Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲಾಖಾ ತನಿಖೆಯಲ್ಲಿ ಡಾ. ಕಫೀಲ್ ಖಾನ್...

ಇಲಾಖಾ ತನಿಖೆಯಲ್ಲಿ ಡಾ. ಕಫೀಲ್ ಖಾನ್ ದೋಷಮುಕ್ತ

ಗೋರಖ್ ಪುರ ಆಸ್ಪತ್ರೆ ದುರಂತ

ವಾರ್ತಾಭಾರತಿವಾರ್ತಾಭಾರತಿ27 Sept 2019 10:25 AM IST
share
ಇಲಾಖಾ ತನಿಖೆಯಲ್ಲಿ ಡಾ. ಕಫೀಲ್ ಖಾನ್ ದೋಷಮುಕ್ತ

ಲಕ್ನೋ: ಆಗಸ್ಟ್ 2017ರಲ್ಲಿ ಗೋರಖ್ ಪುರದ ಬಿಆರ್ ಡಿ ಮೆಡಿಕಲ್ ಕಾಲೇಜಿನಲ್ಲಿ ಆಮ್ಲಜನಕ ಕೊರತೆಯಿಂದ 60ಕ್ಕೂ ಹೆಚ್ಚು ಮಕ್ಕಳು ಬಲಿಯಾದ ಘಟನೆಯ ನಂತರ  ಸೇವೆಯಿಂದ ಅಮಾನತುಗೊಂಡಿದ್ದ ಮಕ್ಕಳ ತಜ್ಞ ಡಾ. ಕಫೀಲ್ ಖಾನ್ ಅವರನ್ನು ಘಟನೆ ನಡೆದು ಎರಡು ವರ್ಷಗಳ ನಂತರ ಇಲಾಖಾ ತನಿಖೆ ದೋಷಮುಕ್ತಗೊಳಿಸಿದೆ.

ಡಾ. ಕಫೀಲ್ ಖಾನ್ ವಿರುದ್ಧ  ವೈದ್ಯಕೀಯ ನಿರ್ಲಕ್ಷ್ಯ, ಭ್ರಷ್ಟಾಚಾರ ಹಾಗೂ ಕರ್ತವ್ಯಲೋಪ ಆರೋಪ ಹೊರಿಸಲಾಗಿತ್ತು. ಈಗ ಈ ಆರೋಪಗಳಿಂದ ಅವರು ಮುಕ್ತರಾಗಿದ್ದಾರೆ. ಈ ಇಲಾಖಾ ತನಿಖೆಯ ವರದಿಯನ್ನು  ಬಿಆರ್ ಡಿ ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಗುರುವಾರ ಡಾ. ಕಫೀಲ್ ಖಾನ್ ಅವರಿಗೆ ಹಸ್ತಾಂತರಿಸಿದ್ದಾರೆ.

ಆದರೆ ಈ ವರದಿ ಹೊರ ಬರುವಷ್ಟರ ಹೊತ್ತಿಗೆ ಡಾ. ಖಾನ್ ಅವರು ಈಗಾಗಲೇ ತಾವು ಮಾಡಿರದ ತಪ್ಪಿಗೆ ಒಂಬತ್ತು ತಿಂಗಳು ಸೆರೆವಾಸ ಅನುಭವಿಸಿದ್ದಾರೆ. ಆದರೆ ಅವರು  ಜಾಮೀನಿನ ಮೇಲೆ ಹೊರಗಿದ್ದರೂ  ಬಿಆರ್ ಡಿ ಮೆಡಿಕಲ್ ಕಾಲೇಜು ಇಲ್ಲಿಯ ತನಕ ಅವರ ವಜಾ ಆದೇಶವನ್ನು ವಾಪಸ್ ತೆಗೆದುಕೊಂಡಿರಲಿಲ್ಲ. ಡಾ. ಖಾನ್ ಈಗಾಗಲೇ ಘಟನೆ ಕುರಿತಂತೆ ಸಿಬಿಐ ತನಿಖೆಗೆ ಕೋರಿದ್ದಾರೆ.

ಇಲಾಖಾ ತನಿಖೆಯ ವರದಿಯನ್ನು ತನಿಖಾಧಿಕಾರಿ, ಅಂಚೆ ಚೀಟಿ ಹಾಗೂ ನೋಂದಣಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಿಮಾಂಶು ಕುಮಾರ್ ಅವರು ಉತ್ತರ ಪ್ರದೇಶದ ವೈದ್ಯಕೀಯ ಶಿಕ್ಷಣ ಇಲಾಖೆಗೆ ಎ.18ರಂದು ನೀಡಿದ್ದರು. ಈ 15 ಪುಟಗಳ ವರದಿಯಲ್ಲಿ  ಡಾ. ಕಫೀಲ್ ಖಾನ್ ಅವರು ವೈದ್ಯಕೀಯ ನಿರ್ಲಕ್ಷ್ಯ  ತೋರಿಸಿಲ್ಲ ಹಾಗೂ 54 ಗಂಟೆಗಳ ತನಕ ಆಸ್ಪತ್ರೆ ಆಮ್ಲಜನಕ ಕೊರತೆ ಅನುಭವಿಸುತ್ತಿದ್ದಾಗ 2017ರ ಆಗಸ್ಟ್ 10,11ರಂದು ರಾತ್ರಿ ಅವರು ಪರಿಸ್ಥಿತಿಯನ್ನು ನಿಭಾಯಿಸಲು ಸರ್ವ ಪ್ರಯತ್ನ ನಡೆಸಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ.

