Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಮಿತ್, ಕೊಹ್ಲಿ ದಾಖಲೆ ಮುರಿದ ನೇಪಾಳದ...

ಸ್ಮಿತ್, ಕೊಹ್ಲಿ ದಾಖಲೆ ಮುರಿದ ನೇಪಾಳದ ನಾಯಕ ಪಾರಸ್ ಖಡ್ಕಾ

ವಾರ್ತಾಭಾರತಿವಾರ್ತಾಭಾರತಿ29 Sept 2019 11:33 AM IST
share
ಸ್ಮಿತ್, ಕೊಹ್ಲಿ ದಾಖಲೆ ಮುರಿದ ನೇಪಾಳದ ನಾಯಕ ಪಾರಸ್ ಖಡ್ಕಾ

ಸಿಂಗಾಪುರ, ಸೆ.29: ನೇಪಾಳ ನಾಯಕ ಪಾರಸ್ ಖಡ್ಕಾ ಅವರು ಸಿಂಗಾಪುರ ವಿರುದ್ಧ ಟ್ವೆಂಟಿ-20 ಪಂದ್ಯದಲ್ಲಿ ಚೊಚ್ಚಲ ವೇಗದ ಶತಕ ದಾಖಲಿಸುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯದ ಮಾಜಿ ನಾಯಕ ಸ್ಟೀವ್ ಸ್ಮಿತ್ ದಾಖಲೆ ಮುರಿದಿದ್ದಾರೆ. 

ಶನಿವಾರ ಸಿಂಗಾಪುರದ ಇಂಡಿಯನ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾರಸ್ ಔಟಾಗದೆ 106ರನ್ (52ಎ, 7ಬೌ,9ಸಿ) ಗಳಿಸಿದರು. ಅವರ ಶತಕದ ನೆರವಿನಲ್ಲಿ ನೇಪಾಳ ತಂಡ ಸಿಂಗಾಪುರ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಪಾರಸ್ ನೇಪಾಲದ ಪರ ಶತಕ ದಾಖಲಿಸಿದ ಮೊದಲ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಸವಾಲನ್ನು ಬೆನ್ನಟ್ಟುವ ವೇಳೆ ಶತಕ ದಾಖಲಿಸಿದ ಮೊದಲ ನಾಯಕ ಎಂಬ ದಾಖಲೆ ಬರೆದಿದ್ದಾರೆ. ಪಾರಸ್ ಖಡ್ಕಾ 49 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು.

ಏಶ್ಯದ ಬ್ಯಾಟ್ಸ್ ಮನ್ ಗಳ ಪೈಕಿ ಪಾರಸ್ ವೇಗದ ಶತಕ ದಾಖಲಿಸಿದ ನಾಲ್ಕನೇ ಬ್ಯಾಟ್ಸ್ ಮನ್ ಎಂಬ ಖ್ಯಾತಿ ಗಳಿಸಿದ್ದಾರೆ. ಮೂರು ರಾಷ್ಟ್ರಗಳ ತ್ರಿಕೋನ ಸರಣಿಯ ರಡನೇ ಪಂದ್ಯದಲ್ಲಿ ಗೆಲುವಿಗೆ ಸಿಂಗಾಪುರ ವಿರುದ್ಧ 152 ರನ್ ಗಳ ಸವಾಲನ್ನು ಪಡೆದ ನೇಪಾಳ ತಂಡ ನ್ನೂ 24 ಎಸೆತಗಳು ಬಾಕಿ ಇರುವಾಗಲೇ ನೇಪಾಳ ಗೆಲುವಿನ ದಡ ತಲುಪಿತು.

ಸರಣಿಯಲ್ಲಿ ನೇಪಾಳ ಮೊದಲ ಜಯ ಗಳಿಸಿದೆ. ಮೊದಲ ಪಂದ್ಯದಲ್ಲಿ ಝಿಂಬಾಬ್ವೆ ವಿರುದ್ಧ ಸೋಲು ಅನುಭವಿಸಿತ್ತು.

