನ ಹೊರ ಬಿದ್ದ ನಂತರ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದರು.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಆ ರೀತಿ ಯಾವುದೇ ಬೆಳವಣಿಗೆ ಹಾಗೂ ತೀರ್ಮಾನ ನಡೆದೇ ಇಲ್ಲ ಎಂದು ಸ್ಪಷ್ಟಪಡಿಸಿದರು.
Next Story