ಆಪರೇಷನ್ ಕಮಲ ಆಡಿಯೋ ಪ್ರಕರಣ: ವಿಚಾರಣೆ ಅಕ್ಟೋಬರ್ 25ಕ್ಕೆ ಮುಂದೂಡಿಕೆ
![ಆಪರೇಷನ್ ಕಮಲ ಆಡಿಯೋ ಪ್ರಕರಣ: ವಿಚಾರಣೆ ಅಕ್ಟೋಬರ್ 25ಕ್ಕೆ ಮುಂದೂಡಿಕೆ ಆಪರೇಷನ್ ಕಮಲ ಆಡಿಯೋ ಪ್ರಕರಣ: ವಿಚಾರಣೆ ಅಕ್ಟೋಬರ್ 25ಕ್ಕೆ ಮುಂದೂಡಿಕೆ](https://www.varthabharati.in/sites/default/files/images/articles/2019/09/26/211954-1569506284.jpg)
ಬೆಂಗಳೂರು, ಸೆ. 26: ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆಸಿದ್ದರೆನ್ನಲಾದ ‘ಆಪರೇಷನ್ ಕಮಲ’ ಸಂಬಂಧದ ಆಡಿಯೋ ಪ್ರಕರಣದ ವಿಚಾರಣೆಯನ್ನು ಕಲಬುರ್ಗಿ ಹೈಕೋರ್ಟ್ ಪೀಠ ಅಕ್ಟೋಬರ್ 25ಕ್ಕೆ ಮುಂದೂಡಿದೆ.
ಗುರುಮಿಠ್ಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ಅವರೊಂದಿಗೆ ‘ಆಪರೇಷನ್ ಕಮಲ’ಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ದೇವದುರ್ಗ ಶಾಸಕ ಶಿವನಗೌಡ ನಾಯಕ್, ಪ್ರೀತಂಗೌಡ ಹಾಗೂ ಪತ್ರಕರ್ತ ಮರಮಕಲ್ ವಿರುದ್ಧ ಶರಣಗೌಡ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿ ಶರಣಗೌಡ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರ ಪೀಠದ ಮುಂದೆ ಬರಬೇಕಿತ್ತು. ಆದರೆ, ಅವರು ರಜೆ ಇದ್ದ ಕಾರಣ ವಿಚಾರಣೆ ಮುಂದೂಡಲಾಗಿದೆ ಎಂದು ಗೊತ್ತಾಗಿದೆ.
Next Story