Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ರೈಫಲ್‌ನ ಪೂರ್ಣ ನಿಯಂತ್ರಣ...

ಅಸ್ಸಾಂ ರೈಫಲ್‌ನ ಪೂರ್ಣ ನಿಯಂತ್ರಣ ಪಡೆಯುವ ಕೇಂದ್ರದ ಪ್ರಸ್ತಾವಕ್ಕೆ ಸೇನೆಯ ವಿರೋಧ

“ರಾಷ್ಟ್ರೀಯ ಭದ್ರತೆ ಮೇಲೆ ಗಂಭೀರ ಪರಿಣಾಮ”

ವಾರ್ತಾಭಾರತಿವಾರ್ತಾಭಾರತಿ30 Sept 2019 11:07 PM IST
share
ಅಸ್ಸಾಂ ರೈಫಲ್‌ನ ಪೂರ್ಣ ನಿಯಂತ್ರಣ ಪಡೆಯುವ ಕೇಂದ್ರದ ಪ್ರಸ್ತಾವಕ್ಕೆ ಸೇನೆಯ ವಿರೋಧ

ಹೊಸದಿಲ್ಲಿ, ಸೆ.30: ಅಸ್ಸಾಂ ರೈಫಲ್‌ನ ಕಾರ್ಯಾಚರಣಾತ್ಮಕ ನಿಯಂತ್ರಣವನ್ನು ಕೈಗೆ ಪಡೆಯುವ ಕೇಂದ್ರದ ಗೃಹ ಸಚಿವಾಲಯದ ಪ್ರಸ್ತಾವಕ್ಕೆ ಸೇನಾಪಡೆ ವಿರೋಧ ಸೂಚಿಸಿದ್ದು ಇದರಿಂದ , ಚೀನಾದೊಂದಿಗಿನ ವಿವಾದಾತ್ಮಕ ಗಡಿಭಾಗದಲ್ಲಿ ನಿಗಾ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮದ ಸಹಿತ ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ಗೃಹ ಸಚಿವಾಲಯದ ಈ ನಡೆಗೆ ತೀವ್ರ ವಿರೋಧ ಸೂಚಿಸಿರುವ ಸೇನೆಯು, ಅದರ ಬದಲು ಪೂರ್ವ ವಲಯದಲ್ಲಿ ಚೀನಾದ ಅತಿಕ್ರಮಣ ಪ್ರಯತ್ನವನ್ನು ಸೂಕ್ತವಾಗಿ ನಿಭಾಯಿಸಲು ಸಂಪೂರ್ಣ ಚೀನಾ-ಭಾರತ ಗಡಿ ಭಾಗದ ನಿಗಾ ಹೊಣೆಯನ್ನು ಸೇನೆಗೆ ವಹಿಸಿಕೊಡುವಂತೆ ಒತ್ತಾಯಿಸಿದೆ.

