Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Sept 2019 12:07 AM IST
share
ವಿದ್ಯಾರ್ಥಿವೇತನಕ್ಕೆ  ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಶ್ಯಾಫ್ಲರ್ ಇಂಡಿಯಾ ಹೋಪ್ ಇಂಜಿನಿಯರಿಂಗ್ ಸ್ಕಾಲರ್‌ಶಿಪ್ 2019-20

 ವಿವರ: ಆರ್ಥಿಕ ನೆರವಿನ ಅಗತ್ಯವಿರುವ ಪ್ರತಿಭಾನ್ವಿತ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ಪದವಿ ಅಧ್ಯಯನ ಮುಂದುವರಿಸಲು ಶ್ಯಾಫ್ಲರ್ ಇಂಡಿಯಾ ನೀಡುವ ಸ್ಕಾಲರ್‌ಶಿಪ್. ಈ ಯೋಜನೆಯಡಿ ಆಯ್ದ ಪ್ರತಿಭಾನ್ವಿತರಿಗೆ ಶೈಕ್ಷಣಿಕ ವೆಚ್ಚ ಭರಿಸಲು ಸ್ಕಾಲರ್‌ಶಿಪ್ ನೀಡಲಾಗುವುದು.

 ಅರ್ಹತೆ: ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು, 12ನೇ ತರಗತಿ(ವಿಜ್ಞಾನ)ಯಲ್ಲಿ ಕನಿಷ್ಠ ಶೇ. 60 ಅಂಕ ಗಳಿಸಿದ್ದು ಮಾನ್ಯತೆ ಪಡೆದ ಭಾರತದ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಪದವಿ ತರಗತಿಗೆ ನೋಂದಣಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 5 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 75 ಸಾವಿರ ರೂ. ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟಂಬರ್ 30, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/SIHE1

***********************

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಪ್ರತಿಭಾನ್ವಿತ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಒಎನ್‌ಜಿಸಿ ಸ್ಕಾಲರ್‌ಶಿಪ್ 2019-20

ವಿವರ: ವೃತ್ತಿಪರ ಕೋರ್ಸ್‌ಗಳಲ್ಲಿ ಉನ್ನತ ಅಧ್ಯಯನ ನಡೆಸಲು ಬಯಸುವ ಎಸ್ಸಿ/ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಂದ ಸ್ಕಾಲರ್‌ಶಿಪ್‌ಗೆ ಒಎನ್‌ಜಿಸಿ ಅರ್ಜಿ ಆಹ್ವಾನಿಸಿದೆ. ಅಲ್ಪಸಂಖ್ಯಾತ ಸಮುದಾಯದ ಬಡ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನಕ್ಕೆ ಆರ್ಥಿಕ ನೆರವು ನೀಡುವ ಉದ್ದೇಶದ ಸ್ಕಾಲರ್‌ಶಿಪ್.

 ಅರ್ಹತೆ: ಇಂಜಿನಿಯರಿಂಗ್, ಎಂಬಿಬಿಎಸ್, ಜಿಯಾಲಜಿ/ಜಿಯೊಫಿಸಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಎಂಬಿಎ ಪದವಿಯ ಪ್ರಥಮ ವರ್ಷಕ್ಕೆ ನೋಂದಣೆಯಾಗಿರುವ ಎಸ್ಸಿ/ಎಸ್ಟಿ ಸಮುದಾಯದ ವಿದ್ಯಾರ್ಥಿಗಳು. ಅರ್ಜಿ ಸಲ್ಲಿಸುವವರು 30 ವರ್ಷ ಮೀರಿರಬಾರದು ಹಾಗೂ 12ನೇ ತರಗತಿ / ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.60 ಅಂಕ ಗಳಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ 4. 5 ಲಕ್ಷ ರೂ. ಅಥವಾ ಕಡಿಮೆ ಇರಬೇಕು.

 ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 48 ಸಾವಿರ ರೂ. ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15, 2019

ಅರ್ಜಿ: ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/ OST2

*****************

 ವಿದ್ಯಾರ್ಥಿವೇತನ

(ಅಗತ್ಯ ಆಧಾರಿತ):

ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರಿ-ಮೆಟ್ರಿಕ್ ಸ್ಕಾಲರ್‌ಶಿಪ್ 2019-20

ವಿವರ: ಭಾರತ ಸರಕಾರದ ಅಂಗವಿಕಲ ವ್ಯಕ್ತಿಗಳ ಸಬಲೀಕರಣ ಇಲಾಖೆಯು ದೈಹಿಕ ಅಂಗವಿಕಲತೆ ಹೊಂದಿರುವ ವಿದ್ಯಾರ್ಥಿಗಳಿಗೆ ಮಾಧ್ಯಮಿಕ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುತ್ತಿದೆ. ಶೈಕ್ಷಣಿಕ ವೆಚ್ಚ ಭರಿಸಲು ಸ್ಕಾಲರ್‌ಶಿಪ್ ನೀಡಲಾಗುವುದು.

ಅರ್ಹತೆ: ಶೇ.40ಕ್ಕಿಂತ ಅಧಿಕ ಅಂಗವಿಕಲತೆ ಹೊಂದಿರುವ , ಈಗ 9 ಅಥವಾ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

  ನೆರವು: ಆಯ್ಕೆಯಾದ ಅಭ್ಯರ್ಥಿಗಳಿಗೆ ನಿರ್ವಹಣೆ ಭತ್ತೆ ತಿಂಗಳಿಗೆ 800 ರೂ., ಪುಸ್ತಕ ಅನುದಾನ ವರ್ಷಕ್ಕೆ 1000 ರೂ. ಮತ್ತು ಅಂಗವಿಕಲತೆ ಭತ್ತೆ ವರ್ಷಕ್ಕೆ 2000ರೂ.ನಿಂದ 4000 ರೂ.ವರೆಗೆ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜಾಲತಾಣ: http://www.b4s.in/bharati/PSF1

*******************

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ರಾಷ್ಟ್ರೀಯ ಅರ್ಹತೆ ಹಾಗೂ ಆದಾಯ ಸ್ಕಾಲರ್‌ಶಿಪ್ ಯೋಜನೆ 2019-20

 ವಿವರ: 8ನೇ ತರಗತಿ ಬಳಿಕ ಶಿಕ್ಷಣ ಮುಂದುವರಿಸಲು ಆರ್ಥಿಕ ನೆರವಿನ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚ ಭರಿಸಲು ನೀಡುವ ಸ್ಕಾಲರ್‌ಶಿಪ್. ಭಾರತ ಸರಕಾರದ ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆ ಭಾರತದಾದ್ಯಂತದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ನೀಡುವ ಸ್ಕಾಲರ್‌ಶಿಪ್ ಇದಾಗಿದೆ.

ಅರ್ಹತೆ: ಕನಿಷ್ಠ ಶೇ.55 ಅಂಕಗಳೊಂದಿಗೆ (ಎಲ್ಲಾ ವರ್ಗದವರಿಗೂ ಕಡ್ಡಾಯ) 7ನೇ ತರಗತಿ, ಕನಿಷ್ಠ ಶೇ.55 ಅಂಕಗಳೊಂದಿಗೆ (ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಶೇ.5 ರಿಯಾಯಿತಿ)8ನೇ ತರಗತಿ ತೇರ್ಗಡೆಯಾಗಿ 9ನೇ ತರಗತಿಗೆ ನೋಂದಣಿಯಾಗಿರುವ ವಿದ್ಯಾರ್ಥಿಗಳು. ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

ನೆರವು: ಆಯ್ಕೆಯಾದ ವಿದ್ಯಾರ್ಥಿಗಳಿಗೆ ಒಟ್ಟು 12,000 ರೂ.ಯನ್ನು ತಿಂಗಳ ಕಂತಿನಲ್ಲಿ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/NMC6

share
ವಾರ್ತಾಭಾರತಿ
ವಾರ್ತಾಭಾರತಿ
Next Story
X