Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ವರ್ಷ ಶಾಲಾ ಪ್ರಾರಂಭಲ್ಲೇ...

ಮುಂದಿನ ವರ್ಷ ಶಾಲಾ ಪ್ರಾರಂಭಲ್ಲೇ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸೈಕಲ್ ಒದಗಿಸುವ ಗುರಿ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Sept 2019 10:39 PM IST
share
ಮುಂದಿನ ವರ್ಷ ಶಾಲಾ ಪ್ರಾರಂಭಲ್ಲೇ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸೈಕಲ್ ಒದಗಿಸುವ ಗುರಿ: ಸಚಿವ ಸುರೇಶ್ ಕುಮಾರ್

ಬಂಟ್ವಾಳ, ಸೆ. 30: ಮುಂದಿನ ವರ್ಷ ಶಾಲಾ ಪ್ರಾರಂಭದ ದಿನಗಳಲ್ಲೇ ಎಲ್ಲ ಮಕ್ಕಳಿಗೂ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸೈಕಲ್ ಒದಗಿಸುವುದು ಸರಕಾರದ ಗುರಿಯಾಗಿದ್ದು, ಈ ಕಾರ್ಯ ಪ್ರಕ್ರಿಯೆಯಲ್ಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಅವರು ಸೋಮವಾರ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್‍ನ ದತ್ತು ಯೋಜನೆಯಡಿ ನಿರ್ಮಾಣಗೊಂಡ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪ್ರಗತಿಯನ್ನು ವೀಕ್ಷಿಸಿ, ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಡ್ಡಲಕಾಡಿಗೆ ಪ್ರೌಢಶಾಲಾ ಮಂಜೂರು

ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್, ಶಾಲೆಯ ಎಲ್ಲ ಮಕ್ಕಳಿಗೂ ಪಠ್ಯಪುಸ್ತಕವನ್ನು ಸಕಾಲದಲ್ಲಿ ಒದಗಿಸುವಂತೆ ಹಾಗೂ ಹೈಸ್ಕೂಲ್ ಮಂಜೂರು ಮಾಡುವಂತೆ ಕೋರಿದರು.

ದಡ್ಡಲಕಾಡು ಶಾಲೆ ರಾಜ್ಯಕ್ಕೇ ಮಾದರಿಯಾಗಿದ್ದು, ಪೋಷಕರು, ಗ್ರಾಮಸ್ಥರು ನಮ್ಮ ಶಾಲೆ ಎಂದು ಭಾವಿಸಿ ಒಂದಾದರೆ ಸರಕಾರಿ ಶಾಲೆಗಳು ಪ್ರಗತಿಯಾಗುತ್ತದೆ ಎಂದವರು, ಇಲಾಖೆಯಿಂದ ಮಾಹಿತಿ ಸಂಗ್ರಹಿಸಿ ಆಧ್ಯತೆ ಮೇರೆಗೆ ದಡ್ಡಲಕಾಡಿಗೆ ಪ್ರೌಢಶಾಲಾ ಮಂಜೂರು ಮಾಡುವು ದಾಗಿ ಈ ಸಂದರ್ಭ ಸಚಿವರು ಘೋಷಿಸಿದರು.

ಪಠ್ಯ ಪುಸ್ತಕ ಪೂರೈಕೆ ವಿಳಂಬವಾಗುತ್ತಿದ್ದು, ಮುಂದಿನ ವರ್ಷ ಶಾಲಾ ಪ್ರಾರಂಭದ ದಿನಗಳಲ್ಲೇ ಎಲ್ಲ ಮಕ್ಕಳಿಗೂ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸೈಕಲ್ ಒದಗಿಸಲಾಗುವುದು ಭರವಸೆ ನೀಡಿದರು.

ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್, ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ, ತಾಪಂ ಸದಸ್ಯ ಪ್ರಭಾಕರ ಪ್ರಭು, ತಹಸೀಲ್ದಾರ್ ರಶ್ಮಿ ಎಸ್.ಆರ್, ಗ್ರಾಪಂ ಅಧ್ಯಕ್ಷೆ ಸುಮಿತ್ರಾ ಯೋಗೀಶ್, ಪ್ರಭಾರ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಜ್ಞಾನೇಶ್, ಟಿಸಿಎಚ್ ಪ್ರಿನ್ಸಿಪಾಲ್ ಮತ್ತು ಸಹನಿರ್ದೇಶಕಿ ಶಾರದಾ, ಜಿಲ್ಲಾ ಅಕ್ಷರ ದಾಸೋಹ ನಿರ್ದೇಶಕಿ ರಾಜಲಕ್ಷ್ಮೀ, ಕ್ಷೇತ್ರ ಸಂಪನ್ಮೂಲ ಕೇಂದ್ರ ಅಧಿಕಾರಿ ರಾಧಾಕೃಷ್ಣ ಭಟ್, ಅಕ್ಷರ ದಾಸೋಹದ ನೋಡಲ್ ಅಧಿಕಾರಿ ನೋಣಯ್ಯ, ಎಸ್‍ಡಿಎಂಸಿ ಅಧ್ಯಕ್ಷ ರಾಮಚಂದ್ರ ಕರೆಂಕಿ, ಬಿಇಒ ಲೋಕೇಶ್, ಗ್ರಾಪಂ ಸದಸ್ಯರಾದ ಪೂವಪ್ಪ ಮೆಂಡನ್, ರಾಜಶ್ರೀ, ಸಂಜೀವ ಮೆಂಡನ್, ಸ್ಥಳೀಯ ನಾಯಕಿ ಸುಲೋಚನಾ ಭಟ್ ಹಾಜರಿದ್ದರು.

ಸಹಶಿಕ್ಷಕಿ ಹಿಲ್ಡಾ ಫರ್ನಾಂಡೀಸ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜ ವಂದಿಸಿದರು. ಇದೇ ವೇಳೆ ಶಾಲೆಯಲ್ಲಿ ಮಕ್ಕಳೊಂದಿಗೆ ಬೆರೆತ ಸಚಿವರು, ಅವರ ಆಟಪಾಠಗಳ ಕುರಿತು ಪ್ರಶ್ನೆ ಕೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X