Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೊರಿಯಾ ಓಪನ್: ಕಶ್ಯಪ್ ಸೆಮಿಫೈನಲ್‌ಗೆ...

ಕೊರಿಯಾ ಓಪನ್: ಕಶ್ಯಪ್ ಸೆಮಿಫೈನಲ್‌ಗೆ ಲಗ್ಗೆ

ವಾರ್ತಾಭಾರತಿವಾರ್ತಾಭಾರತಿ27 Sept 2019 11:09 PM IST
share
ಕೊರಿಯಾ ಓಪನ್: ಕಶ್ಯಪ್ ಸೆಮಿಫೈನಲ್‌ಗೆ ಲಗ್ಗೆ

 ಇಂಚಿಯಾನ್, ಸೆ.27:ಭಾರತದ ಹಿರಿಯ ಶಟ್ಲರ್ ಪಾರುಪಲ್ಲಿ ಕಶ್ಯಪ್ ಕೊರಿಯಾ ಓಪನ್ ವರ್ಲ್ಡ್ ಟೂರ್ ಸೂಪರ್-500 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಡೆನ್ಮಾರ್ಕ್ ನ ಜಾನ್ ಒ’ಜೊರ್ಗೆನ್ಸನ್‌ರನ್ನು ನೇರ ಗೇಮ್‌ಗಳಿಂದ ಮಣಿಸುವ ಮೂಲಕ ಸೆಮಿ ಫೈನಲ್‌ಗೆ ತಲುಪಿದರು.

ಇಲ್ಲಿ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್‌ನಲ್ಲಿ ಹೈದರಾಬಾದ್‌ನ 33ರ ಹರೆಯದ ಆಟಗಾರ ಕಶ್ಯಪ್ ವಿಶ್ವದ ನಂ.2ನೇ ಆಟಗಾರ ಜೊರ್ಗೆನ್ಸನ್‌ರನ್ನು 37 ನಿಮಿಷಗಳ ಹೋರಾಟದಲ್ಲಿ 24-22, 21-8 ಗೇಮ್‌ಗಳ ಅಂತರದಿಂದ ಮಣಿಸಿದರು. ಈ ಋತುವಿನಲ್ಲಿ ಎರಡನೇ ಬಾರಿ ಸೆಮಿ ಫೈನಲ್ ತಲುಪಿದರು. ಇಂಡಿಯಾ ಓಪನ್ ಸೂಪರ್ 500 ಟೂರ್ನಮೆಂಟ್‌ನಲ್ಲಿ ಕೊನೆಯ ಬಾರಿ ಅಂತಿಮ-4ರ ಹಂತ ತಲುಪಿದ್ದರು.

2014ರ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಕಶ್ಯಪ್ ಶನಿವಾರ ನಡೆಯುವ ಅಂತಿಮ-4ರ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ.1 ಆಟಗಾರ, ಎರಡು ಬಾರಿಯ ಚಾಂಪಿಯನ್ ಜಪಾನ್‌ನ ಕೆಂಟೊ ಮೊಮೊಟಾರನ್ನು ಎದುರಿಸಲಿದ್ದಾರೆ.

ಅರ್ಹತಾ ಸುತ್ತಿನಿಂದ ಭಡ್ತಿ ಪಡೆದು ಬಂದಿದ್ದ ಮಾಜಿ ವಿಶ್ವದ ನಂ.6ನೇ ಆಟಗಾರ ಕಶ್ಯಪ್ ಐದು ವರ್ಷಗಳ ಹಿಂದೆ ಡೆನ್ಮಾರ್ಕ್ ಓಪನ್‌ನಲ್ಲಿ ಜೊರ್ಗೆನ್ಸನ್‌ರನ್ನು ಕೊನೆಯ ಬಾರಿ ಎದುರಿಸಿದ್ದರು. ಈ ಪಂದ್ಯಕ್ಕಿಂತ ಮೊದಲು ಜೊರ್ಗೆನ್ಸನ್ ವಿರುದ್ಧ 2-4 ದಾಖಲೆ ಹೊಂದಿದ್ದರು. ಮೊದಲ ಗೇಮ್‌ನಲ್ಲಿ ಉಭಯ ಆಟಗಾರರ ಮಧ್ಯೆ ತೀವ್ರ ಪೈಪೋಟಿ ಕಂಡುಬಂದಿತು. ಮಧ್ಯಂತರದಲ್ಲಿ ಕಶ್ಯಪ್ 14-12 ಮುನ್ನಡೆಯಲ್ಲಿದ್ದರು. ಇಬ್ಬರು ಆಟಗಾರರು 14-14, 18-18 ಹಾಗೂ 19-19 ರಿಂದ ಸಮಬಲ ಸಾಧಿಸಿದರು. 22 ನಿಮಿಷಗಳ ಕಾಲ ನಡೆದ ಮೊದಲ ಗೇಮ್‌ನಲ್ಲಿ ಕಶ್ಯಪ್ 24-22 ಅಂತರದಿಂದ ರೋಚಕ ಜಯ ದಾಖಲಿಸಿದರು.

ಎರಡನೇ ಗೇಮ್‌ನ ಆರಂಭದಲ್ಲಿ ಉಭಯ ಆಟಗಾರರು 3-3ರಿಂದ ಸಮಬಲ ಸಾಧಿಸಿದರು. ಆ ಬಳಿಕ ಹಿಡಿತ ಸಾಧಿಸಿದ ಕಶ್ಯಪ್ ತನ್ನ ತಪ್ಪನ್ನು ಕಡಿಮೆಗೊಳಿಸಿ ಸತತ 5 ಅಂಕ ಗಳಿಸಿದರು. ಜೊರ್ಗೆನ್ಸನ್ ವೇಗದ ಆಟಕ್ಕೆ ಯತ್ನಿಸಿದರು. ಆದರೆ, ಅನಗತ್ಯ ತಪ್ಪೆಸಗಿದರು. ವಿರಾಮದ ವೇಳೆಗೆ ಕಶ್ಯಪ್ 11-7 ಮುನ್ನಡೆ ಸಾಧಿಸಿದರು. ವಿರಾಮದ ಬಳಿಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಶ್ಯಪ್ 10 ಅಂಕಗಳ ಪೈಕಿ 9 ಅಂಕ ಗಳಿಸಿದರು. 21-8 ಅಂತರದಿಂದ ಎರಡನೇ ಗೇಮ್‌ನ್ನು ಗೆದ್ದುಕೊಂಡು ಪಂದ್ಯವನ್ನು ವಶಪಡಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X