Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅ.6 ರಿಂದ ಮಕ್ಕಳಿಗಾಗಿ...

ಅ.6 ರಿಂದ ಮಕ್ಕಳಿಗಾಗಿ ಬನ್ನೇರುಘಟ್ಟದಲ್ಲಿ ’ಝೂ ಕ್ಲಬ್’

ವಾರ್ತಾಭಾರತಿವಾರ್ತಾಭಾರತಿ27 Sept 2019 6:44 PM IST
share
ಅ.6 ರಿಂದ ಮಕ್ಕಳಿಗಾಗಿ ಬನ್ನೇರುಘಟ್ಟದಲ್ಲಿ ’ಝೂ ಕ್ಲಬ್’

ಬೆಂಗಳೂರು, ಸೆ.27: 65ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಮಕ್ಕಳಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನ ವತಿಯಿಂದ ಪ್ರಕೃತಿ ಮತ್ತು ವನ್ಯಜೀವಿಗಳ ಬಗ್ಗೆ ತಿಳಿದುಕೊಳ್ಳುವುದಕ್ಕೆ ಸದವಕಾಶ ನೀಡುತ್ತಿದೆ. 12ರಿಂದ 18 ವಯಸ್ಸಿನ ಶಾಲಾ ಮಕ್ಕಳಿಗಾಗಿ ’ಝೂ ಕ್ಲಬ್-2019’ಎಂಬ ಕಾರ್ಯಕ್ರಮ ಆಯೋಜಿಸುತ್ತಿದೆ.

ಅಕ್ಟೋಬರ್ 6ರಿಂದ ಪ್ರಾರಂಭವಾಗಿ ಮುಂದಿನ ವರ್ಷ (2020) ಜ.12ರವರೆಗೆ ನಡೆಯಲಿದೆ. ಪ್ರತಿ ರವಿವಾರದಂದು ಈ ಕಾರ್ಯಕ್ರಮ ನಡೆಯಲಿದ್ದು, ಬರೋಬ್ಬರಿ 15 ವಾರಗಳ ಕಾಲ ಮಕ್ಕಳಿಗೆ ಈ ಅವಕಾಶ ಸಿಗಲಿದೆ. ಪ್ರತಿ ರವಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಕಾರ್ಯಾಗಾರ, ಕಾಡಿನೊಳಗೆ ಪಯಣ ಮತ್ತು ತಂಡಗಳನ್ನಾಗಿ ಮಾಡಿ ಚರ್ಚೆ ಮಾಡುವ ಕಾರ್ಯಕ್ರಮ ನಡೆಯಲಿದೆ. ನೋಂದಣಿ ಶುಲ್ಕ ಒಂದು ಸಾವಿರ ರೂ.ಆಗಿದ್ದು, ಸೆ.30 ನೋಂದಣಿಗೆ ಕೊನೆಯ ದಿನವಾಗಿರುತ್ತದೆ. ಆಸಕ್ತರು ಕೂಡಲೇ www.bannerghattab iologicalpark.org/education ಅಥವಾ ಕಾರ್ಯ ನಿರ್ವಾಹಕ ನಿರ್ದೇಶಕರ ಕಚೇರಿಯಿಂದ ನೋಂದಣಿ ಅರ್ಜಿಯನ್ನು ಪಡೆದು, ಅದನ್ನು ಭರ್ತಿ ಮಾಡಿ ಖುದ್ದು ಪೋಷಕರ ಜೊತೆಯಲ್ಲಿ ಮೃಗಾಲಯಕ್ಕೆ ಸಲ್ಲಿಸಬಹುದಾಗಿರುತ್ತದೆ.

ಅರ್ಜಿಯಲ್ಲಿ ನಮೂದಾಗಿರುವ ನಿಯಮಗಳಿಗೆ ಸಹಿ ಹಾಕಿದ ಬಳಿಕ ಪಾಸ್ ಪೋರ್ಟ್ ಅಳತೆಯ 3 ಫೋಟೋಗಳು, ಆದಾರ್ ಪ್ರತಿ, ಶಾಲೆಯ ಗುರುತಿನ ಚೀಟಿ, ಒಂದು ವೇಳೆ ಶಾಲೆಯ ಐಡಿ ಕಾರ್ಡಿನಲ್ಲಿ ಬ್ಲಡ್ ಗ್ರೂಪ್ ಇರದಿದ್ದಲ್ಲಿ ಬ್ಲಡ್ ಗ್ರೂಪಿನ ಸರ್ಟಿಫಿಕೇಟ್‌ನ್ನು ಸಲ್ಲಿಸಬೇಕು.

ಬಳಿಕ ನೋಂದಣಿ ಮಾಡಿಸಿಕೊಂಡ ಮಕ್ಕಳಿಗೆ ಬನ್ನೇರುಘಟ್ಟ ಮೃಗಾಲಯದ ವತಿಯಿಂದ ಯೂನಿಫಾರ್ಮ್ (ಟೀ ಶರ್ಟ್ ಮತ್ತು ಕ್ಯಾಪ್), ಐಡಿ ಕಾರ್ಡ್ ನೀಡಲಾಗುತ್ತದೆ. ಝೂ ಕ್ಲಬ್ ಕಾರ್ಯಕ್ರಮ ಮುಗಿದ ಬಳಿಕ ಸ್ಪರ್ಧೆಯಲ್ಲಿ ಪಾಲ್ಗೊಂಡು ಗೆದ್ದವರಿಗೆ ಪ್ರಶಸ್ತಿ ಮತ್ತು ಭಾಗವಹಿಸಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ. ವಿಶೇಷವಾಗಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಚಟುವಟಿಕೆಗಳು ಇರುವುದರಿಂದ ಮಕ್ಕಳು ನೀರನ್ನು ಜೊತೆಯಲ್ಲೇ ಇಟ್ಟುಕೊಳ್ಳಬೇಕು. ಬನ್ನೇರುಘಟ್ಟ ಮೃಗಾಲಯದ ವತಿಯಿಂದ ಸ್ನ್ಯಾಕ್ಸ್ ನೀಡಲಾಗುವುದು, ಮಧ್ಯಾಹ್ನದ ಊಟ ನೀಡಲಾಗುವುದಿಲ್ಲ. ಅದು ಮಕ್ಕಳ ಪೋಷಕರ ಜವಾಬ್ದಾರಿಯಾಗಿದ್ದು, ಮಧ್ಯಾಹ್ನ 1ಕ್ಕೆ ಬಂದು ಮಕ್ಕಳನ್ನು ಕರೆದುಕೊಂಡು ಹೋಗಬೇಕು. ಹೆಚ್ಚಿನ ಮಾಹಿತಿಗಾಗಿ ಶಿಕ್ಷಣಾಧಿಕಾರಿ ದೂ.8884414262ಕ್ಕೆ ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X