Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೀಡಾಪಟುಗಳಿಗೆ ಪಿ.ವಿ.ಸಿಂಧು ಯಶಸ್ಸು...

ಕ್ರೀಡಾಪಟುಗಳಿಗೆ ಪಿ.ವಿ.ಸಿಂಧು ಯಶಸ್ಸು ಸ್ಫೂರ್ತಿಯಾಗಲಿ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ1 Oct 2019 11:59 PM IST
share
ಕ್ರೀಡಾಪಟುಗಳಿಗೆ ಪಿ.ವಿ.ಸಿಂಧು ಯಶಸ್ಸು ಸ್ಫೂರ್ತಿಯಾಗಲಿ: ಮುಖ್ಯಮಂತ್ರಿ ಯಡಿಯೂರಪ್ಪ

ಮೈಸೂರು,ಅ.1: ನಾಡಿನ ಕ್ರೀಡಾಪಟುಗಳು ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರಂತೆ ಪರಿಶ್ರಮದಿಂದ ಯಶಸ್ಸು ಗಳಿಸುವಂತಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಶಿಸಿದರು.

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ದಸರಾ ಕ್ರೀಡಾ ಉಪಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ದಸರಾ ಕ್ರೀಡಾಕೂಟ ಹಾಗೂ ಮುಖ್ಯಮಂತ್ರಿ ಕಪ್ - 2019 ಉದ್ಘಾಟಿಸಿ ಅವರು ಮಾತನಾಡಿದರು.

ನಾಡಿನ ಕ್ರೀಡಾಪಟುಗಳಿಗೆ ಪಿ.ವಿ.ಸಿಂಧು ಅವರ ಯಶಸ್ಸು ಸ್ಫೂರ್ತಿಯಾಗಲಿ. ಪ್ರತಿಯೊಬ್ಬ ಕ್ರೀಡಾಪಟುವಿಗೆ ಪಿ.ವಿ.ಸಿಂಧು ಅವರ ಕ್ರೀಡಾ ಜೀವನ ಮಾದರಿಯಾಗಿದೆ ಎಂದರು.

ಪಿ.ವಿ. ಸಿಂಧು ಅವರ ಯಶಸ್ಸಿನ ನಾಗಾಲೋಟ ಹೀಗೇ ಮುಂದುವರಿಯಲಿ. 2020ರ ಒಲಂಪಿಕ್ ಕ್ರೀಡಾಕೂಟದಲ್ಲಿ ಸಿಂಧು ದೇಶಕ್ಕೆ ಚಿನ್ನದ ಪದಕ ತರುವಂತಾಗಲಿ ಎಂದು ಹಾರೈಸಿದರು.

ದೇಶದೆಲ್ಲೆಡೆ ದಸರಾ ಆಚರಿಸಲಾಗಿತ್ತಿದೆಯಾದರೂ, ಕನ್ನಡ ನಾಡಿನ ಜನರು ದಸರಾ ಹಬ್ಬದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ನಮ್ಮ ನಾಡಹಬ್ಬವು ಸಾಂಸ್ಕೃತಿಕ ಚೌಕಟ್ಟಿನಲ್ಲಿ ಆಚರಿಸಲ್ಪಡುತ್ತಿರುವು ಸಂತಸದ ಸಂಗತಿ ಎಂದರು.

ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಪಿ.ವಿ. ಸಿಂಧು ಮಾತನಾಡಿ, ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯವಿದ್ದು ಎಲ್ಲ ಕ್ರೀಡಾಪಟುಗಳೂ ಕಠಿಣ ಪರಿಶ್ರಮದಲ್ಲಿ ತೊಡಗಿ ಎಂದು ಸಲಹೆ ಮಾಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಥಸಂಚಲನ ನಡೆಸಿದ ಮೈಸೂರು ಕ್ರೀಡಾ ವಸತಿ ನಿಲಯ, ಕಲ್ಬುರ್ಗಿ ವಲಯ, ಬೆಳಗಾವಿ ವಲಯ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ವಲಯ, ಮೈಸೂರು ವಲಯ ಮತ್ತು ಪೊಲೀಸ್ ಬ್ಯಾಂಡ್ ತಂಡದ ಸದಸ್ಯರಿಂದ ಗೌರವ ಧ್ವಜವಂದನೆ ಸ್ವೀಕರಿಸಿದರು. 

ವಿವಿಧ ವಲಯ ತಂಡಗಳ ನಾಯಕರಾದ ಅರವಿಂದ ಮಾಳಗಿ, ಮಮತ ಕೆಲೋಜಿ, ಎನ್.ಕಿರಣ್, ಉಜ್ವಲ್ ನಾಯ್ಡು ಹಾಗೂ ಚೈತ್ರ ದೇವಾಡಿಗ ಅವರು ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿದರು.

ವಸತಿ ಸಚಿವರೂ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತ ಜಗನ್ನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಂ, ಸರ್ಕಾರದ ಅಪರ ಕಾರ್ಯದರ್ಶಿ ಜಿ.ಕಲ್ಪನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಶ್ರೀನಿವಾಸ್, ದಸರಾ ಕ್ರೀಡಾ ಉಪಸಮಿತಿ ಉಪ ವಿಶೇಷಾಧಿಕಾರಿ ಕೆ.ಎಸ್. ಮುರಳಿ, ಅಧ್ಯಕ್ಷ ಎಂ.ಬಿ. ಜಗದೀಶ್, ಉಪಾಧ್ಯಕ್ಷ ಎಚ್. ಜಯರಾಂ, ಎಲ್.ಜಗದೀಶ್, ಕೆ.ದೇವರಾಜು, ಕಾರ್ಯದರ್ಶಿ ಕೆ.ಸುರೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X