Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವೆಂದೂ ಭಾರತದಡಿ ಇರಲಿಲ್ಲ; ಇರುವುದೂ...

ನಾವೆಂದೂ ಭಾರತದಡಿ ಇರಲಿಲ್ಲ; ಇರುವುದೂ ಇಲ್ಲ: ನಾಗಾ ಪ್ರತ್ಯೇಕತಾವಾದಿ ನಾಯಕ

ವಾರ್ತಾಭಾರತಿವಾರ್ತಾಭಾರತಿ27 Sept 2019 9:08 AM IST
share
ನಾವೆಂದೂ ಭಾರತದಡಿ ಇರಲಿಲ್ಲ; ಇರುವುದೂ ಇಲ್ಲ: ನಾಗಾ ಪ್ರತ್ಯೇಕತಾವಾದಿ ನಾಯಕ

ಕ್ಯಾಂಪ್ ಹೆಬ್ರಾನ್ (ನಾಗಾಲ್ಯಾಂಡ್): ಭಾರತದಲ್ಲಿ ನಾಗಾ ಪ್ರಾಂತ್ಯವನ್ನು ಸೇರಿಸುವ ಪ್ರಶ್ನೆಯೇ ಇಲ್ಲ ಎಂದು ಎನ್‌ಎಸ್‌ಸಿಎನ್-ಐಎಂ ಪ್ರಧಾನ ಕಾರ್ಯದರ್ಶಿ ತುಯಿಂಗಾಲೆಂಗ್ ಮ್ಯೂವಾ ಸ್ಪಷ್ಟಪಡಿಸಿದ್ದಾರೆ.

ದಶಕದಷ್ಟು ಹಳೆಯ ವಿವಾದಕ್ಕೆ ಅಕ್ಟೋಬರ್ ತಿಂಗಳ ಒಳಗಾಗಿ ಪರಿಹಾರ ಕಂಡುಕೊಳ್ಳುವ ಸಲುವಾಗಿ ಸಿದ್ಧಪಡಿಸಿದ ಒಪ್ಪಂದದ ಚೌಕಟ್ಟಿನಲ್ಲಿ "ಸೇರ್ಪಡೆ" ಎಂಬ ಪದವನ್ನು ಕೇಂದ್ರ ಸರ್ಕಾರ ತಪ್ಪಾಗಿ ವಿಶ್ಲೇಷಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

"ನಾವೆಂದೂ ಭಾರತದಡಿ ಇರಲಿಲ್ಲ; ಇರುವುದೂ ಇಲ್ಲ. ಅಂತಿಮ ಪರಿಹಾರದಲ್ಲಿ ನಾಗಾಗಳನ್ನು ಭಾರತ ದೇಶದಲ್ಲಿ ಸೇರಿಸಿಕೊಳ್ಳುವುದಾದರೆ, ಏನೇ ಎದುರಾದರೂ ನಾವು ಅದನ್ನು ಸ್ವೀಕರಿಸುವುದಿಲ್ಲ, ಕ್ಷಮಿಸಿ" ಎಂದು ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡಿದ 86 ವರ್ಷದ ಅವರು ಹೇಳಿದರು.

ಭಾರತ ಸರ್ಕಾರ "ಸೇರ್ಪಡೆ" ಎಂಬ ಪದವನ್ನು ತಪ್ಪಾಗಿ ವಿಶ್ಲೇಷಿಸಿರುವುದು ಶಾಂತಿ ಮಾತುಕತೆಗೆ ಇರುವ ಅತಿದೊಡ್ಡ ತಡೆ ಎಂದು ಅಭಿಪ್ರಾಯಪಟ್ಟರು. "ವಾಸ್ತವವಾಗಿ ಈ ಪದದ ಅರ್ಥವೆಂದರೆ, ಒಪ್ಪಿಕೊಂಡ ಎಲ್ಲ ಅಂಶಗಳನ್ನು ಪರಿಹಾರದಲ್ಲಿ ಸೇರಿಸಿಕೊಳ್ಳಬೇಕು ಎನ್ನುವುದು. ನಾಗಾಗಳನ್ನು ಭಾರತ ದೇಶದಲ್ಲಿ ಸೇರಿಸಿಕೊಳ್ಳಬೇಕು ಎನ್ನುವುದಲ್ಲ. ಈ ಬಗ್ಗೆ ಸಂಘಟನೆಯಲ್ಲಿ ಯಾವ ಗೊಂದಲವೂ ಇಲ್ಲ" ಎಂದು ಸ್ಪಷ್ಟಪಡಿಸಿದರು.

ನಾಗಾಲ್ಯಾಂಡ್ ರಾಜ್ಯಪಾಲ ಹಾಗೂ ಸಂಧಾನಕಾರ ಆರ್.ಎನ್.ರವಿಯವರು ಕಳೆದ ತಿಂಗಳು ನಾಗಾ ಸಮಾಜಕ್ಕೆ ಮಾಹಿತಿ ನೀಡಿ, ಪ್ರಧಾನಿ ಮೋದಿ ಶಾಂತಿ ಪ್ರಕ್ರಿಯೆಯನ್ನು ಅಕ್ಟೋಬರ್ ಒಳಗಾಗಿ ಮುಗಿಸಬೇಕು ಎಂದು ಸೂಚಿಸಿದ್ದಾರೆ. ಹೀಗೆ ಕಾಲಮಿತಿ ನಿಗದಿಪಡಿಸುವುದು ಎನ್‌ಎಸ್‌ಸಿಎನ್-ಐಎಂಗೆ ಗಡುವು ನೀಡಿದಂತೆ ಎಂದು ಹೇಳಿದರು.

"ಮೂರು ತಿಂಗಳ ಒಳಗಾಗಿ ನಾಗಾಗಳನ್ನು ಭಾರತದ ಒಕ್ಕೂಟದಲ್ಲಿ ಸೇರಿಸಬೇಕು ಎಂದು ಹೇಳಿದ್ದಾರೆ. ಈ ಗಡುವನ್ನು ನಾವು ತಿರಸ್ಕರಿಸಿದ್ದೇವೆ. ಇಂದಾಗಲೀ, ನಾಳೆಯಾಗಲೀ ನಾವದನ್ನು ಒಪ್ಪಿಕೊಳ್ಳುವುದಿಲ್ಲ" ಎಂದು ಬಂಡುಕೋರ ಮುಖಂಡ ನಿರಾಕರಿಸಿದರು.
ನಾಗಾಗಗಳಿಗೆ ಪ್ರತ್ಯೇಕ ಧ್ವಜ ಮತ್ತು ಪ್ರತ್ಯೇಕ ಸಂವಿಧಾನ ಬೇಕೇಬೇಕು ಎಂದು ಸಂಘಟನೆ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಎನ್‌ಎಸ್‌ಸಿಎನ್-ಐಎಂ ನಡುವಿನ ಸಂಧಾನ ಮಾತುಕತೆಗಳು ಎರಡು ದಶಕಗಳಿಂದ ಕಗ್ಗಂಟಾಗಿಯೇ ಉಳಿದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X