Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ...

ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಪುನರಾರಂಭಗೊಂಡ ಮರಳುಗಾರಿಕೆ

ವಾರ್ತಾಭಾರತಿವಾರ್ತಾಭಾರತಿ27 Sept 2019 9:38 PM IST
share
ವರ್ಷಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಪುನರಾರಂಭಗೊಂಡ ಮರಳುಗಾರಿಕೆ

ಉಡುಪಿ, ಸೆ.27: ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ (ಸಿಆರ್‌ಝಡ್) ನದಿ ಪಾತ್ರಗಳಲ್ಲಿ ಗುರುತಿಸಿರುವ 08 ಮರಳು ದಿಬ್ಬಗಳನ್ನು ತೆರವುಗೊಳಿಸಲು ಈ ತನಕ ಒಟ್ಟು 48 ಮಂದಿಗೆ ಮರಳು ಪರವಾನಿಗೆಗಳನ್ನು ವಿತರಿಸಲಾಗಿದೆ. ಮರಳು ಪರವಾನಿಗೆದಾರರು ಮರಳು ದಿಬ್ಬಗಳಲ್ಲಿನ ಮರಳನ್ನು ತೆರವುಗೊಳಿಸಲು ಪ್ರಾರಂಭಿಸಿದ್ದು, ಪ್ರಾರಂಭದ ದಿನವಾದ ಶುಕ್ರವಾರ (ಸೆ.27) ಒಟ್ಟು 85 ಮೆಟ್ರಿಕ್ ಟನ್‌ಗಳ ಮರಳನ್ನು ಸಾಗಾಟ ಮಾಡಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಹಾಗೂ ಏಳು ಮಂದಿ ಸದಸ್ಯರ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಅನುಷ್ಠಾನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೂಲಕ ಕಳೆದ ಸುಮಾರು ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದು ಬಡ ಕಾರ್ಮಿಕರಿಗೆ ಮಾತ್ರವಲ್ಲದೆ ಕರಾವಳಿಯ ಆರ್ಥಿಕತೆಗೆ ಮಹಾ ಹೊಡೆತ ನೀಡಿದ್ದ ಮರಳು ಸಮಸ್ಯೆ ಕೊನೆಗೂ ಬಗೆಹರಿಯುವ ಸೂಚನೆಗಳು ಕಾಣತೊಡಗಿವೆ.

ಇಂದಿನಿಂದ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ಮರಳು ದಿಬ್ಬಗಳ ತೆರವು ಕಾರ್ಯಾಚರಣೆ ಪ್ರಾರಂಭದೊಂದಿಗೆ ಮರಳು ಗಣಿಗಾರಿಕೆಗೆ ಮತ್ತೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ 48 ಪರವಾನಿಗೆದಾರರಿಗೆ ಮರಳುಗಾರಿಕೆಗೆ ಅನುಮತಿ ನೀಡಿದ್ದು, ಸಂತೆಕಟ್ಟೆ ಸಮೀಪದ ಉಪ್ಪೂರು ಸೇರಿದಂತೆ ಇನ್ನೂ ಹಲವು ಕಡೆಗಳ ನದಿ ಪಾತ್ರದಲ್ಲಿ ಕಾರ್ಮಿಕರು ಮರಳು ತೆಗೆಯುತ್ತಿರುವ ಚಿತ್ರವನ್ನು ಶಾಸಕ ರಘುಪತಿ ಭಟ್ ಅವರು ವಾಟ್ಸಪ್‌ಗಳಲ್ಲಿ ಹಂಚಿಕೊಂಡಿದ್ದಾರೆ.

ಮರಳು ದಿಬ್ಬಗಳಿಗೆ ಜಿಯೋ ಫೆನ್ಸಿಂಗ್ ಮಾಡಲಾಗಿದೆ. ಮರಳು ತೆಗೆಯಲು ಬಳಸುವ ದೋಣಿ ಹಾಗೂ ಮರಳು ಸಾಗಾಟ ಲಾರಿಗಳಿಗೆ ಜಿಪಿಎಸ್ ಅಳವಡಿಸಲಾಗಿದೆ. ಮರಳನ್ನು ಜಿಲ್ಲೆಯೊಳಗೆ ಅಗತ್ಯವುಳ್ಳವರಿಗೆ ಮಾತ್ರ ವಿತರಿಸಬೇಕು. ಜಿಪಿಎಸ್‌ನ್ನು ಉಲ್ಲಂಸಿ ಮರಳನ್ನು ಅಕ್ರಮ ವಾಗಿ ಹೊರಜಿಲ್ಲೆಗೆ ಸಾಗಾಟ ಮಾಡಿದರೆ ಎರಡು ಬಾರಿ 50000ರೂ. ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಮೂರನೇ ಬಾರಿಗೆ ಪರವಾನಿಗೆ ಯನ್ನೇ ರದ್ದು ಮಾಡಲಾ ಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ನಿನ್ನೆ ಎಚ್ಚರಿಕೆ ನೀಡಿದ್ದಾರೆ.

ಮರಳು ದಾಸ್ತಾನು ಮಾಡುವಂತಿಲ್ಲ: ಮನೆ, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅಗತ್ಯವಿರುವಷ್ಟು ಮಾತ್ರವೇ ಮರಳು ಸಂಗ್ರಹ ಮಾಡಬೇಕು. ಹೆಚ್ಚಿನ ಹಣ ಕೊಟ್ಟು ಅನಧಿಕೃತವಾಗಿ ದಾಸ್ತಾನು ಕೂಡಾ ಮಾಡಿ ಕಳ್ಳ ಸಂತೆಯಲ್ಲಿ ಮಾರಾಟ ಮಾಡುವಂತಿಲ್ಲ. ಈ ರೀತಿ ದಾಸ್ತಾನು ಮಾಡಿ ದರೆ ಲಾರಿ, ಜಾಗದ ಮಾಲಕರು ಹಾಗೂ ಸಂಬಂಧಪಟ್ಟವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X