ಪಾರಸ್ ಜೊತೆ ಇನಿಂಗ್ಸ್ ಆರಂಭಿಸಿದ ನೇಪಾಳದ ಆರಂಭಿಕ ದಾಂಡಿಗ ಇಶಾನ್ ಪಾಂಡೆ ಕೇವಲ 5 ರನ್ ಗಳಿಸಿ ಜಾನಕ್ ಪ್ರಕಾಶ್ ಎಸೆತದಲ್ಲಿ ಎಲ್ ಬಿಡಬ್ಲ್ಯು ಬಲೆಗೆ ಬೀಳಿಸಿದರು. ಬಳಿಕ ಆರಿಫ್ ಶೇಖ್ ಪಾರಸ್ ಗೆ ಜೊತೆಯಾದರು. ಇವರು ಮುರಿಯದ ಜೊತೆಯಾಟದಲ್ಲಿ 145 ರನ್ ಸೇರಿಸಿದರು.ಆರಿಫ್ ಔಟಾಗದೆ 39 ರನ್ ಸೇರಿಸಿದರು, ಆದರೆ ಪಾರಸ್ 52 ಎಸೆತಗಳಲ್ಲಿ 7 ಬೌಂಡರಿ ಮತ್ತು 9 ಸಿಕ್ಸರ್ ಗಳಿಸಿದರು.

ಇದಕ್ಕೂ ಮೊದಲು ಸಿಂಗಾಪುರ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 151 ರನ್ ಗಳಿಸಿತ್ತು. ರೋಹನ್ ರಂಗರಾಜನ್ 6ರನ್, ಸುರೆಂದ್ರನ್ ಚಂದ್ರಮೋಹನ್ 35ರನ್ , ನಾಯಕ ಟಿಮ್ ಡಾವಿಡ್ ಔಟಾಗದೆ 64 ರನ್ , ವಿಕೆಟ್ ಕೀಪರ್ ಮನ್ ಪ್ರೀತ್ ಸಿಂಗ್ 15ಮತ್ತು ಜಾನಕ್ ಪ್ರಕಾಶ್ ಔಟಾಗದೆ 35 ರನ್ ಗಳಿಸಿದರು. ನೇಪಾಳದ ಕೆ.ಸಿ. ಕರಣ್ 34ಕ್ಕೆ 2 ಮತ್ತು ಸುಶಾನ್ ಭಾರಿ 27ಕ್ಕೆ 1 ವಿಕೆಟ್ ಪಡೆದರು.

ಖಡ್ಕಾ ದಾಖಲೆ: ಹನ್ನೆರಡು ದಿನ್ಳ ಹಿಂದೆ ನೆದರ್ ಲೆಂಡ್ ನ ನಾಯಕ ಪೀಟರ್ ಸೇಲಾರ್ ಸ್ಕಾಟ್ ಲ್ಯಾಂಡ್ ವಿರುದ್ಧ ಔಟಾಗದೆ 96 ರನ್ ಗಳಿಸಿದ್ದರು. ಆಸ್ಟ್ರೇಲಿಯದ ಸ್ಟೀವ್ ಸ್ಮಿತ್ ಇಂಗ್ಲೆಂಡ್ ವಿರುದ್ಧ 90 ರನ್ ಮತ್ತು ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ ಆಸ್ಟ್ರೇಲಿಯ ವಿರುದ್ಧ 88 ರನ್ ಗಳಿಸಿದ್ದರು. ಇವರ ದಾಖಲೆಯನ್ನು ಪಾರಸ್ ಮುರಿದಿದ್ದಾರೆ.

2017ರಲ್ಲಿ ಚೇಸಿಂಗ್ ನಲ್ಲಿ ಶ್ರೀಲಂಕಾದ ವಿರುದ್ಧ 86 ರನ್ ಗಳಿಸಿದ್ದರು. ಪಾರಸ್ ನೇಪಾಲ ತಂಡದ ಪರ ಏಕದಿನ ಕ್ರಿಕೆಟ್ ನಲ್ಲಿ ಶತಕ ದಾಖಲಿಸಿದ ನೇಪಾಳದ ಮೊದಲ ಬ್ಯಾಟ್ಸ್ ಮನ್. ಕಳೆದ ತಿಂಗಳು ಅವರು ಮಲೇಶ್ಯ ವಿರುದ್ಧ ಅಜೇಯ 86 ರನ್ ಸಿಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X