Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಕೈ' ಶಾಸಕರ ಕ್ಷೇತ್ರಗಳಿಗೆ ನೀಡಿದ್ದ...

'ಕೈ' ಶಾಸಕರ ಕ್ಷೇತ್ರಗಳಿಗೆ ನೀಡಿದ್ದ ಅನುದಾನ ಕಡಿತ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Sept 2019 7:40 PM IST
share
ಕೈ ಶಾಸಕರ ಕ್ಷೇತ್ರಗಳಿಗೆ ನೀಡಿದ್ದ ಅನುದಾನ ಕಡಿತ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಸೆ.26: ನಗರದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನೀಡಿದ್ದ ಅನುದಾನ ಕಡಿತಗೊಳಿಸಿ ಬಿಜೆಪಿ ಶಾಸಕರಿಗೆ ಅನುದಾನ ಹಂಚಿಕೆ ಮಾಡಿರುವುದನ್ನು ಖಂಡಿಸಿ ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗುರುವಾರ ನಗರದ ಪುರಭವನದ ಮುಂಬಾಗದಲ್ಲಿ ಜಮಾಯಿಸಿದ್ದ ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅನುದಾನ ಕಡಿತ ಮಾಡುವ ಮೂಲಕ ರಾಜ್ಯ ಸರಕಾರ ಪ್ರತೀಕಾರದ ರಾಜಕಾರಣ ನಡೆಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷ ರಾಜಕಾರಣ ಮಾಡುವುದು ಬಿಡಬೇಕು. ಪಕ್ಷಾತೀತವಾಗಿ ಎಲ್ಲ ಶಾಸಕರ ಕ್ಷೇತ್ರಗಳಿಗೂ ಸಮಗ್ರವಾದ ಅನುದಾನ ಹಂಚಿಕೆ ಮಾಡಬೇಕು. ಈ ಹಿಂದೆ ನಾನು ಉಸ್ತುವಾರಿ ಸಚಿವನಾಗಿದ್ದ ವೇಳೆ ಎಲ್ಲರಿಗೂ ಪಕ್ಷಾತೀತವಾಗಿ ಅನುದಾನ ಹಂಚಿಕೆ ಮಾಡಿದ್ದೇವೆ. ಆದರೆ, ಈಗಿರುವ ಸರಕಾರ ತಾರತಮ್ಯ ಮಾಡುತ್ತಿದೆ ಎಂದರು. ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ನೀಡಿದ್ದ ಅನುದಾನವನ್ನು ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಸ್ಥಗಿತಗೊಳಿಸಿದೆ. ಅಲ್ಲದೆ, ಬಿಬಿಎಂಪಿ ಸದಸ್ಯರಿಗೆ ನೀಡಿದ್ದ ಅನುದಾನವನ್ನೂ ಹಿಂಪಡೆದು ಬಿಜೆಪಿ ಶಾಸಕರು ಹಾಗೂ ಸದಸ್ಯರಿಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಬಿಜೆಪಿ ಸರಕಾರಕ್ಕೆ ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಅಧಿಕ ಪಾಲು ಬಿಜೆಪಿ ಶಾಸಕರಿಗೆ ನೀಡಬೇಕಿತ್ತು. ಆದರೆ, ಹಿಂದಿನ ಸರಕಾರ ನೀಡಿದ್ದ ಅನುದಾನವನ್ನು ಹಿಂಪಡೆದಿರುವುದು ಸರಿಯಲ್ಲ. ನಗರದಲ್ಲಿರುವ 10 ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 3449 ಕೋಟಿ ರೂ.ಗಳು ನೀಡಿದ್ದಾರೆ. ಸಮ್ಮಿಶ್ರ ಸರಕಾರ ಉರುಳಿಸಲು ಶ್ರಮಿಸಿದ ನಗರದ ಐದು ಅನರ್ಹ ಶಾಸಕರ ಕ್ಷೇತ್ರಗಳಿಗೆ 1671 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ದೂರಿದರು.

