Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಕೇಶ್ ಅಸ್ಥಾನ ಭ್ರಷ್ಟಾಚಾರ ಪ್ರಕರಣ:...

ರಾಕೇಶ್ ಅಸ್ಥಾನ ಭ್ರಷ್ಟಾಚಾರ ಪ್ರಕರಣ: ಇಡೀ ತನಿಖಾ ತಂಡವೇ ಖಾಲಿ!

ವಾರ್ತಾಭಾರತಿವಾರ್ತಾಭಾರತಿ28 Sept 2019 7:55 PM IST
share
ರಾಕೇಶ್ ಅಸ್ಥಾನ ಭ್ರಷ್ಟಾಚಾರ ಪ್ರಕರಣ: ಇಡೀ ತನಿಖಾ ತಂಡವೇ ಖಾಲಿ!

ಹೊಸದಿಲ್ಲಿ,ಸೆ.28: ವಿವಾದಿತ ಐಪಿಎಸ್ ಅಧಿಕಾರಿ ರಾಕೇಶ್ ಅಸ್ಥಾನ ವಿರುದ್ಧದ ಲಂಚ ಆರೋಪದ ತನಿಖೆಯನ್ನು ಸಂಪೂರ್ಣಗೊಳಿಸಲು ದಿಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ಸೆಪ್ಟಂಬರ್ 30ರ ಗಡುವು ಕೊನೆಯಾಗಲು ಕೆಲವೇ ದಿನಗಳು ಬಾಕಿಯಿರುವಂತೆಯೇ ಕಳಂಕಿತ ಅಧಿಕಾರಿಯನ್ನು ರಕ್ಷಿಸಲು ಕೇಂದ್ರ ಸರಕಾರ ಅಂತಿಮ ಪ್ರಯತ್ನಗಳಲ್ಲಿ ತೊಡಗಿದಂತೆ ಕಾಣುತ್ತಿದೆ ಎಂದು ‘thewire .in’ ವರದಿ ಮಾಡಿವೆ.

ಅಸ್ಥಾನ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಭ್ರಷ್ಟಾಚಾರನಿಗ್ರಹ ವಿಭಾಗದ ಜಂಟಿ ನಿರ್ದೇಶಕ ವಿ. ಮುರುಗೇಶನ್ ಅವರನ್ನು ಅವರ ಮೂಲ ಸೇವಾ ಕ್ಷೇತ್ರ ಉತ್ತರಾಖಂಡಕ್ಕೆ ಮರುವರ್ಗಾವಣೆಗೊಳಿಸಲಾಗಿದೆ. ಕಳೆದ ಆಗಸ್ಟ್ ಮಧ್ಯದಲ್ಲಿ ಮುರುಗೇಶನ್ ಅವರನ್ನು ವರ್ಗಾಯಿಸಲು ಅನುಮತಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಿಬಿಐ ಮನವಿ ಮಾಡಿತ್ತ. ಈ ಮನವಿಯನ್ನು ನ್ಯಾಯಾಧೀಶ ದೀಪಕ್ ಗುಪ್ತಾ ಅವರು ಶುಕ್ರವಾರ ಪುರಸ್ಕರಿಸಿದ್ದಾರೆ. ಮುರುಗೇಶನ್ ಅವರು ಕಲ್ಲಿದ್ದಲು ಹಗರಣದ ತನಿಖೆಯನ್ನೂ ನಡೆಸುತ್ತಿದ್ದ ಕಾರಣ ಅವರ ವರ್ಗಾವಣೆಗೆ ಶ್ರೇಷ್ಟ ನ್ಯಾಯಾಲಯದ ಅನುಮತಿಯ ಅಗತ್ಯವಿತ್ತು ಎಂದು ವರದಿ ತಿಳಿಸಿದೆ.

ಆಸಕ್ತಿದಾಯಕವೆಂದರೆ, ಅಸ್ಥಾನ ಪ್ರಕರಣದ ತನಿಖಾಧಿಕಾರಿಯಾಗಿದ್ದ ವರಿಷ್ಟಾಧಿಕಾರಿ ಸತೀಶ್ ಡಗರ್ ಕಳೆದ ತಿಂಗಳು ಸಿಬಿಐಯಿಂದ ಸ್ವಯಂನಿವೃತ್ತ ಕೋರಿದ್ದರು. ಅವರ ನಿವೃತ್ತಿ ಮನವಿಯನ್ನು ಸಿಬಿಐ ಕಳೆದ ವಾರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಕಳುಹಿಸಿದೆ. ಅಸ್ಥಾನ ಪ್ರಕರಣದಲ್ಲಿ ಅಸಹಜ ಆತುರತೆ ತೋರಿಸುತ್ತಿರುವ ಸರಕಾರ ಇದಕ್ಕೆ ಸಂಬಂಧಪಟ್ಟ ಎಲ್ಲ ನಾಲ್ವರು ಅಧಿಕಾರಿಗಳನ್ನೂ ಬದಲಾಯಿಸಿದೆ. ಈ ಪೈಕಿ ಹೆಚ್ಚುವರಿ ನಿರ್ದೇಶಕ ಎಂ.ಎನ್ ರಾವ್ ಅವರನ್ನು ಜುಲೈ 5ರಂದು ತೆಗೆಯಲಾಗಿದ್ದರೆ ಜುಲೈ 10ರಂದು ಸಹಾಯಕ ಪೊಲೀಸ್ ಪ್ರಧಾನ ನಿರೀಕ್ಷಕ ತರುಣ್ ಗಾಬಾ ಅವರನ್ನು ಬದಲಾಯಿಸಲಾಗಿತ್ತು.

ಜುಲೈ 16ರಂದು ಡಿಐಜಿ ಗಗನ್‌ದೀಪ್ ಗಂಭೀರ್ ಅವರಿಗೆ ತನಿಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಯಿತು. ಗಂಭೀರ್, ಅಸ್ಥಾನ ರಚಿಸಿದ್ದ ವಿಶೇಷ ತನಿಖಾ ತಂಡದ (ಸಿಟ್) ಸದಸ್ಯೆಯಾಗಿದ್ದರು ಮತ್ತು ಅಸ್ಥಾನ ಆಪ್ತರಾಗಿದ್ದಾರೆ ಎಂದು ನಂಬಲಾಗಿದೆ. ಅವರು ತನಿಖೆಯ ಹೊಣೆಯನ್ನು ಹೊತ್ತ ತಿಂಗಳ ನಂತರ ಡಗರ್ ಸ್ವಯಂನಿವೃತ್ತಿ ಕೋರಿದ್ದರು.

ತಾನು ತನಿಖೆ ನಡೆಸುತ್ತಿದ್ದ ಆರೋಪಿಯನ್ನು ಪ್ರಕರಣದಿಂದ ದೋಷಮುಕ್ತಗೊಳಿಸುವ ಪ್ರತಿಯಾಗಿ ಆರೋಪಿಯಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಿಸಿ ಅಸ್ಥಾನ ವಿರುದ್ಧ ಸಿಬಿಐ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಕರಣ ದಾಖಲಿಸಿತ್ತು. ಈ ಆರೋಪವನ್ನು ಅಸ್ಥಾನ ಬಲವಾಗಿ ನಿರಾಕರಿಸಿದ್ದರು. ಅಂದಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಸಹಾಯಕ ನಿರ್ದೇಶಕ ಅಸ್ಥಾನ ಪರಸ್ಪರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಕಾರಣ ಅವರಿಬ್ಬರನ್ನೂ ರಜೆಯಲ್ಲಿ ಕಳುಹಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X