Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಚುನಾವಣೆ ವೇಳೆ ವಾಟ್ಸ್ ಆ್ಯಪ್...

ಭಾರತದ ಚುನಾವಣೆ ವೇಳೆ ವಾಟ್ಸ್ ಆ್ಯಪ್ ದುರ್ಬಳಕೆ: ಅಧ್ಯಯನದಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ28 Sept 2019 11:14 AM IST
share
ಭಾರತದ ಚುನಾವಣೆ ವೇಳೆ ವಾಟ್ಸ್ ಆ್ಯಪ್ ದುರ್ಬಳಕೆ: ಅಧ್ಯಯನದಿಂದ ಬಹಿರಂಗ

ಹೊಸದಿಲ್ಲಿ: ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ವಾಟ್ಸ್ ಆ್ಯಪ್, ಯಾವುದೇ ಸಂದೇಶ ಫಾರ್ವರ್ಡ್ ಮಾಡುವುದನ್ನು ಐದು ಮಂದಿಗೆ ಸೀಮಿತಗೊಳಿಸಿದ್ದರೂ, ಕಳೆದ ಸಾರ್ವತ್ರಿಕ ಚುನಾವಣೆಯಯ ವೇಳೆ ತಪ್ಪು ಮಾಹಿತಿಗಳನ್ನು ಹರಡಲು ಈ ಸಾಮಾಜಿಕ ಜಾಲತಾಣವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಅಂಶ ಬ್ರೆಜಿಲ್ ವಿವಿ ನಡೆಸಿದ ಅಧ್ಯಯನದಿಂದ ಬೆಳಕಿಗೆ ಬಂದಿದೆ.

ಫೇಸ್‍ಬುಕ್ ಮಾಲಕತ್ವದ ವಾಟ್ಸ್ ಆ್ಯಪ್, ಚುನಾವಣಾ ಪ್ರಚಾರ ಸಂದರ್ಭದಲ್ಲಿ ವಾಟ್ಸ್ ಆ್ಯಪ್ ಗುಂಪುಗಳಿಗೆ ಇಂಥ ಸುಳ್ಳು ಮಾಹಿತಿಗಳ ಅಪಪ್ರಚಾರವನ್ನು ತಡೆಯಲು ವಿಫಲವಾಗಿದೆ. ಬ್ರೆಜಿಲ್‍ನ ಫೆಡರಲ್ ಯುನಿವರ್ಸಿಟಿ ಆಫ್ ಮಿನಾಸ್ ಗೆರಿಯಾಸ್ ಹಾಗೂ ಅಮೆರಿಕದ ಮೆಸೆಚುಸೆಟ್ಸ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಜಂಟಿಯಾಗಿ ಈ ಅಧ್ಯಯನ ಕೈಗೊಂಡಿದ್ದವು.

ತಪ್ಪುಸಂದೇಶ ರವಾನಿಸಲು ಪ್ಲಾಟ್‍ಫಾರಂ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ವಾಟ್ಸ್ ಆ್ಯಪ್ ಕೈಗೊಂಡ ಕ್ರಮಗಳು ಎಷ್ಟು ಪರಿಣಾಮಕಾರಿ ಎಂದು ತಿಳಿಯಲು ಈ ಅಧ್ಯಯನ ಕೈಗೊಳ್ಳಲಾಗಿತ್ತು. ಭಾರತ, ಬ್ರೆಜಿಲ್ ಮತ್ತು ಇಂಡೋನೇಷ್ಯಾದಲ್ಲಿ ಚುನಾವಣೆಗೆ 60 ದಿನ ಮೊದಲು ಮತ್ತು ಚುನಾವಣೆ ಬಳಿಕ 15 ದಿನಗಳ ಕಾಲದ ದತ್ತಾಂಶಗಳನ್ನು ವಿಶ್ಲೇಷಿಸಿದ ಈ ನಿರ್ಧಾರಕ್ಕೆ ಬರಲಾಗಿದೆ.

ವಾಟ್ಸ್ ಆ್ಯಪ್ನ ಪ್ರಯತ್ನಗಳು ಸುಳ್ಳು ಸುದ್ದಿ ಹರಡುವುದನ್ನು ವಿಳಂಬ ಮಾಡಲು ಫಲಕಾರಿಯಾಗಿದೆಯೇ ವಿನಃ ಅದನ್ನು ತಡೆಯುವಲ್ಲಿ ಯಾವುದೇ ಫಲ ನೀಡಿಲ್ಲ ಎಂದು arxiv.org ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾದ ಅಧ್ಯಯನ ವರದಿ ಪ್ರತಿಪಾದಿಸಿದೆ.

ಬ್ರೆಜಿಲ್‍ನಲ್ಲಿ ವಿವಿಧ ವಾಟ್ಸ್ ಆ್ಯಪ್ ಗುಂಪುಗಳ ಮೂಲಕ ಸುಳ್ಳು ಸುದ್ದಿ ಪ್ರಚಾರವಾಗಲು ಎರಡು ದಿನ ತೆಗೆದುಕೊಂಡರೆ, ಭಾರತದಲ್ಲಿ ಮೊದಲ ಬಾರಿಗೆ ಪೋಸ್ಟ್ ಆದ 20 ದಿನಗಳ ಬಳಿಕವೂ ಇದು ವಿವಿಧ ಗುಂಪುಗಳಲ್ಲಿ ಹರಿದಾಡುತ್ತಿತ್ತು ಎನ್ನುವುದನ್ನು ವರದಿ ಹೇಳಿದೆ. ಈ ಗುಂಪುಗಳ ಮೂಲಕ ಪ್ರಸಾರವಾದ ಸಂದೇಶಗಳು ವೈಯಕ್ತಿಕವಾಗಿಯೂ ಕೊನೆಗೆ ಬಳಕೆದಾರರಿಗೆ ರವಾನೆಯಾಗಿವೆ ಎಂದು ವರದಿ ಸ್ಪಷ್ಟಪಡಿಸಿದೆ.

ಏಪ್ರಿಲ್ 11ರಿಂದ ಮೇ 19ರ ವರೆಗೆ ಭಾರತದಲ್ಲಿ ನಡೆದ ಏಳು ಹಂತಗಳ ಚುನಾವಣೆ ವೇಳೆ, ಸುಳ್ಳು ಸುದ್ದಿಗಳು ತನ್ನ ಪ್ಲಾಟ್‍ಫಾರಂ ಮೂಲಕ ಹರಿದಾಡುವುದನ್ನು ತಡೆಯಲು ವಾಟ್ಸ್ ಆ್ಯಪ್ ಹಲವು ನಿಯಂತ್ರಣ ಕ್ರಮಗಳನ್ನು ಕೈಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X