Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದೀಪಕ್ ಪೂನಿಯಾ ವಿಶ್ವದ ನಂ.1 ಕುಸ್ತಿಪಟು

ದೀಪಕ್ ಪೂನಿಯಾ ವಿಶ್ವದ ನಂ.1 ಕುಸ್ತಿಪಟು

ವಾರ್ತಾಭಾರತಿವಾರ್ತಾಭಾರತಿ27 Sept 2019 5:54 PM IST
share
ದೀಪಕ್ ಪೂನಿಯಾ ವಿಶ್ವದ ನಂ.1 ಕುಸ್ತಿಪಟು

ಹೊಸದಿಲ್ಲಿ, ಸೆ.27: ಇತ್ತೀಚೆಗೆ ಕಝಖ್‌ಸ್ತಾನದಲ್ಲಿ ಕೊನೆಗೊಂಡ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ದೀಪಕ್ ಪೂನಿಯಾ 86 ಕೆಜಿ ತೂಕ ವಿಭಾಗದಲ್ಲಿ ವಿಶ್ವದ ನಂ.1 ಕುಸ್ತಿಪಟು ಆಗಿ ಹೊರಹೊಮ್ಮಿದರು. ಆದರೆ, ಭಾರತದ ಇನ್ನೋರ್ವ ಕುಸ್ತಿಪಟು ಬಜರಂಗ್ ಪೂನಿಯಾ 65 ಕೆಜಿ ವಿಭಾಗದಲ್ಲಿ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ.

ಕುಸ್ತಿಯ ಅಂತರ್‌ರಾಷ್ಟ್ರೀಯ ಒಕ್ಕೂಟ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್(ಯುಡಬ್ಲುಡಬ್ಲು) ಶುಕ್ರವಾರ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ.

ಹಿರಿಯರ ವಿಭಾಗದ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿ ಸ್ಪರ್ಧಿಸಿದ್ದ ದೀಪಕ್ ಮೊಣಕಾಲು ಗಾಯದಿಂದಾಗಿ ಇರಾನ್ ದಿಗ್ಗಜ ಹಸನ್ ಯಝ್ದಿನಿ ವಿರುದ್ಧ ಫೈನಲ್ ಪಂದ್ಯದಿಂದ ಹಿಂದೆ ಸರಿದು ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದ್ದರು.

20ರ ಹರೆಯದ ದೀಪಕ್ ಇದೀಗ 82 ಅಂಕ ಗಳಿಸಿದ್ದು, ವಿಶ್ವ ಚಾಂಪಿಯನ್ ಹಸನ್‌ಗಿಂತ ನಾಲ್ಕು ಅಂಕ ಮುಂದಿದ್ದಾರೆ.

ದೀಪಕ್ ಈ ವರ್ಷ ಯಾಸರ್ ಡೊಗು ಟೂರ್ನಿಯಲ್ಲಿ ಬೆಳ್ಳಿ ಪದಕ ಹಾಗೂ ಏಶ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು. ಇದೀಗ ತನ್ನ ಸ್ಥಿರ ಪ್ರದರ್ಶನಕ್ಕೆ ಗೌರವ ಪಡೆದಿದ್ದಾರೆ.

 ಬಜರಂಗ್ ವಿಶ್ವದ ನಂ.1 ಕುಸ್ತಿಪಟು ಆಗಿ ವಿಶ್ವ ಚಾಂಪಿಯನ್‌ಶಿಪ್‌ಗೆ ಪ್ರವೇಶಿಸಿದ್ದರು. ಚಾಂಪಿಯನ್‌ಶಿಪ್‌ನಲ್ಲಿ ಕಂಚಿಗೆ ತೃಪ್ತಿಪಟ್ಟುಕೊಂಡಿದ್ದ ಅವರು 2ನೇ ಸ್ಥಾನಕ್ಕೆ ಜಾರಿದ್ದಾರೆ. 25ರ ಹರೆಯದ ಬಜರಂಗ್ 63 ಅಂಕ ಗಳಿಸಿದ್ದು, ಕಝಖ್‌ಸ್ತಾನದಲ್ಲಿ ಚಿನ್ನ ಜಯಿಸಿದ್ದ ರಶ್ಯದ ಗಡ್ಝಿಮುರಾಡ್ ರಶಿಡೊವ್ 65 ಕೆಜಿ ವಿಭಾಗದಲ್ಲಿ ನೂತನ ನಂ.1 ಕುಸ್ತಿಪಟು ಆಗಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಜಯಿಸಿರುವ ರವಿ ದಹಿಯಾ 57 ಕೆಜಿ ವಿಭಾಗದಲ್ಲಿ ಅಗ್ರ-5ರಲ್ಲಿ ಸ್ಥಾನ ಪಡೆದಿದ್ದಾರೆ. 39 ಅಂಕ ಗಳಿಸಿರುವ ರವಿ 5ನೇ ಸ್ಥಾನದಲ್ಲಿದ್ದಾರೆ. ಕಂಚು ಜಯಿಸಿರುವ ರಾಹುಲ್ ಅವಾರೆ ವಿಶ್ವದ ನಂ.2ನೇ ಕುಸ್ತಿಪಟು ಆಗಿದ್ದಾರೆ.

 ಇದೇ ವೇಳೆ ಮಹಿಳೆಯರ ರ್ಯಾಂಕಿಂಗ್‌ನಲ್ಲಿ ವಿನೇಶ್ ಫೋಗಟ್ 53 ಕೆಜಿ ತೂಕ ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದರು. ಕಝಖ್‌ಸ್ತಾನದ ನೂರ್‌ಸುಲ್ತಾನ್‌ನಲ್ಲಿ ಫೋಗಟ್ ಕಂಚಿನ ಪದಕ ಜಯಿಸುವ ಜೊತೆಗೆ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದರು. ಕಳೆದ ವಾರ ನೀಡಿದ್ದ ಉತ್ತಮ ಪ್ರದರ್ಶನ ನೆರವಿನಿಂದ ನಾಲ್ಕು ಸ್ಥಾನ ಭಡ್ತಿ ಪಡೆದಿದ್ದಾರೆ.

50 ಕೆಜಿ ತೂಕ ವಿಭಾಗದಲ್ಲಿ ಸೀಮಾ ಬಿಸ್ಲಾ 3ನೇ ಸ್ಥಾನಕ್ಕೆ ಜಾರಿದ್ದಾರೆ. ಪೂಜಾ ಧಾಂಡ 59 ಕೆಜಿ ವಿಭಾಗದಲ್ಲಿ 5ನೇ ಸ್ಥಾನ, ಮಂಜು ಕುಮಾರಿ 3ನೇ ಸ್ಥಾನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X