Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನಿಟ್ರ್ಯಾಪ್ ಆರೋಪ: ವಿದ್ಯಾರ್ಥಿನಿ ಸೇರಿ...

ಹನಿಟ್ರ್ಯಾಪ್ ಆರೋಪ: ವಿದ್ಯಾರ್ಥಿನಿ ಸೇರಿ ಎಮ್ಮೆಮಾಡಿನ ಆರು ಮಂದಿಯ ಬಂಧನ

ಬಂಧಿಸಲು ಹೋದ ಪೊಲೀಸರ ಮೇಲೆಯೇ ಗುಂಡು ಹಾರಿಸಿದ ಆರೋಪಿ

ವಾರ್ತಾಭಾರತಿವಾರ್ತಾಭಾರತಿ27 Sept 2019 9:38 PM IST
share
ಹನಿಟ್ರ್ಯಾಪ್ ಆರೋಪ: ವಿದ್ಯಾರ್ಥಿನಿ ಸೇರಿ ಎಮ್ಮೆಮಾಡಿನ ಆರು ಮಂದಿಯ ಬಂಧನ

ಮಡಿಕೇರಿ, ಸೆ.27: ಯುವತಿಯೊಬ್ಬಳನ್ನು ಬಳಸಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಸಂಚಿನಲ್ಲಿ ಸಿಲುಕಿಸಿ, 3.80 ಲಕ್ಷ ರೂ. ನಗದನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ. 

ಬಂಧಿತರನ್ನು ಮುಹಮದ್ ಅಝರುದ್ದೀನ್(24), ಅಬೂಬಕರ್ ಸಿದ್ದೀಕ್(33), ಹಸೈನಾರ್ ಅಲಿಯಾಸ್ ಅಚ್ಚು(27), ಇರ್ಷಾದ್ ಅಲಿ(27), ಎ.ಎ.ಸಮೀರ್(28) ಹಾಗೂ ಓರ್ವ ಕಾಲೇಜು ವಿದ್ಯಾರ್ಥಿನಿ ಕೂಡ ಬಂಧನಕ್ಕೆ ಒಳಗಾಗಿದ್ದಾಳೆ. ಬಂಧಿತ ಆರೋಪಿಗಳಿಂದ 1 ಲಕ್ಷ ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಒಟ್ಟು 10 ಮಂದಿ ಶಾಮೀಲಾಗಿದ್ದು, ಪ್ರಮುಖ ಆರೋಪಿ ಸೇರಿದಂತೆ ನಾಲ್ವರ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಡಿ. ಪನ್ನೇಕರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ
ದುಬೈನಲ್ಲಿದ್ದ ನಾಪೋಕ್ಲು ಎಮ್ಮೆಮಾಡು ನಿವಾಸಿ ಗಫೂರ್ ಆಗಸ್ಟ್ ತಿಂಗಳಿನಲ್ಲಿ ತಮ್ಮ ಊರಿಗೆ ಬಂದಿದ್ದರು. ಹೊಸ ಮನೆಯನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದ ಅವರ ಬಳಿ ಹಣ ಇರುವ ಬಗ್ಗೆ ಮಾಹಿತಿ ತಿಳಿದ ಎಮ್ಮೆಮಾಡು ನಿವಾಸಿ ಕರೀಂ ಎಂಬಾತ ಸ್ಥಳೀಯ ಯುವಕರನ್ನು ಸಂಪರ್ಕಿಸಿ ಗಫೂರ್ ಬಳಿಯಿದ್ದ ಹಣವನ್ನು ಲಪಟಾಯಿಸಲು ಸಂಚು ಹೂಡಿದ್ದರು ಎನ್ನಲಾಗಿದೆ. ಅದರಂತೆ ಆಗಸ್ಟ್ 16ರಂದು ಗಫೂರ್ ಅವರನ್ನು ಕರೆದುಕೊಂಡು ಮನೆ ಬಳಕೆಯ ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸಲು ಮೈಸೂರಿಗೆ ತೆರಳುವಂತೆ ಆರೋಪಿಗಳು ಮನವೊಲಿಸಿದ್ದರು. ಅದರಂತೆ ಕರೀಂ ಮತ್ತು ಅಝರುದ್ದೀನ್ ಅವರು ಗಫೂರ್ ಅವರನ್ನು ಕರೆದುಕೊಂಡು ಮೈಸೂರಿಗೆ ತೆರಳುವಾಗ ಮೊದಲೇ ಸಂಚು ರೂಪಿಸಿದಂತೆ ಆರೋಪಿಗಳು ಕುಶಾಲನಗರದಿಂದ ಕಾಲೇಜು ಯುವತಿಯೊಬ್ಬಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿಗೆ ತಲುಪಿದ ಬಳಿಕ ಕತ್ತಲಾದ ಕಾರಣ ಮೈಸೂರಿನ ರಿಂಗ್ ರೋಡ್‍ನ ಹೋಂ ಸ್ಟೇ ಯಲ್ಲಿ ವಿಶ್ರಾಂತಿ ಪಡೆಯುವಂತೆ ಹೇಳಿ, ಯುವತಿ ಮತ್ತು ಗಫೂರ್ ಅವರನ್ನು ಆರೋಪಿಗಳು ಅಲ್ಲಿಗೆ ಕರೆದೊಯ್ದಿದ್ದರು. ಈ ಸಂದರ್ಭ ಗಫೂರ್ ಅವರಿಗೆ ಅಮಲು ಬರುವ ಪದಾರ್ಥವನ್ನು ನೀಡಿದ್ದರು ಎನ್ನಲಾಗಿದೆ. 

