Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೋಕ ವಿಶ್ವವಿದ್ಯಾನಿಲಯವೇ ಉತ್ತಮ...

ಲೋಕ ವಿಶ್ವವಿದ್ಯಾನಿಲಯವೇ ಉತ್ತಮ ಪತ್ರಕರ್ತರನ್ನು ನಿರೂಪಿಸುತ್ತದೆ-ಡಾ. ನರೇಂದ್ರ ರೈ ದೇರ್ಲ

`ಮೀಡಿಯಾ @ ವಿಲೇಜ್' ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ26 Sept 2019 10:36 PM IST
share
ಲೋಕ ವಿಶ್ವವಿದ್ಯಾನಿಲಯವೇ ಉತ್ತಮ ಪತ್ರಕರ್ತರನ್ನು ನಿರೂಪಿಸುತ್ತದೆ-ಡಾ. ನರೇಂದ್ರ ರೈ ದೇರ್ಲ

ಪುತ್ತೂರು: ಓರ್ವ ವ್ಯಕ್ತಿ ಉತ್ತಮ ಪತ್ರಕರ್ತರಾಗಲು ಆತನ ಪತ್ರಿಕೋದ್ಯಮ ಪದವಿ, ಸ್ನಾತಕ್ಕೋತ್ತರ ಪದವಿಗಿಂದ ಲೋಕ ವಿಶ್ವವಿದ್ಯಾನಿಲಯ ದಲ್ಲಿ ಕಲಿಯುವ ಪಾಠವೇ ಮುಖ್ಯವಾಗಿದ್ದು, ಆತನನ್ನು ಲೋಕವಿಶ್ವವಿದ್ಯಾನಿಲಯ ಉತ್ತಮ ಪತ್ರಕರ್ತರನ್ನಾಗಿ ನಿರೂಪಿಸುತ್ತದೆ ಎಂದು ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಲೇಖಕ ಡಾ. ನರೇಂದ್ರ ರೈ ದೇರ್ಲ ಹೇಳಿದರು.

ಅವರು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಜಿಡೆಕಲ್ಲಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನ ಸಹಯೋಗ ದಲ್ಲಿ ಗುರುವಾರ ನಡೆದ `ಮೀಡಿಯಾ @ ವಿಲೇಜ್' ಅಭಿಯಾನದ ಅಡಿಯಲ್ಲಿ ನಡೆದ `ಮಾಧ್ಯಮ-ಭಾಷೆ- ಬರವಣಿಗೆ' ಎಂಬ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪತ್ರಕರ್ತರೆಲ್ಲ ನಗರ ಕೇಂದ್ರಿತ ಪತ್ರಿಕೋದ್ಯಮ ವೃತ್ತಿ ಅರಸುತ್ತಾ ಮಹಾನಗರ ಸೇರುತ್ತಿರುವ ಇಂದಿನ ದಿನಗಳಲ್ಲಿ ಪುತ್ತೂರು ತಾಲೂಕು ಪತ್ರಕರ್ತರ ಸಂಘ ಮೀಡಿಯಾ ಎಟ್ ವಿಲೇಜ್ ಅಭಿಯಾನದ ಮೂಲಕ ಗ್ರಾಮೀಣ ಬದುಕಿನ ನಾನಾ ಆಯಾಮಗಳನ್ನು ಸ್ಪರ್ಷಿಸುವ ಕೆಲಸ ಮಾಡುತ್ತಿದೆ. ಇದೊಂದು ರಾಜ್ಯಮಟ್ಟದ ಮೌಲ್ಯ ಇರುವ ಅಭಿಯಾನವಾಗಿದೆ.  ಮಾಧ್ಯಮ ಜಗತ್ತಿಗೆ ಗ್ರಾಮೀಣ ಭಾರತ ಮೂಲವೂ ಹೌದೂ, ಮೌಲ್ಯವೂ ಹೌದು. ಹಳ್ಳಿಯನ್ನು ಮರೆತರೆ ದೇಶಕ್ಕೆ ಮಾತ್ರವಲ್ಲ ಪತ್ರಿಕೋದ್ಯಮಕ್ಕೂ ಉಳಿಗಾಲವಿಲ್ಲ ಎಂದರು.

