Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ಲಾಸ್ಟಿಕ್ ಹೂಗಳ ಆಮದು ನಿಷೇಧಕ್ಕೆ...

ಪ್ಲಾಸ್ಟಿಕ್ ಹೂಗಳ ಆಮದು ನಿಷೇಧಕ್ಕೆ ಆಗ್ರಹಿಸಿ ಬೆಳೆಗಾರರ ಪ್ರತಿಭಟನೆ

10 ಲಕ್ಷ ರೂ. ಮೌಲ್ಯದ ಹೂಗಳ ಉಚಿತ ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ29 Sept 2019 10:36 PM IST
share
ಪ್ಲಾಸ್ಟಿಕ್ ಹೂಗಳ ಆಮದು ನಿಷೇಧಕ್ಕೆ ಆಗ್ರಹಿಸಿ ಬೆಳೆಗಾರರ ಪ್ರತಿಭಟನೆ

ಬೆಂಗಳೂರು ಸೆ.29: ಚೈನಾದಿಂದ ಪ್ಲಾಸ್ಟಿಕ್ ಹೂಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಬೇಕು ಹಾಗೂ ಹೂ ಮಾರಾಟಕ್ಕೆ ಸೂಕ್ತ ಮಾರುಕಟ್ಟೆಯನ್ನು ನಿರ್ಮಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಚೈನಾ ಪ್ಲಾಸ್ಟಿಕ್ ಹೂಗಳ ಬಳಕೆ ರಾಜ್ಯದ ಹೂ ಬೆಳೆಗಾರರನ್ನು ದಿನನಿತ್ಯದ ಜೀವನವನ್ನು ತೊಂದರೆಗೆ ತಳ್ಳಿದೆ. ಹೀಗಾಗಿ, ಅವುಗಳನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ನೂರಾರು ಬೆಳೆಗಾರರಿಂದು ನಗರದ ಲಾಲ್‌ಬಾಗ್ ಮುಂಭಾಗ ಪ್ರತಿಭಟನೆ ನಡೆಸಿ ಆಗ್ರಹಪಡಿಸಿದರು.

ಸುಮಾರು 10 ಲಕ್ಷ ಮೌಲ್ಯದ ಹೂಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಹಂಚುವ ಮೂಲಕ ಜನರಲ್ಲಿ ಪ್ಲಾಸ್ಟಿಕ್ ಹೂಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಟುರಿಣಾಮಗಳು ಹಾಗೂ ರೈತರಿಗೆ ಆಗುವ ಅನ್ಯಾಯವನ್ನು ಅರಿವು ಮೂಡಿಸಲುವ ಪ್ರಯತ್ನ ಮಾಡಿದರು.

ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಹೂ ಬೆಳೆಗಾರರು ಸುಮಾರು 5850 ಏಕರೆಯಷ್ಟು ಪಾಲಿಹೌಸ್‌ಗಳ ಮೂಲಕ ಗುಲಾಬಿ, ಗೆರ್ಬೆರಾ, ಕಾರ್ನೇಷನ್ಸ್, ಕ್ರೈಸಾಂಥಿಮಮ್, ಸ್ಪ್ರೇ ರೋಸಸ್ ಸೇರಿದಂತೆ 25 ಕ್ಕೂ ಅಧಿಕ ಬಗೆಯ ಹೂಗಳನ್ನು ಬೆಳೆಯುತ್ತಿದ್ದಾರೆ. ಇದರಿಂದ ನೇರ ಹಾಗೂ ಪರೋಕ್ಷವಾಗಿ 11 ಲಕ್ಷ ಜನರ ಜೀವನ ಇದರ ಮೇಲೆ ಅವಲಂಬಿತವಾಗಿದೆ. ಅಲ್ಲದೆ, ರಾಜ್ಯದಲ್ಲಿ 2.8 ಲಕ್ಷ ಎಕರೆ ಪ್ರದೇಶದಲ್ಲಿ ಕಾಕಡ, ಮಲ್ಲಿಗೆ, ಸಂಪಂಗಿ, ಕನಕಾಂಬರ ಸೇರಿದಂತೆ 40 ಬಗೆಯ ಹೂಗಳನ್ನು ಬೆಳೆಯಲಾಗುತ್ತದೆ. ಇದರ ಮೇಲೆ ಅವಲಂಬಿತರಾಗಿರುವ ಜನರ ಸಂಖ್ಯೆ 52 ಲಕ್ಷದಷ್ಟಿದೆ. ಇದೀಗ ಪ್ಲಾಸ್ಟಿಕ್ ಹೂಗಳ ಆಮದಿನಿಂದ ಇವರ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಚೈನಾದಿಂದ ಆಮದಾಗುತ್ತಿರುವ ಕೃತಕ ಪ್ಲಾಸ್ಟಿಕ್ ಹೂಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು 2019 ಸೇ ಸಾಲಿನಲ್ಲಿ ಶೇ.92 ರಷ್ಟಿದೆ. ಹೀಗೆ ಮುಂದುವರಿದರೆ, 2022 ವೇಳೆಗೆ ಈ ಪ್ರಮಾಣ ಶೇ.250ಕ್ಕೆ ತಲುಪಲಿದ್ದು, ಹೂಗಳ ಮಾರಾಟ ಬೆಲೆಯಲ್ಲಿ ಶೇ.55 ರಷ್ಟು ಕುಸಿತವಾಗಲಿದೆ. ಇದರಿಂದ ಹೂ ಬೆಳೆಯುವ ರಾಜ್ಯಗಳಲ್ಲಿ ಬೆಳೆಗಾರರಿಗೆ ಭಾರಿ ಪ್ರಮಾಣದ ಪೆಟ್ಟು ಬೀಳಲಿದೆ ಎಂದು ಅವರು ವಿವರಿಸಿದರು.