ಗೃಹ ಸಚಿವಾಲಯದ ಪ್ರಸ್ತಾವವನ್ನು ಗಂಭೀರವಾಗಿ ಪರಿಗಣಿಸಿರುವ ಸೇನೆಯು ಈ ವಿಷಯವನ್ನು ರಕ್ಷಣಾ ಸಚಿವಾಲಯದ ಗಮನಕ್ಕೆ ತಂದಿದ್ದು, ತಕ್ಷಣ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗ ಅರೆಸೇನಾ ಪಡೆ ಅಸ್ಸಾಂ ರೈಫಲ್ಸ್‌ನ ಆಡಳಿತಾತ್ಮಕ ಅಧಿಕಾರ ಗೃಹ ಸಚಿವಾಲಯದ ಕೈಯಲ್ಲಿದ್ದರೆ ಕಾರ್ಯಾಚರಣಾತ್ಮಕ ನಿಯಂತ್ರಣ ಸೇನೆಯ ಕೈಯಲ್ಲಿದೆ. ಅಸ್ಸಾಂ ರೈಫಲ್ಸ್ ಅನ್ನು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯೊಂದಿಗೆ ವಿಲೀನಗೊಳಿಸುವ ಪ್ರಸ್ತಾವದ ಬಗ್ಗೆ ಪ್ರಧಾನಿ ನೇತೃತ್ವದ ಭದ್ರತೆಗಾಗಿನ ಸಂಪುಟ ಸಮಿತಿ ಶೀಘ್ರದಲ್ಲೇ ಚರ್ಚಿಸುವ ನಿರೀಕ್ಷೆಯಿದೆ. ಅಸ್ಸಾಂ ರೈಫಲ್ಸ್‌ನ ನಿಯಂತ್ರಣವನ್ನು ಗೃಹ ಸಚಿವಾಲಯದ ಕೈಗಿತ್ತರೆ ಭಾರತ-ಚೀನಾ ಗಡಿಭಾಗದಲ್ಲಿ ಗಸ್ತು ವ್ಯವಸ್ಥೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಉನ್ನತ ಸೇನಾಧಿಕಾರಿ ಹೇಳಿದ್ದು, ಈ ವಿಷಯವನ್ನು ಈಗಾಗಲೇ ರಕ್ಷಣೆ ಮತ್ತು ಭದ್ರತೆ ವಿಭಾಗಕ್ಕೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುಮಾರು 55,000 ಸಿಬ್ಬಂದಿ ಬಲ ಹೊಂದಿರುವ ಅಸ್ಸಾಂ ರೈಫಲ್ಸ್ ಮ್ಯಾನ್ಮಾರ್ -ಭಾರತ ನಡುವಿನ 1,640 ಕಿ.ಮೀ ವ್ಯಾಪ್ತಿಯ ಗಡಿಭಾಗದಲ್ಲಿ ಗಸ್ತು ತಿರುಗುವ ಜೊತೆಗೆ ಚೀನಾ-ಭಾರತ ನಡುವಿನ ಸೂಕ್ಷ್ಮ ಗಡಿಭಾಗದಲ್ಲಿ ನಿಗಾ ವಹಿಸುವ ಕಾರ್ಯದಲ್ಲಿ ಸೇನೆಗೆ ಕಾರ್ಯಾಚರಣಾತ್ಮಕ ಹಾಗೂ ವ್ಯೂಹಾತ್ಮಕ ಸಹಾಯ ನೀಡುತ್ತಿದೆ. 1835ರಲ್ಲಿ ಸ್ಥಾಪನೆಗೊಂಡ ಅಸ್ಸಾಂ ರೈಫಲ್ಸ್ ಈಶಾನ್ಯ ಭಾಗದ ತೀವ್ರವಾದಿಪೀಡಿತ ರಾಜ್ಯಗಳಲ್ಲೂ ಬಂಡುಕೋರನಿಗ್ರಹ ಕಾರ್ಯಾಚರಣೆಯನ್ನು ನಡೆಸುತ್ತವೆ.

ಅಸ್ಸಾಂ ರೈಫಲ್ಸ್‌ನ ಸಂಪೂರ್ಣ ನಿಯಂತ್ರಣವನ್ನು ಕೋರಿ ಸಿಸಿಎಸ್‌ಗೆ ಸಲ್ಲಿಸಲು ಕರಡು ಪ್ರತಿಯನ್ನು ಗೃಹ ಸಚಿವಾಲಯ ಈಗಾಗಲೇ ಕರಡು ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ. ಅಸ್ಸಾಂ ರೈಫಲ್ಸ್ ಸೇನಾ ವಿಭಾಗವನ್ನು ಸ್ಥಿರ ರಕ್ಷಣಾ ಪಾತ್ರದಿಂದ ಮುಕ್ತಗೊಳಿಸುವ ಮೂಲಕ ಚೀನಾಗೆ ತಾಗಿಕೊಂಡಿರುವ ಗಡಿಯಲ್ಲಿ ಸೇನೆಗೆ ಮಹತ್ವದ ನೆರವು ನೀಡುತ್ತದೆ ಎಂದು ಸೇನೆ ತಿಳಿಸಿದೆ. ಎಲ್ಲಕ್ಕೂ ಮಿಗಿಲಾಗಿ, ಅಸ್ಸಾಂ ರೈಫಲ್ಸ್‌ನ 70-80ಶೇ. ಸಿಬ್ಬಂದಿ ಸಾಂಪ್ರದಾಯಿಕ ಸೈನಿಕ ಕರ್ತವ್ಯದಲ್ಲಿ ನಿಯೋಜನೆಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X