ಇವತ್ತು ನಮಗೆ ಭತ್ತ ಬೇಕು, ರೈತ ಬೇಡ, ಹಾಲು ಬೇಕು, ಹಸು ಬೇಡ ಎಂಬ ಮನೋಧರ್ಮವಿದೆ. ಗ್ರಾಮೀಣ ಮಣ್ಣಿನ ಮೂಲ ಸತ್ವ ಉಳಿಸುವ ಕೆಲಸ ಮಾಧ್ಯಮ ರಂಗ ಮಾಡಿದರೆ ಅದಕ್ಕಿಂತ ದೊಡ್ಡ ಸೇವೆ ಮತ್ತೊಂದಿಲ್ಲ ಎಂದು ಹೇಳಿದ ಅವರು, ಗ್ರಾಮೀಣ ನೆಲದಿಂದ ಬಂದ ವಿದ್ಯಾರ್ಥಿ ಗಳು ತಮ್ಮ ಮಣ್ಣಿನ ಆಯಾಮಗಳನ್ನು ಬರಹ ರೂಪಕ್ಕೆ ಇಳಿಸುವ ಕಲೆ ರೂಢಿಸಿಕೊಳ್ಳಬೇಕು. ವಸ್ತುವಿಗೆ ಹುಡುಕಾಡುವ ಅಗತ್ಯವಿಲ್ಲ. ಮಣ್ಣಿನ ಕಣದಿಂದ ಹಿಡಿದು ಪರ್ವತವರೆಗೂ ವಸ್ತುಗಳು ಸಿಗುತ್ತವೆ ಎಂದರು.

ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ನಳಿನಾಕ್ಷಿ ಎ.ಎಸ್. ಮಾತನಾಡಿ ವಿದ್ಯಾರ್ಥಿಗಳು ಬರೆಯುವುದನ್ನು ಕಲಿಯುವ ಮೊದಲು ಓದುವುದನ್ನು ಹವ್ಯಾಸ ಮಾಡಿಕೊಳ್ಳಬೇಕು. ಉತ್ತಮ ಭಾಷೆಯನ್ನು ಕರಗತ ಮಾಡಿಕೊಳ್ಳಬೇಕು. ಓದಿಸಿಕೊಂಡು ಹೋಗುವ ಬರಹ ಬಹುಕಾಲ ನೆನಪಿನಲ್ಲಿ ಉಳಿಯುತ್ತದೆ ಎಂದರು.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸುಜಾತ ಎಂ.ಕೆ. ಶುಭ ಹಾರೈಸಿದರು.

ಪತ್ರಕರ್ತರಾದ ಮೇಘಾ ಪಾಲೆತ್ತಾಡಿ, ಸುಧಾಕರ ಸುವರ್ಣ ತಿಂಗಳಾಡಿ ಮತ್ತು ಸಂಶುದ್ದೀನ್ ಸಂಪ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರ ನಡೆಸಿಕೊಟ್ಟರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಅನೀಶ್ ಕುಮಾರ್ ಮರೀಲ್ ಸ್ವಾಗತಿಸಿದರು. ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಅಂಬ್ರೋಸ್ ಎಂ.ಸಿ. ವಂದಿಸಿದರು. ಪತ್ರಕರ್ತರ ಸಂಘದ ಖಜಾಂಜಿ ಕೃಷ್ಣಪ್ರಸಾದ್ ಬಲ್ನಾಡು, ಮೆನೇಜರ್ ಪ್ರವೀಣ್ ಬೊಳುವಾರು, ಸದಸ್ಯ ರಾದ ಕುಮಾರ್ ಕಲ್ಲಾರೆ ಮತ್ತು ಹರೀಶ್ ಸಹಕರಿಸಿದರು.

ಕಾರ್ಯಾಗಾರದ ಕೊನೆಯಲ್ಲಿ ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ನಡುವೆ ಸಂವಾದ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X