Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಯಸ್ಸಿನ ಸುಳ್ಳು ದಾಖಲೆ ಸಲ್ಲಿಸಿ...

ವಯಸ್ಸಿನ ಸುಳ್ಳು ದಾಖಲೆ ಸಲ್ಲಿಸಿ ತಂಡದಲ್ಲಿ ಸ್ಥಾನ ಗಿಟ್ಟಿಸುವುದರಿಂದ ಕ್ರಿಕೆಟ್‌ಗೆ ಹಾನಿ *

ರಾಹುಲ್ ದ್ರಾವಿಡ್

ವಾರ್ತಾಭಾರತಿವಾರ್ತಾಭಾರತಿ28 Sept 2019 11:02 PM IST
share
ವಯಸ್ಸಿನ ಸುಳ್ಳು ದಾಖಲೆ ಸಲ್ಲಿಸಿ ತಂಡದಲ್ಲಿ ಸ್ಥಾನ ಗಿಟ್ಟಿಸುವುದರಿಂದ ಕ್ರಿಕೆಟ್‌ಗೆ ಹಾನಿ *

ಮುಂಬೈ, ಸೆ.28: ವಯಸ್ಸಿನ ಬಗ್ಗೆ ಸುಳ್ಳು ದಾಖಲೆ ಸಲ್ಲಿಸಿ 19ರ ಕೆಳಹರೆಯದ ವರ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸುವ ವಿದ್ಯಮಾನ ಭಾರತದ ಕ್ರಿಕೆಟ್‌ಗೆ ಹಾನಿ ಎಸಗುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.

