Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ: ಕೆಎಸ್ಸಾರ್ಟಿಸಿಯಿಂದ...

ಮೈಸೂರು ದಸರಾ: ಕೆಎಸ್ಸಾರ್ಟಿಸಿಯಿಂದ ವಿಶೇಷ ಸಾರಿಗೆ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ26 Sept 2019 8:41 PM IST
share
ಮೈಸೂರು ದಸರಾ: ಕೆಎಸ್ಸಾರ್ಟಿಸಿಯಿಂದ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು, ಸೆ. 26: ದಸರಾ ಉತ್ಸವದ ಅಂಗವಾಗಿ ರಾಜ್ಯದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿಯಿಂದ 2,500 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

ಅಕ್ಟೋಬರ್ 4 ರಿಂದ 8ರ ವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 2500ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸದರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಆಚರಣೆ ಮಾಡಲಾಗುವುದು.

ಅನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅಕ್ಟೋಬರ್ 9ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಕಲಬುರಗಿ, ರಾಯಚೂರು.

ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

ದಸರಾ ಉತ್ಸವಕ್ಕೆ 350 ಬಸ್‌ಗಳು: ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ 175 ಹೆಚ್ಚುವರಿ ಬಸ್‌ಗಳು, ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ತಾಣಗಳಾದ ಚಾಮುಂಡಿಬೆಟ್ಟ, ಕೆಆರ್‌ಎಸ್, ಶ್ರೀರಂಗಪಟ್ಟಣ, ನಂಜನಗೂಡು ಸೇರಿ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ. ಕೋಟೆ, ಚಾಮರಾಜನಗರ ಸೇರಿ ಇನ್ನಿತರ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 175 ವಾಹನಗಳು ಸೇರಿ ಒಟ್ಟಾರೆ 350 ದಸರಾ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಮೊಬೈಲ್ ಮೂಲಕ ಎಂ-ಬುಕಿಂಗ್‌ನ್ನು ಹಾಗೂ ಇ-ಟಿಕೇಟ್ ಬುಕಿಂಗ್‌ನ್ನು www.ksrtc.in ವೆಬ್‌ಸೈಟ್ ಮುಖಾಂತರ ಮಾಡಬಹುದು.

ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು. ಪ್ರಯಾಣಿಕರು ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು 708 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

ರಿಯಾಯಿತಿ: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X