ಪರಿಸರಕ್ಕೆ ಹಾನಿ: ಪ್ಲಾಸ್ಟಿಕ್ ಬಳಸಿ ತಯಾರಿಸಿರುವ ಕೃತಕ ಹೂಗಳು ಸುಲಭವಾಗಿ ಕೊಳೆಯುವಂತಹವಲ್ಲ. ಕಾಲಕ್ರಮೇಣ ಭೂಮಿಗೆ ಹಾಗೂ ನೀರಿಗೆ ಸೇರಿ ಪರಿಸರವನ್ನು ಹಾಳುಗೆಡವುತ್ತವೆ.

ಮಾನಸಿಕ ದುಷ್ಪರಿಣಾಮ: ನೈಸರ್ಗಿಕ ಹೂಗಳಿಂದ ಬರುವ ವಾಸನೆಯನ್ನು ಯಾರು ನಕಲು ಮಾಡಲಿಕ್ಕಾಗುವುದಿಲ್ಲ. ಈ ಕೃತಕ ಹೂಗಳಲ್ಲಿ ಆ ಅಂಶಗಳಿಲ್ಲದೆ ಹೂಗಳು ನೀಡುವ ಸಾಂತ್ವಾನ ಹಾಗೂ ಒತ್ತಡ ನಿವಾರಣೆಯ ಪರಿಣಾಮ ಸಿಗುವುದಿಲ್ಲ. ಪ್ರತಿವರ್ಷ ಹಬ್ಬಗಳಲ್ಲಿ, ಮದುವೆ ಹಾಗೂ ಇನ್ನಿತರೆ ಸಮಾರಂಭಗಳಲ್ಲಿ ಕೃತಕ ಹೂಗಳ ಬಳಕೆ ಹೆಚ್ಚಾಗುತ್ತಿದ್ದು, ನೈಸರ್ಗಿಕ ಹೂಗಳನ್ನು ಕೊಳ್ಳುವರಿಲ್ಲದಂತಾಗಿದೆ. ಇದೇ ರೀತಿಯ ಬಳಕೆ ಹೆಚ್ಚಾದಲ್ಲಿ ನೈಸರ್ಗಿಕ ಹೂಗಳ ಬಳಕೆ ಸಂಪೂರ್ಣ ಕಡಿಮೆಯಾಗಲಿದ್ದು ಹೂ ಬೆಳೆಗಾರರು ಸಂಕಷ್ಟಕ್ಕೀಡಾಗುವ ಪರಿಸ್ಥಿತಿ ಎದುರಾಗಲಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನಗರದ ಲಾಲ್‌ಬಾಗ್‌ನ ಎಲ್ಲ ದ್ವಾರಗಳಲ್ಲಿ ವಿವಿಧ ಕಡೆಗಳಿಂದ ಆಗಮಿಸಿದ್ದ ಹೂ ಬೆಳೆಗಾರರು ಜಮಾಯಿಸಿ, ತಾವು ಬೆಳೆದ ಹೂಗಳನ್ನು ಉದ್ಯಾನವನಕ್ಕೆ ಆಗಮಿಸುವ ಸಾರ್ವಜನಿಕರಿಗೆ ನೀಡುವ ಮೂಲಕ ಕೃತಕ ಹೂಗಳು ಬಳಸದಂತೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X