Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಶ್ಮೀರದ ಯಥಾಸ್ಥಿತಿ ಬದಲಾಗಬಾರದು:...

ಕಾಶ್ಮೀರದ ಯಥಾಸ್ಥಿತಿ ಬದಲಾಗಬಾರದು: ವಿಶ್ವಸಂಸ್ಥೆಯ ವಾರ್ಷಿಕ ಅಧಿವೇಶನದಲ್ಲಿ ಚೀನಾ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ28 Sept 2019 8:23 PM IST
share
ಕಾಶ್ಮೀರದ ಯಥಾಸ್ಥಿತಿ ಬದಲಾಗಬಾರದು: ವಿಶ್ವಸಂಸ್ಥೆಯ ವಾರ್ಷಿಕ ಅಧಿವೇಶನದಲ್ಲಿ ಚೀನಾ ಪ್ರತಿಪಾದನೆ

ವಿಶ್ವಸಂಸ್ಥೆ, ಸೆ. 28: ವಿಶ್ವಸಂಸ್ಥೆಯ ಮಹಾಸಭೆಯ ವಾರ್ಷಿಕ ಅಧಿವೇಶನದಲ್ಲಿ ಶುಕ್ರವಾರ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿರುವ ಚೀನಾ, ವಿವಾದವನ್ನು ವಿಶ್ವಸಂಸ್ಥೆಯ ಒಡಂಬಡಿಕೆ, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಶಾಂತಿಯುತವಾಗಿ ಮತ್ತು ಸೂಕ್ತ ರೀತಿಯಲ್ಲಿ ಪರಿಹರಿಸಬೇಕು ಎಂದು ಹೇಳಿದೆ.

ಕಾಶ್ಮೀರದ ‘ಯಥಾಸ್ಥಿತಿ’ಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬುದಾಗಿಯೂ ಪಾಕಿಸ್ತಾನದ ಆಪ್ತ ದೇಶವಾಗಿರುವ ಚೀನಾ ಹೇಳಿದೆ.

‘‘ಹಿಂದಿನಿಂದ ಬಗೆಹರಿಯದೇ ಉಳಿದಿರುವ ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಒಡಂಬಡಿಕೆ, ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಶಾಂತಿಯುತವಾಗಿ ಮತ್ತು ಸರಿಯಾದ ರೀತಿಯಲ್ಲಿ ಪರಿಹರಿಸಬೇಕು’’ ಎಂದು ಚೀನಾ ವಿದೇಶ ಸಚಿವ ವಾಂಗ್ ಯಿ ತನ್ನ ಭಾಷಣದಲ್ಲಿ ಹೇಳಿದರು.

‘‘ಕಾಶ್ಮೀರದ ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಕ್ರಮಗಳನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳಬಾರದು. ವಿವಾದವನ್ನು ಪರಿಣಾಮಕಾರಿಯಾಗಿ ಇತ್ಯರ್ಥಗೊಳ್ಳುತ್ತದೆ ಹಾಗೂ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಸಂಬಂಧದಲ್ಲಿ ಸ್ಥಿರತೆ ಕಾಣಿಸಿಕೊಳ್ಳುತ್ತದೆ ಎಂದು ಎರಡೂ ದೇಶಗಳ ನೆರೆದೇಶವಾಗಿ ಚೀನಾ ಭಾವಿಸುತ್ತದೆ’’ ಎಂದು ವಾಂಗ್ ಹೇಳಿದರು.

► ಚೀನಾ ಭಾರತದ ಸಾರ್ವಭೌಮತೆಯನ್ನು ಗೌರವಿಸಬೇಕು: ಭಾರತ

‘‘ಚೀನಾ ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತದ ಆಂತರಿಕ ವಿಷಯವಾಗಿದೆ’’ ಎಂದು ಭಾರತ ಸರಕಾರ ಶನಿವಾರ ಹೇಳಿದೆ.

 ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣದಲ್ಲಿ ಚೀನಾದ ವಿದೇಶ ಸಚಿವ ವಾಂಗ್ ಯಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿರುವುದಕ್ಕೆ ಭಾರತದ ವಿದೇಶ ಸಚಿವಾಲಯದ ವಕ್ತಾರರೊಬ್ಬರು ಹೇಳಿಕೆಯೊಂದರಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

‘‘ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಎಂಬ ಕಾನೂನುಬಾಹಿರ ಯೋಜನೆಯ ಮೂಲಕ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಯಥಾಸ್ಥಿತಿಯನ್ನು ಬದಲಿಸುವ ಪ್ರಯತ್ನಗಳು ನಡೆದಿವೆ’’ ಎಂದು ಭಾರತ ಹೇಳಿದೆ.

ಪಶ್ಚಿಮ ಚೀನಾದ ಕಶ್ಗರ್ ವಲಯವನ್ನು ಪಾಕಿಸ್ತಾನದ ಗ್ವಾಡರ್ ಬಂದರಿನೊಂದಿಗೆ ಸಂಪರ್ಕಿಸುವ 50 ಬಿಲಿಯ ಡಾಲರ್ ವೆಚ್ಚದ 3,000 ಕಿ.ಮೀ. ಉದ್ದದ ರಸ್ತೆಯು ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಹಾದು ಹೋಗುತ್ತದೆ. ಈ ರಸ್ತೆಯ ಬಗ್ಗೆ ಭಾರತ ಆರಂಭದಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X