Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಭಾರತದ...

ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಭಾರತದ ಟೆನಿಸ್ ಪಟು ಸುಮಿತ್ ನಗಾಲ್

ವಾರ್ತಾಭಾರತಿವಾರ್ತಾಭಾರತಿ30 Sept 2019 11:22 PM IST
share
ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಭಾರತದ ಟೆನಿಸ್ ಪಟು ಸುಮಿತ್ ನಗಾಲ್

ಹೊಸದಿಲ್ಲಿ, ಸೆ.30: ಇತ್ತೀಚೆಗೆ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸುಮಿತ್ ನಗಾಲ್ ಅವರು ಪ್ರಜ್ಞೇಶ್ ಗುಣೇಶ್ವರನ್ ಬಳಿಕ ಭಾರತದ 2ನೇ ರ್ಯಾಂಕಿನ ಸಿಂಗಲ್ಸ್ ಟೆನಿಸ್ ಆಟಗಾರನಾಗಿದ್ದಾರೆ. ಅಮೆರಿಕ ಓಪನ್‌ನಲ್ಲಿ ಟೆನಿಸ್ ದಿಗ್ಗಜ ರೋಜರ್ ಫೆಡರರ್‌ರನ್ನು ಎದುರಿಸಿದ್ದ ನಗಾಲ್ ಬಂಜಾ ಲುಕಾದಲ್ಲಿ ಎಟಿಪಿ ಚಾಲೆಂಜರ್‌ನಲ್ಲಿ ಎರಡನೇ ಸ್ಥಾನ ಪಡೆದಿದ್ದರು. ಬ್ಯುನಸ್‌ಐರಿಸ್‌ನಲ್ಲಿ ಎಟಿಪಿ ಚಾಲೆಂಜರ್ ಪ್ರಶಸ್ತಿ ಜಯಿಸಿದ್ದರು. ಬ್ಯುನಸ್‌ಐರಿಸ್‌ನಲ್ಲಿ ಪ್ರಶಸ್ತಿ ಜಯಿಸಿದ್ದರೂ ಅವರ ಕೋಚ್ ಹಾಗೂ ಫಿಸಿಯೋ ಹಣದ ಸಮಸ್ಯೆ ಎದುರಿಸಿದ್ದರು.

 ‘‘ನಾನಿಲ್ಲಿ ಏಕಾಂಗಿಯಾಗಿದ್ದೇನೆ. ನನಗೆ ಯಾರೂ ನೆರವು ನೀಡುವವರಿಲ್ಲ. ನಾನು ಉತ್ತಮ ಟೆನಿಸ್ ಆಡುತ್ತೇನೆಂಬ ತೃಪ್ತಿಯಿದೆ. ಟೆನಿಸ್ ಆಡುವುದು ಸುಲಭವಲ್ಲ. ನನಗೆ ತುಂಬಾ ಬೇಸರವಾಗಿದೆ. ಯುಎಸ್ ಓಪನ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಹೊರತಾಗಿಯೂ ನನ್ನ ದಾರಿ ಒಂದೇ ಯಾಗಿದೆ. 22ರ ವಯಸ್ಸಿನಲ್ಲಿ ಯು.ಎಸ್ ಓಪನ್‌ಗೆ ಅರ್ಹತೆ ಪಡೆದು ರೋಜರ್ ಫೆಡರರ್ ವಿರುದ್ಧ ಆಡಿದ್ದೇನೆ. ಆದರೆ, ಇದು ಯಾರ ಮೇಲೂ ಪರಿಣಾಮಬೀರಿಲ್ಲ. ಟೆನಿಸ್‌ಗೆ ಯಾರೂ ಮುಂದೆ ಬಂದು ಹೂಡಿಕೆ ಮಾಡದಿರುವುದು ತುಂಬಾ ಬೇಸರ ಉಂಟು ಮಾಡಿದೆ’’ ಎಂದು ಬ್ಯುನಸ್‌ಐರಿಸ್‌ನಿಂದ ಸುದ್ದಿಸಂಸ್ಥೆ ಪಿಟಿಐಗೆ ನಗಾಲ್ ತಿಳಿಸಿದ್ದಾರೆ.

ನಗಾಲ್, ಟಾರ್ಗೆಟ್ ಪೋಡಿಯಂ ಸ್ಕೀಮ್(ಟಾಪ್ಸ್)ನಿಂದ ಆರ್ಥಿಕ ಸಹಾಯ ಪಡೆಯುತ್ತಿದ್ದರು. ಆದರೆ, ಬಳಿಕ ಅವರನ್ನು ಈ ಯೋಜನೆಯಿಂದ ಕೈಬಿಡಲಾಯಿತು. ಟಾಪ್ಸ್ ಯೋಜನೆಯಿಂದ ಪ್ರತಿ ತಿಂಗಳು 50,000 ರೂ. ಆರ್ಥಿಕ ಸಹಾಯ ಸಿಗುತ್ತಿತ್ತು. ಒಲಿಂಪಿಕ್ಸ್ ನಲ್ಲಿ ಪದಕದ ಭರವಸೆ ಮೂಡಿಸಿರುವ ಅಥ್ಲೀಟ್‌ಗಳಿಗೆ ಮಾತ್ರ ಟಾಪ್ ಯೋಜನೆಯ ಲಾಭ ಸಿಗುತ್ತಿದೆ. ಈಗ ಡಬಲ್ಸ್ ಸ್ಪೆಷಲಿಸ್ಟ್ ಗಳಾದ ರೋಹನ್ ಬೋಪಣ್ಣ ಹಾಗೂ ಡಿವಿಜ್ ಶರಣ್ ಟಾಪ್ಸ್ ಯೋಜನೆಯ ಫಲಾನುಭವಿಗಳು. ಭಾರತದ ಯಾವುದೇ ಸಿಂಗಲ್ಸ್ ಆಟಗಾರರು ಈ ಯೋಜನೆಯಲ್ಲಿಲ್ಲ.

