Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಎನ್‌ಆರ್‌ಸಿಯಿಂದ ಹೊರಗುಳಿದವರು...

ಅಸ್ಸಾಂ ಎನ್‌ಆರ್‌ಸಿಯಿಂದ ಹೊರಗುಳಿದವರು ಮತ ಚಲಾಯಿಸಬಹುದು: ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ27 Sept 2019 10:28 PM IST
share
ಅಸ್ಸಾಂ ಎನ್‌ಆರ್‌ಸಿಯಿಂದ ಹೊರಗುಳಿದವರು ಮತ ಚಲಾಯಿಸಬಹುದು: ಚುನಾವಣಾ ಆಯೋಗ

ಹೊಸದಿಲ್ಲಿ, ಸೆ. 27: ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯಿಂದ ಹೊರಗುಳಿದ ಜನರು ಮತ ಹಾಕಬಹುದು ಎಂದು ಚುನಾವಣಾ ಆಯೋಗ ಶುಕ್ರವಾರ ಹೇಳಿದೆ. ಅಸ್ಸಾಂನ ನೋಂದಾಯಿತ ಮತದಾರರು ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯಲ್ಲಿ ಒಳಗೊಳ್ಳದೇ ಇದ್ದರೂ ಅವರನ್ನು ‘ಅನುಮಾನಾಸ್ಪದ’ ಎಂದು ಗುರುತಿಸದೇ ಇರಲು ಚುನಾವಣಾ ಆಯೋಗ ನಿರ್ಧರಿಸಿದೆ. ಅಲ್ಲದೆ, ಅಂತಹ ಪ್ರಕರಣಗಳ ಬಗ್ಗೆ ವಿದೇಶಿಗರ ನ್ಯಾಯಾಧಿಕರಣ ನಿರ್ಧಾರ ತೆಗೆದುಕೊಳ್ಳುವ ವರೆಗೆ ಅವರು ಚುನಾವಣೆಯಲ್ಲಿ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

 ಅನಿಶ್ಚಿತ ಹಾಗೂ ವಿವಾದದ ಅಡಿಯಲ್ಲಿ ಇರುವ ನಾಗರಿಕರನ್ನು ಅಸ್ಸಾಂನ ಮತದಾರರ ಪಟ್ಟಿಯಲ್ಲಿ ‘ಅನುಮಾನಾಸ್ಪದ’ ಅಥವಾ ‘ಡಿ’ ಶ್ರೇಣಿ ಎಂದು ಗುರುತಿಸಲಾಗುತ್ತದೆ. ರಾಜ್ಯ ಮತದಾರರ ಪಟ್ಟಿಯನ್ನು 1997ರಲ್ಲಿ ಪರಿಷ್ಕರಿಸುವ ಸಂದರ್ಭ ಚುನಾವಣಾ ಆಯೋಗ ಇದನ್ನು ಪರಿಚಯಿಸಿತ್ತು. ಇದರಿಂದ ‘ಡಿ’ ವರ್ಗದ ಮತದಾರರು ಅಸ್ಸಾಂನ ಮತದಾರರ ಪಟ್ಟಿಯಲ್ಲಿ ಮುಂದುವರಿದರು. ಆದರೆ, ವಿದೇಶಿಗರ ನ್ಯಾಯಾಧಿಕರಣ ಪ್ರಕರಣವನ್ನು ನಿರ್ಧರಿಸದ ಹೊರತು ಅವರು ಚುನಾವಣೆಯಲ್ಲಿ ಮತ ಚಲಾಯಿಸುವಂತಿರಲಿಲ್ಲ. ಇದರಿಂದ ಇತ್ತೀಚೆಗೆ ನಡೆದ ಲೋಕಸಭಾ ಚುನಾಣೆಯಲ್ಲಿ ಸುಮಾರು 1.2 ಲಕ್ಷ ‘ಡಿ’ ಮತದಾರರು ಭಾಗವಹಿಸಿರಲಿಲ್ಲ. ಈ ನಡುವೆ ರಾಷ್ಟ್ರೀಯ ಪೌರತ್ವ ನೋಂದಣಿ ಕರಡಿನಲ್ಲಿ ಒಳಗೊಳ್ಳದೇ ಇರುವವರಿಗೆ ಮತ ಚಲಾಯಿಸುವ ಅವಕಾಶ ನೀಡಲಾಗಿದೆ. ಆಗಸ್ಟ್ 30ರಂದು ಬಿಡುಗಡೆ ಮಾಡಲಾದ ಅಂತಿಮ ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯಲ್ಲಿ 3.11 ಕೋಟಿ ಅರ್ಜಿದಾರರನ್ನು ಒಳಗೊಳಿಸಲಾಗಿತ್ತು. 19 ಲಕ್ಷ ಜನರು ಹೊರಗುಳಿದಿದ್ದರು.

 ಈ ಪ್ರಕಟನೆಯ ನಂತರ ಪಟ್ಟಿಯಲ್ಲಿ ಒಳಗೊಳ್ಳದೇ ಇರುವ ವ್ಯಕ್ತಿಗಳ ನಾಗರಿಕತ್ವವನ್ನು ‘ಅನುಮಾನಾಸ್ಪದ’ ಎಂದು ಪರಿಗಣಿಸಬೇಕೆ ಹಾಗೂ ವಿದೇಶಿಗರ ನ್ಯಾಯಾಧಿಕರಣ ನಿರ್ಧರಿಸುವವರೆಗೆ ಅವರನ್ನು ‘ಅನಮಾನಾಸ್ಪದ’ ಎಂದು ಪರಿಗಣಿಸಬೇಕೇ ಎಂಬ ಕಾನೂನಾತ್ಮಕ ಪ್ರಶ್ನೆಯನ್ನು ಆಯೋಗ ಎದುರಿಸಿತ್ತು. ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿಯಿಂದ ಹೊರಗುಳಿದಿರುವ ವ್ಯಕ್ತಿಗಳ ಕುರಿತ ಸಂದೇಹಕ್ಕೆ ಸ್ಪಷ್ಟನೆ ನೀಡಿದ್ದ ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಹೊರಗುಳಿದವರನ್ನು ವಿದೇಶಿಗರು ಎಂದು ಘೋಷಿಸುವುದಿಲ್ಲ. ಅವರಿಗೆ ನ್ಯಾಯಾಧಿಕರಣದ ಎದುರು ನಾಗರಿಕತ್ವ ಸಾಬೀತಪಡಿಸಲು ಅವಕಾಶ ನೀಡಲಾಗುವುದು ಎಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X