          ಈ ಹಿನ್ನೆಲೆಯಲ್ಲಿ, ಓರ್ವ ಆಟಗಾರ ಬದುಕಿನಲ್ಲಿ ಒಮ್ಮೆ ಮಾತ್ರ 19ರ ಕೆಳಹರೆಯದ ವಿಶ್ವಕಪ್ ಕ್ರಿಕೆಟ್‌ನಲ್ಲಿ ಆಡುವ ಅವಕಾಶ ಮಾಡಿಕೊಡುವ ಕಠಿಣ ನಿಯಮವನ್ನು ಜಾರಿಗೊಳಿಸಬೇಕು ಎಂದವರು ಒತ್ತಾಯಿಸಿದರು. ಕ್ರೀಡಾಂಗಣದ ಅಧಿಕಾರಿಗಳು, ತಂಡದ ಮಾಲಕರು, ಕ್ಲಬ್ ತಂಡಗಳು ಆಟಗಾರರು ವಯಸ್ಸಿನ ಬಗ್ಗೆ ಸುಳ್ಳು ಹೇಳುವುದನ್ನು ತಡೆಯಬಹುದು. ವಯಸ್ಸಿನ ಬಗ್ಗೆ ಸುಳ್ಳು ಹೇಳುವುದು ಕ್ರಿಕೆಟ್ ಆಟದ ಸಂಸ್ಕೃತಿಗೆ ಮಾರಕವಾಗಿದೆ ಎಂದು ದ್ರಾವಿಡ್ ಹೇಳಿದರು. ಭಾರತದ 19ರ ಕೆಳಹರೆಯದ ಕ್ರಿಕೆಟ್ ತಂಡದ ಮಾಜಿ ಕೋಚ್ ಆಗಿರುವ ದ್ರಾವಿಡ್, ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯ ನಿರ್ದೇಶಕರಾಗಿದ್ದಾರೆ. ಮುಂಬೈಯ ಬಿಕೆಸಿ ಎಂಸಿಎ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೈಮ್ಸ್ ಕ್ರಿಕೆಟ್ ಶೀಲ್ಡ್ ಟೂರ್ನಿಯ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಟೈಮ್ಸ್ ಕ್ರಿಕೆಟ್ ಶೀಲ್ಡ್ ನಲ್ಲಿ ಭಾಗವಹಿಸಲು ಆಗಲಿಲ್ಲವಲ್ಲ ಎಂಬ ಕೊರಗು ಮುಂಬೈಯಿಂದ ಹೊರಗಿರುವ ಆಟಗಾರರಿಗೆ ಸದಾ ಕಾಡುತ್ತಿರುತ್ತದೆ. ಇದಕ್ಕೆ ತಾನೂ ಹೊರತಾಗಿಲ್ಲ . ಈ ಟೂರ್ನಿಯಲ್ಲಿ ಆಡಿದ್ದ ಕರ್ನಾಟಕದ ಮಹೋನ್ನತ ಕ್ರಿಕೆಟ್ ಆಟಗಾರ ಬೃಜೇಶ್ ಪಟೇಲ್ ಮುಂಬೈಯ ಕ್ರಿಕೆಟ್ ಟೂರ್ನಿಯಲ್ಲಿ ಆಡಿ ಕ್ರಿಕೆಟ್ ಬದುಕು ಸಂಪೂರ್ಣಗೊಳಿಸುವಂತೆ ತನಗೆ ಸಲಹೆ ನೀಡಿದ್ದರು ಎಂದು ದ್ರಾವಿಡ್ ಹೇಳಿದರು. ಕ್ರಿಕೆಟ್ ಆಟಗಾರನಿಗೆ ಪ್ರತಿಭೆ, ದೃಢಸಂಕಲ್ಪದ ಜೊತೆಗೆ ನಿಯತ್ತು, ನಿಷ್ಠೆಯೂ ಅತ್ಯಗತ್ಯ. ತಂಡದಲ್ಲಿ ಸ್ಥಾನ ಕಲ್ಪಿಸಿದ ಸಂಸ್ಥೆಗಳಿಗೆ ನಿಷ್ಠೆ ಪ್ರದರ್ಶಿಸಿ ಅತ್ಯುತ್ತಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ಯುವ ಆಟಗಾರರಿಗೆ ಕಿವಿ ಮಾತು ಹೇಳಿದರು. ನಿಮ್ಮಲ್ಲಿ ಪ್ರತಿಯೊಬ್ಬರೂ ರಣಜಿ ಕ್ರಿಕೆಟ್ ಅಥವಾ ಭಾರತ ತಂಡ ಅಥವಾ ಐಪಿಎಲ್‌ನಲ್ಲಿ ಆಡುವ ಅವಕಾಶ ಪಡೆಯುತ್ತೀರಿ ಎನ್ನಲಾಗದು. ಆದರೆ ಕ್ರಿಕೆಟ್ ಅನ್ನು ಆನಂದಿಸಿದರೆ ಯಶಸ್ಸು ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಆಯ್ಕೆಯಾಗುತ್ತೇನೋ ಇಲ್ಲವೇ ಎಂಬ ಬಗ್ಗೆಯೇ ಚಿಂತಿಸಿದರೆ ನಿಮಗೆ ಆಟವನ್ನು ಆನಂದಿಸಲು ಸಾಧ್ಯವಾಗದು ಎಂದು ದ್ರಾವಿಡ್ ಹೇಳಿದರು. ಟೈಮ್ಸ್ ಶೀಲ್ಡ್ ಎ ಡಿವಿಷನ್ ಟೂರ್ನಿಯಲ್ಲಿ ಡಿವೈ ಪಾಟೀಲ್ ಗ್ರೂಪ್ ‘ಎ’ ತಂಡ ಪ್ರಶಸ್ತಿ ಗಳಿಸಿದೆ. ಬಿಸಿಸಿಐಯ ಮಾಜಿ ಮುಖ್ಯ ವ್ಯವಸ್ಥಾಪಕ ಅಧಿಕಾರಿ ಪ್ರೊ ರತ್ನಾಕರ ಶೆಟ್ಟಿ, ಎಂಸಿಎ ಜಂಟಿ ಕಾರ್ಯದರ್ಶಿ ಉಮೇಶ್ ಖಾನ್ವಿಳ್ಕರ್, ಎಂಸಿಎ ಸಿಇಒ ಸಿಎಸ್ ನಾಕ್, ಟೈಮ್ಸ್ ಕ್ರಿಕೆಟ್ ಶೀಲ್ಡ್‌ನ ಅಧ್ಯಕ್ಷ ರೋಹಿತ್ ಗೋಪಕುಮಾರ್, ಗೌರವ ಕಾರ್ಯದರ್ಶಿ ಆರ್ ವೆಂಕಟಕೇಶವನ್ ಮತ್ತಿತರರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X