ಬಿಜೆಪಿಯ ಶಾಸಕರು ಹಾಗೂ ಕೆಲವು ಮುಖಂಡರು ಮಹಾನಗರ ಪಾಲಿಕೆಯ ಕೊಠಡಿಯೊಂದರಲ್ಲಿ ಕುಳಿತುಕೊಂಡು ತಮಗೆ ಬೇಕಾದಷ್ಟು ಅನುದಾನವನ್ನು ಹಂಚಿಕೊಂಡಿದ್ದಾರೆ. ಈ ಸಂಬಂಧ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆ ಮಾಡಲಾಗುವುದು. ಬಿಜೆಪಿಯ ಅಕ್ರಮಗಳನ್ನು ಬಯಲಿಗಿಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ನಗರದಲ್ಲಿ 28 ಕ್ಷೇತ್ರಗಳಿದ್ದು, 28 ಶಾಸಕರಿದ್ದಾರೆ. ಎಲ್ಲರಿಗೂ ಸಮಗ್ರವಾಗಿ ಅನುದಾನ ಹಂಚಿಕೆ ಮಾಡಬೇಕಿರುವುದು ಮುಖ್ಯಮಂತ್ರಿಯ ಕರ್ತವ್ಯ. ಆದರೆ, ಯಡಿಯೂರಪ್ಪ ಹಿಂದೆ ನೀಡಿದ್ದ ಅನುದಾನವನ್ನು ಕಡಿತಗೊಳಿಸಿ, ಅದನ್ನು ಬಿಜೆಪಿ ಶಾಸಕರಿಗೆ ಹಂಚಿಕೆ ಮಾಡಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಹೇಳಿದರು.

ಹಿಂದಿನ ಯಡಿಯೂರಪ್ಪ ಸರಕಾರದ ಅವಧಿಯಲ್ಲಿ ಪಾಲಿಕೆಯ ಸಾರ್ವಜನಿಕ ಆಸ್ತಿಗಳನ್ನು ಅಡವಿಟ್ಟಿದ್ದರು. ಅದನ್ನು ಸಮ್ಮಿಶ್ರ ಆಡಳಿತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದ ಅವರು, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾತನಾಡುವವರನ್ನು ಜೈಲಿಗೆ ಹಾಕಿಸಲಾಗುತ್ತಿದೆ. ತಮ್ಮ ಪರವಾಗಿದ್ದವರನ್ನು ಜೈಲಿನಿಂದ ಬಿಡಿಸಿ, ಅಧಿಕಾರಕ್ಕೇರಿಸಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

ದಾಸರಹಳ್ಳಿ ಕ್ಷೇತ್ರಕ್ಕೆ 528 ಕೋಟಿಯಿಂದ 57 ಕೋಟಿಗೆ, ಜಯನಗರದಲ್ಲಿ 316 ರಿಂದ 152 ಕೋಟಿ ಹೀಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅನುದಾನ ಕಡಿತ ಮಾಡಲಾಗಿದೆ. ಇದು ಸಲ್ಲ ಎಂದ ಅವರು, ಪ್ರಧಾನಿ ಮೋದಿ ನೆರೆ ಹಾಗೂ ಬರ ಪರಿಹಾರಕ್ಕೆ ನಯಾಪೈಸೆ ಖರ್ಚು ಮಾಡಲಿಲ್ಲ. ಆದರೆ, ಅಮೆರಿಕದಲ್ಲಿ 500 ಕೋಟಿ ಖರ್ಚು ಮಾಡಿಸಿ ಹೌಡಿ ಮೋದಿ ಕಾರ್ಯಕ್ರಮ ಮಾಡಿದ್ದಾರೆ ಎಂದು ಹರಿಪ್ರಸಾದ್ ತಿಳಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಕೃಷ್ಣಪ್ಪ, ಅಬ್ದುಲ್ ವಾಜಿದ್, ಉದಯ ಶಂಕರ್ ಸೇರಿದಂತೆ ಹಲವರಿದ್ದರು.

ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿಯ ದುರ್ಬಳಕೆಗೆ ಒಪ್ಪದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಯಾವುದೇ ಹುದ್ದೆ ತೋರಿಸದೆ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ. ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಮೀಸಲಿಟ್ಟ ಹಣ ಲಪಟಾಯಿಸಲು ರಾಜ್ಯ ಸರಕಾರ ಮುಂದಾಗಿರುವುದು ಆಕ್ಷೇಪಾರ್ಹ.

-ಬಿ.ಕೆ.ಹರಿಪ್ರಸಾದ್, ರಾಜ್ಯಸಭಾ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X