ಮೊದಲೇ ನಿರ್ಧರಿಸಿದಂತೆ ಕೆಲವು ಸಮಯದ ಬಳಿಕ ಉಳಿದ ಆರೋಪಿಗಳು ಗಫೂರ್ ಮತ್ತು ಯುವತಿ ಉಳಿದುಕೊಂಡಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ. ನಾವು ಪತ್ರಿಕಾ ಮಾಧ್ಯಮದವರೆಂದು ಹೇಳಿಕೊಂಡು ಗಫೂರ್ ಮೇಲೆ ಹಲ್ಲೆ ನಡೆಸಿದ್ದಲ್ಲದೇ ಗಫೂರ್ ಮತ್ತು ಯುವತಿಯನ್ನು ಜೊತೆಯಲ್ಲಿ ನಿಲ್ಲಿಸಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೆಗೆದಿದ್ದಾರೆ. 

ನಂತರ ಗಫೂರ್ ಬಳಿಯಿದ್ದ 60 ಸಾವಿರ ರೂ. ನಗದು ಮತ್ತು 55 ಸಾವಿರ ಮುಖ ಬೆಲೆಯ ಫಾರಿನ್ ಕರೆನ್ಸಿ, ಎಟಿಎಂ ಕಾರ್ಡ್ ಕಸಿದುಕೊಂಡಿದ್ದಾರೆ. ಅಲ್ಲದೇ 50 ಲಕ್ಷ ರೂ. ಗಳನ್ನು ತಕ್ಷಣ ನೀಡದಿದ್ದಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಟಿವಿ ಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಗಫೂರ್ ತಮ್ಮ ಬಳಿಯಿದ್ದ 3 ಲಕ್ಷ ರೂ. ಮತ್ತು ಮನೆಯಿಂದ ಹಣವನ್ನು ತರಿಸಿಕೊಂಡು ಒಟ್ಟು 3.80 ಲಕ್ಷ ರೂ. ಗಳನ್ನು ಆರೋಪಿಗಳಿಗೆ ನೀಡಿದ್ದಾರೆ. ನಂತರ ಆರೋಪಿಗಳು ಗಫೂರ್ ಅವರನ್ನು ಬಿಟ್ಟು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ. 