► ವ್ಯವಸ್ಥೆಯ ವೈಫಲ್ಯ ಎಂದ ಭೂಪತಿ

ನಗಾಲ್‌ಗೆ ಸಾಕಷ್ಟು ಆರ್ಥಿಕ ಬೆಂಬಲ ಸಿಗದಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಗ್ರಾನ್‌ಸ್ಲಾಮ್ ಚಾಂಪಿಯನ್ ಮಹೇಶ್ ಭೂಪತಿ ಅಭಿಪ್ರಾಯಪಟ್ಟಿದ್ದಾರೆ.

‘‘ಸುಮಿತ್ ಖಂಡಿತ ವಾಗಿಯೂ ಓರ್ವ ವಿಶೇಷ ಪ್ರತಿಭೆ. ಕಳೆದ ಆರು ತಿಂಗಳುಗಳಲ್ಲಿ ತಾನೇನು ಎಂದು ಎಲ್ಲರಿಗೂ ತೋರಿಸಿಕೊಟ್ಟಿದ್ದಾರೆ. ಮುಂಬರುವ ಒಲಿಂಪಿಕ್ಸ್ ನ್ನು ದೃಷ್ಟಿಯಲ್ಲಿಟ್ಟು ಕೊಂಡು ಸುಮಿತ್‌ರನ್ನು ಪೋಷಿಸ ಲಾಗುತ್ತಿಲ್ಲ, ಬೆಂಬಲವನ್ನು ನೀಡಲಾಗುತ್ತಿಲ್ಲ. ಇದನ್ನು ನಾನು ವ್ಯವಸ್ಥೆಯ ವೈಫಲ್ಯ ಎಂದು ಪರಿಗಣಿಸುತ್ತೇನೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಏಕೆ ಚಾಂಪಿಯನ್ ತಂಡವನ್ನು ಸೃಷ್ಟಿಸುತ್ತಿಲ್ಲ ಎಂದು ಪ್ರಶ್ನೆ ಮಾಡುವ ಹಕ್ಕು ಯಾರಿಗೂ ಇಲ್ಲ’’ ಎಂದು ಭೂಪತಿ ಹೇಳಿದರು.

ನಗಾಲ್‌ಗೆ ವಿರಾಟ್ ಕೊಹ್ಲಿ ಪ್ರತಿಷ್ಠಾನದಿಂದ ಆರ್ಥಿಕ ನೆರವು ಲಭಿಸುತ್ತಿದೆ. ಆದರೆ,ಇದು ಅವರಿಗೆ ಸಾಕಾಗುತ್ತಿಲ್ಲ. ನಗಾಲ್‌ಗೆ ವರ್ಷಕ್ಕೆ ಸುಮಾರು 1.5 ಕೋ.ರೂ. ವಾರ್ಷಿಕ ಆಯ-ವ್ಯಯದ ಅಗತ್ಯವಿದೆ. ನಗಾಲ್ ವಿಶ್ವ ರ್ಯಾಂಕಿಂಗ್‌ನಲ್ಲಿ ಅಗ್ರ-100ರ ಸಮೀಪವಿದ್ದರೂ ಅವರಿಗೆ ನಿರೀಕ್ಷಿತ ಪ್ರೋತ್ಸಾಹ ಸಿಗುತ್ತಿಲ್ಲ.

‘‘ನಾನು 2018ರಲ್ಲಿ 350ನೇ ರ್ಯಾಂಕಿನಲ್ಲಿದ್ದಾಗ ಎಷ್ಟು ಬಜೆಟ್ ನನ್ನಲ್ಲಿತ್ತೋ, ಅಷ್ಟೇ ಬಜೆಟ್ ಈಗ ಕೂಡಾ ಇದೆ. ನನಗೆ ಹೆಚ್ಚಿನ ನೆರವಿನ ಅಗತ್ಯವಿದೆ. ಆದರೆ, ಜನರು ಬೆನ್ನು ತಿರುಗಿಸಿಕೊಂಡು ಹೋಗುತ್ತಿದ್ದಾರೆ. ಕೆಲವರು ಕೇವಲ ಭರವಸೆ ನೀಡುತ್ತಾರೆ. ಸಮಯ ಬಂದಾಗ ಮತ್ತೊಂದು ಕಡೆ ನೋಡುತ್ತಾರೆ. ನಾನು ಸಿಲುಕಿಹಾಕಿಕೊಂಡಿದ್ದೇನೆ. ನನಗೆ ಪ್ರವಾಸದ ವೇಳೆ ನೆರವಾಗುವ ಕೋಚ್‌ನ ಅಗತ್ಯವಿದೆ’’ ಎಂದು ನಗಾಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X