ನನ್ನ ಹೇಳಿಕೆಗೂ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೂ ಸಂಬಂಧವಿಲ್ಲ: ಲಕ್ಷ್ಮಣ ಸವದಿ

ಬೆಳಗಾವಿ, ಸೆ.27: ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ನಾನು ಮಾತನಾಡಿರುವ ವಿಡಿಯೋ ಬೇರೆ ಕುಮಟಳ್ಳಿ ಅವರಿಗೆ ಸಂಬಂಧಿಸಿದ್ದು. ಎರಡು ತಿಂಗಳ ಹಿಂದೆ ನಾನು ಮಾತನಾಡಿದ್ದು ಈಗ ವೈರಲ್ ಆಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಣೆ ನೀಡಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ವಿಡಿಯೋ ಸಂದೇಶ ರವಾನಿಸಿರುವ ಅವರು, ನನ್ನ ಹೇಳಿಕೆಗೂ ಅನರ್ಹ ಶಾಸಕ ಮಹೇಶ್ ಕುಮಟಳ್ಳಿಗೂ ಸಂಬಂಧವಿಲ್ಲ. ನನ್ನ ಮತ್ತು ಮಹೇಶ್ ಕುಮಟಳ್ಳಿ ಮಧ್ಯೆ ಭಿನ್ನಾಭಿಪ್ರಾಯ ತರುವ ಪ್ರಯತ್ನ ನಡೆದಿದೆ. ಚುನಾವಣಾ ಸಂದರ್ಭವಾಗಿರುವುದರಿಂದ ಇದರ ಲಾಭ ಪಡೆಯಲು ಪ್ರಯತ್ನ ಮಾಡಲಾಗಿದೆ ಎಂದು ದೂರಿದ್ದಾರೆ.
ಅನರ್ಹ ಶಾಸಕರಾಗಿರುವ ಮಹೇಶ್ ಕುಮಟಳ್ಳಿ ಜೊತೆಗೆ ನನಗೆ ಭಿನ್ನಾಭಿಪ್ರಾಯವಿಲ್ಲ. ನಾನು ಮತ್ತು ಮಹೇಶ್ ಕುಮಟಳ್ಳಿ ಮುಂದಿನ ದಿನಗಳಲ್ಲಿ ಜೊತೆಯಾಗಿಯೇ ಹೋಗುತ್ತೇವೆ. ಸ್ನೇಹಿತರಾಗಿರುವ ಮಹೇಶ್ ಕುಮಟಳ್ಳಿ ಜೊತೆಗೆ ಯಾವುದೇ ತಪ್ಪು ಅಭಿಪ್ರಾಯವಿಲ್ಲ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Next Story