ಆದರೆ ಡಾ. ಖಾನ್ ಅವರು ಆಗಸ್ಟ್ 2016ರ ತನಕ ಖಾಸಗಿ ಪ್ರಾಕ್ಟೀಸ್ ಮಾಡುತ್ತಿದ್ದರು ಆದರೆ ನಂತರ ಮಾಡಿಲ್ಲ ಎಂಬ ಅಂಶವನ್ನೂ ವರದಿ ಪರಿಗಣಿಸಿದೆ.

ಡಾ. ಕಫೀಲ್ ಖಾನ್ ಅವರು  ಬಿಆರ್ ಡಿ ಆಸ್ಪತ್ರೆಯ ಎನ್ಸಿಫಾಲಿಟಿಸ್ ವಾರ್ಡಿನ ಉಸ್ತುವಾರಿ ನೋಡಲ್ ವೈದ್ಯಕೀಯ ಅಧಿಕಾರಿಯಾಗಿರಲಿಲ್ಲ ಎಂದು ತನಿಖಾ ವರದಿ ಹೇಳಿದೆ  ಹಾಗೂ ಅವರು ವಾರ್ಡಿನ ಅಧಿಕಾರಿಯಾಗಿದ್ದರು ಎಂದು ಇಲಾಖೆ ಸಲ್ಲಿಸಿರುವ ದಾಖಲೆಗಳು ''ಸಾಕಾಗದು ಹಾಗೂ ಸರಿಯಾಗಿಲ್ಲ'' ಎಂದು  ತಿಳಿಸಿದೆ.

ಸಹಾಯಕ ಪ್ರೊ. ಭೂಪೇಂದ್ರ ಶರ್ಮ ಅವರು ಮೇ 11, 2016ರಿಂದ ವಾರ್ಡಿನ ಉಸ್ತುವಾರಿಯಾಗಿದ್ದರು  ಎಂಬುದನ್ನು ಉತ್ತರ ಪ್ರದೇಶ ಸರಕಾರ  ಒಪ್ಪಿರುವ ಕುರಿತಂತೆ ಡಾ. ಕಫೀಲ್ ಸಲ್ಲಿಸಿದ ಆರ್ ಟಿ ಐ ಅರ್ಜಿಗೆ ದೊರೆತ ಉತ್ತರವನ್ನೂ ವರದಿ ಪರಿಗಣಿಸಿದೆ.

ಡಾ. ಖಾನ್ ಅವರು ತಮ್ಮ ಹಿರಿಯ ಅಧಿಕಾರಿಗಳಿಗೆ ಆಮ್ಲಜನಕ ಕೊರತೆಯ ಬಗ್ಗೆ ತಿಳಿಸಿದ್ದರು ಹಾಗೂ ಈ ಕುರಿತಾದ ಕರೆ ಮಾಹಿತಿ ವಿವರಗಳನ್ನೂ ತನಿಖಾಧಿಕಾರಿಗಳಿಗೆ ನೀಡಿದ್ದರಲ್ಲದೆ ತಾವು ವೈಯಕ್ತಿಕ ನೆಲೆಯಲ್ಲಿ ಏಳು ಆಮ್ಲಜನಕ ಸಿಲಿಂಡರುಗಳನ್ನು ದುರಂತ ನಡೆದ ರಾತ್ರಿ ಏರ್ಪಾಡು ಮಾಡಿದ್ದರ ಕುರಿತಂತೆಯೂ ತನಿಖಾಧಿಕಾರಿಗಳಿಗೆ ತಿಳಿಸಿದ್ದರು.

''ಸರಕಾರ ಈ ದುರಂತಕ್ಕೆ ಕಾರಣರಾದವರ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದೇ ಇದ್ದರೂ ನನ್ನನ್ನು ಬಲಿಪಶುವನ್ನಾಗಿಸಲಾಗಿದೆ.  ಈ ವರದಿಯನ್ನು ಇಲ್ಲಿಯ ತನಕ ನನಗೆ ಕಳುಹಿಸಲಾಗಿರಲಿಲ್ಲ. ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆ ನನ್ನ ಖಾಸಗಿ ಪ್ರಾಕ್ಟೀಸ್ ವಿರುದ್ಧ ಪ್ರಕರಣದ ಕುರಿತಂತೆ ವಿವರಣೆ ಕೇಳಿದೆ, ಇದಕ್ಕೂ ದುರಂತಕ್ಕೂ ಸಂಬಂಧವಿಲ್ಲ, ಸರಕಾರ ಕ್ಷಮೆ ಯಾಚಿಸಬೇಕು, ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಹಾಗೂ ಘಟನೆಯ ಸಿಬಿಐ ತನಿಖೆ ನಡೆಸಬೇಕು'' ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X