ಒಂದು ತಿಂಗಳ ಹಿಂದೆ ಹನಿಟ್ರ್ಯಾಪ್ ಪ್ರಕರಣ ನಡೆದಿರುವ ಬಗ್ಗೆ ಜಿಲ್ಲಾ ಅಪರಾಧ ಪ್ತತೆದಳಕ್ಕೆ ಖಚಿತ ಮಾಹಿತಿ ದೊರಕಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿದ ಅಪರಾಧ ಪತ್ತೆ ದಳ ನಾಪೋಕ್ಲುವಿನ ಎಮ್ಮೆಮಾಡು ನಿವಾಸಿ ಗಫೂರ್ ಅವರು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂತ್ರಸ್ತರಾಗಿರುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ. ಗಫೂರ್ ಅವರ ಮನವೊಲಿಸಿದ ಪೊಲೀಸರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 10 ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಅಪರಾಧ ಪತ್ತೆ ದಳ 10 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಿದೆ.

ಬಂಧಿತ ಆರೋಪಿಗಳು ಎಮ್ಮೆಮಾಡು ನಿವಾಸಿಗಳಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಕಲಂ 120(ಬಿ), 328, 384, 395, ಮತ್ತು 149 ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇತರ 4 ಮಂದಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪೊಲೀಸರಿಗೆ ಗುಂಡು
ಪ್ರಕರಣದ ಬಯಲಾಗುತ್ತಿದ್ದಂತೆಯೇ ಪ್ರಮುಖ ಆರೋಪಿ ಕರೀಂನನ್ನು ಬಂಧಿಸಲು ಜಿಲ್ಲಾ ಅಪರಾಧ ಪತ್ತೆ ದಳದ ಸಹಾಯಕ ನಿರೀಕ್ಷಕ ಮತ್ತು ಇತರ 4 ಮಂದಿ ಸಿಬ್ಬಂದಿಗಳು ಕರೀಂನ ಮನೆಗೆ ತೆರಳಿದ್ದರು. ಬಂಧನದ ಮಾಹಿತಿ ಅರಿತ ಕರೀಂ ಮನೆಯೊಳಗಿದ್ದ ಬಂದೂಕಿನಿಂದ ಪೊಲೀಸರ ಮೇಲೆ ಒಂದು ಸುತ್ತು ಗುಂಡು ಹಾರಿಸಿದ್ದು, ಪೊಲೀಸ್ ಸಹಾಯಕ ನಿರೀಕ್ಷಕ ಹಮೀದ್ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಗುಂಡು ಪಕ್ಕದಲ್ಲಿದ್ದ ತಡೆಗೋಡೆಗೆ ಬಡಿದಿದ್ದು, ಬಳಿಕ ಕರೀಂ ತನ್ನ ಇಬ್ಬರು ಹೆಂಡತಿಯರ ಸಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರಿಗೆ ಗುಂಡು ಹೊಡೆಯುವಂತೆ ಆತನ ಪತ್ನಿಯೇ ಕೋವಿಯನ್ನು ತಂದು ಕೊಟ್ಟಿದ್ದಳು ಎನ್ನಲಾಗಿದೆ.

ಈ ಕುರಿತು ಪ್ರತ್ಯೇಕ ಪ್ರಕರಣವು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353, 307, 325 ಮತ್ತು ಭಾರತೀಯ ಶಸ್ತ್ರಾಸ್ತ್ರ ದುರ್ಬಳಕೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕರೀಂ ಮತ್ತು ಆತನ ಇಬ್ಬರು ಪತ್ನಿಯರು ಕೂಡ ಆರೋಪಿಗಳಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾರೆ. ಕರೀಂ 2015ರಲ್ಲಿ ನಡೆದ ಟಿಪ್ಪು ಗಲಭೆಯಲ್ಲೂ ಪ್ರಮುಖ ಪಾತ್ರ ವಹಿಸಿರುವ ಆರೋಪದಲ್ಲಿ ಪ್ರಕರಣವೂ ದಾಖಲಾಗಿದೆ. ಆತನ ಹಿನ್ನಲೆಯನ್ನು ಕೂಡ ತನಿಖೆ ನಡೆಸಲಾಗುತ್ತಿದ್ದು, ಆತನ ಬಂಧನದ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X